• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜೈಲಿಗೆ ಹೋಗಲು ಅಪರಾಧಿಗಳು ಭಯಪಡುವ ಕಾಲ ಬಂದಿದೆ – ಸಿಎಂ ಯೋಗಿ

Tulunadu News Posted On April 6, 2024
0


0
Shares
  • Share On Facebook
  • Tweet It

ಉತ್ತರ ಪ್ರದೇಶದಲ್ಲಿ ಈ ಹಿಂದೆ ಜಾಮೀನು ಸಿಕ್ಕಿ ಪರಾರಿಯಾಗುತ್ತಿದ್ದವರು ಈಗ ತಾವಾಗಿಯೇ ಶರಣಾಗುತ್ತಿದ್ದಾರೆ. ಅಪರಾಧಿಕ ಕೃತ್ಯಗಳಲ್ಲಿ ತೊಡಗಿದವರು ಆರಾಮವಾಗಿ ಸುತ್ತಾಡಲು ಭಯಪಡುವುದು ಮಾತ್ರ ಅಲ್ಲ, ಜೈಲಿಗೆ ಹೋಗಲು ಕೂಡ ಭಯಪಡುತ್ತಿದ್ದಾರೆ. ತಾವು ಇನ್ನು ಮುಂದೆ ಯಾವುದೇ ರೀತಿಯ ಅಪರಾಧ ಮಾಡುವುದಿಲ್ಲ. ನಮ್ಮ ಪ್ರಾಣ ಉಳಿದರೆ ನಾವು ಯಾವುದಾದರೂ ಉತ್ಪನ್ನಗಳನ್ನು ಮಾರಿ ಜೀವನ ಸಾಗಿಸುತ್ತೇವೆ ಎನ್ನುವ ಸಂದೇಶ ಇರುವ ಬೋರ್ಡ್ ಹಿಡಿದು ಬರುತ್ತಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದರು.
ಅವರು ಶಂಸಾಬಾದ್ ನಲ್ಲಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಪರ ಮತ ಪ್ರಚಾರ ನಡೆಸಿ ಮಾತನಾಡುತ್ತಿದ್ದರು. ಯಾವುದೇ ರೀತಿಯ ಅಪರಾಧಿಕ ಕೃತ್ಯಗಳನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಕ್ರಿಮಿನಲ್ ವ್ಯಕ್ತಿಗಳು ಅಪರಾಧವನ್ನು ನಿಲ್ಲಿಸಬೇಕು ಅಥವಾ ಅದಕ್ಕೆ ತಕ್ಕುದಾದ ಬೆಲೆಯನ್ನು ಪಾವತಿಸಲು ಸಿದ್ಧರಾಗಬೇಕು. ಈಗ ಬಹುತೇಕ ಕ್ರಿಮಿನಲ್ ಗಳು ಜೈಲಿಗೆ ಹೋಗಲು ಕೂಡ ಭಯಪಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

2017 ರ ಮೊದಲು ಪೊಲೀಸ್ ಠಾಣೆಗಳು ಕತ್ತಲಾದ ನಂತರ ಬೀಗ ಹಾಕುತ್ತಿದ್ದವು. ಸಾಮಾನ್ಯ ಜನರು ಭಯಭೀತಿಯಿಂದ ಜೀವಿಸುತ್ತಿದ್ದರು. ಉತ್ತರ ಪ್ರದೇಶದಲ್ಲಿ ಭಾರತೀಯ ಜನತಾ ಪಾರ್ಟಿಯ ಸರಕಾರ ಬಂದ ಬಳಿಕವೂ ನಮಗೆ ಏನೂ ತೊಂದರೆ ಇಲ್ಲ ಎಂದು ಅಪರಾಧಿಗಳು ಭಾವಿಸಿದ್ದರು. ಆದರೆ ಅದಕ್ಕೆ ನಮ್ಮ ಸರಕಾರ ಅವಕಾಶ ನೀಡುವುದಿಲ್ಲ. ಕ್ರಿಮಿನಲ್ ಗಳು ಸುಧಾರಣೆಯಾಗಬೇಕು ಅಥವಾ ಅವರು ಬೆಲೆ ತೆರುವ ಆಯ್ಕೆಯನ್ನು ನೀಡಲಾಗಿದೆ ಎಂದು ಯೋಗಿ ಹೇಳಿದರು.

ಹಿಂದಿನಂತೆ ಈಗ ಗಲಭೆ, ಕರ್ಫ್ಯೂ ನಡೆಯುವುದಿಲ್ಲ. ಹಬ್ಬಗಳು, ಉತ್ಸವಗಳು ಚೆಂದ ರೀತಿಯಲ್ಲಿ ನಡೆಯುತ್ತಿವೆ. ಇದು ಮೋದಿಯ ಗ್ಯಾರಂಟಿ ಎಂದು ಅವರು ತಿಳಿಸಿದರು.

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search