• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜೈಲಿಗೆ ಹೋಗಲು ಅಪರಾಧಿಗಳು ಭಯಪಡುವ ಕಾಲ ಬಂದಿದೆ – ಸಿಎಂ ಯೋಗಿ

Tulunadu News Posted On April 6, 2024
0


0
Shares
  • Share On Facebook
  • Tweet It

ಉತ್ತರ ಪ್ರದೇಶದಲ್ಲಿ ಈ ಹಿಂದೆ ಜಾಮೀನು ಸಿಕ್ಕಿ ಪರಾರಿಯಾಗುತ್ತಿದ್ದವರು ಈಗ ತಾವಾಗಿಯೇ ಶರಣಾಗುತ್ತಿದ್ದಾರೆ. ಅಪರಾಧಿಕ ಕೃತ್ಯಗಳಲ್ಲಿ ತೊಡಗಿದವರು ಆರಾಮವಾಗಿ ಸುತ್ತಾಡಲು ಭಯಪಡುವುದು ಮಾತ್ರ ಅಲ್ಲ, ಜೈಲಿಗೆ ಹೋಗಲು ಕೂಡ ಭಯಪಡುತ್ತಿದ್ದಾರೆ. ತಾವು ಇನ್ನು ಮುಂದೆ ಯಾವುದೇ ರೀತಿಯ ಅಪರಾಧ ಮಾಡುವುದಿಲ್ಲ. ನಮ್ಮ ಪ್ರಾಣ ಉಳಿದರೆ ನಾವು ಯಾವುದಾದರೂ ಉತ್ಪನ್ನಗಳನ್ನು ಮಾರಿ ಜೀವನ ಸಾಗಿಸುತ್ತೇವೆ ಎನ್ನುವ ಸಂದೇಶ ಇರುವ ಬೋರ್ಡ್ ಹಿಡಿದು ಬರುತ್ತಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದರು.
ಅವರು ಶಂಸಾಬಾದ್ ನಲ್ಲಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಪರ ಮತ ಪ್ರಚಾರ ನಡೆಸಿ ಮಾತನಾಡುತ್ತಿದ್ದರು. ಯಾವುದೇ ರೀತಿಯ ಅಪರಾಧಿಕ ಕೃತ್ಯಗಳನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಕ್ರಿಮಿನಲ್ ವ್ಯಕ್ತಿಗಳು ಅಪರಾಧವನ್ನು ನಿಲ್ಲಿಸಬೇಕು ಅಥವಾ ಅದಕ್ಕೆ ತಕ್ಕುದಾದ ಬೆಲೆಯನ್ನು ಪಾವತಿಸಲು ಸಿದ್ಧರಾಗಬೇಕು. ಈಗ ಬಹುತೇಕ ಕ್ರಿಮಿನಲ್ ಗಳು ಜೈಲಿಗೆ ಹೋಗಲು ಕೂಡ ಭಯಪಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

2017 ರ ಮೊದಲು ಪೊಲೀಸ್ ಠಾಣೆಗಳು ಕತ್ತಲಾದ ನಂತರ ಬೀಗ ಹಾಕುತ್ತಿದ್ದವು. ಸಾಮಾನ್ಯ ಜನರು ಭಯಭೀತಿಯಿಂದ ಜೀವಿಸುತ್ತಿದ್ದರು. ಉತ್ತರ ಪ್ರದೇಶದಲ್ಲಿ ಭಾರತೀಯ ಜನತಾ ಪಾರ್ಟಿಯ ಸರಕಾರ ಬಂದ ಬಳಿಕವೂ ನಮಗೆ ಏನೂ ತೊಂದರೆ ಇಲ್ಲ ಎಂದು ಅಪರಾಧಿಗಳು ಭಾವಿಸಿದ್ದರು. ಆದರೆ ಅದಕ್ಕೆ ನಮ್ಮ ಸರಕಾರ ಅವಕಾಶ ನೀಡುವುದಿಲ್ಲ. ಕ್ರಿಮಿನಲ್ ಗಳು ಸುಧಾರಣೆಯಾಗಬೇಕು ಅಥವಾ ಅವರು ಬೆಲೆ ತೆರುವ ಆಯ್ಕೆಯನ್ನು ನೀಡಲಾಗಿದೆ ಎಂದು ಯೋಗಿ ಹೇಳಿದರು.

ಹಿಂದಿನಂತೆ ಈಗ ಗಲಭೆ, ಕರ್ಫ್ಯೂ ನಡೆಯುವುದಿಲ್ಲ. ಹಬ್ಬಗಳು, ಉತ್ಸವಗಳು ಚೆಂದ ರೀತಿಯಲ್ಲಿ ನಡೆಯುತ್ತಿವೆ. ಇದು ಮೋದಿಯ ಗ್ಯಾರಂಟಿ ಎಂದು ಅವರು ತಿಳಿಸಿದರು.

0
Shares
  • Share On Facebook
  • Tweet It




Trending Now
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
  • Popular Posts

    • 1
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • 2
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು

  • Privacy Policy
  • Contact
© Tulunadu Infomedia.

Press enter/return to begin your search