• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸುಶಾಂತ್ ಆತ್ಮ ಇದೆ ಎನ್ನುವ ವದಂತಿ ತಳ್ಳಿ ಹಾಕಿ ಮನೆ ಖರೀದಿ ಮಾಡಿದ್ಲಾ ಚೆಲುವೆ?

Tulunadu News Posted On April 6, 2024
0


0
Shares
  • Share On Facebook
  • Tweet It

ಬಾಲಿವುಡ್ ನಲ್ಲಿ ಕಿರು ಅವಧಿಯಲ್ಲಿಯೇ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದ ಸುಶಾಂತ್ ಸಿಂಗ್ ರಾಜಪೂತ್ ಅದೆಷ್ಟೋ ಯುವತಿಯರ ಹೃದಯ ಕದ್ದದ್ದು ಸುಳ್ಳಲ್ಲ. ಆತನ ಮೋಹಕ ನಗೆಗೆ ಬೇಸ್ತು ಬಿದ್ದಿದ್ದ ನಟಿಯರು ಕಡಿಮೆ ಏನಲ್ಲ. ಅದರೆ 34 ರ ಹರೆಯದಲ್ಲಿದ್ದ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಸುಶಾಂತ್ ಬಾಲಿವುಡ್ ಪ್ರಿಯರಿಗೆ ಶಾಕ್ ನೀಡಿದ್ದರು. ಎಂ.ಎಸ್.ಧೋನಿ ಅನ್ ಟೋಲ್ಡ್ ಸ್ಟೋರಿ, ಕೇದರಾನಾಥ್, ಚಿಚ್ಚೋರೆ ಸಹಿತ ಕೆಲವು ಸಿನೆಮಾಗಳಲ್ಲಿ ಅವರು ನಟಿಸಿದ್ದಾರೆ. ಬಾಲಿವುಡ್ ಅಂಗಳದಲ್ಲಿ ನಡೆದ ರಾಜಕೀಯದಿಂದ ಈ ಉದಯೋನ್ಮುಖ ನಟ ಬೇಸರಗೊಂಡಿದ್ದರು ಎಂದು ಹೇಳಲಾಗುತ್ತಿತ್ತು. ಅದರಿಂದ ನೊಂದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಇನ್ನು ಸುಶಾಂತ್ ಸಾಯುವ ವಾರದ ಮೊದಲು ಅವರ ಮ್ಯಾನೇಜರ್ ದಿಶಾ ಸಾಲಿಯಾನ್ ಕೂಡ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಳು. ಈ ಬಗ್ಗೆ ಸಾಕಷ್ಟು ಚರ್ಚೆ, ತನಿಖೆ, ವಿಚಾರಣೆಗಳು ನಡೆದಿವೆ. ಅದೆಲ್ಲವೂ ಈಗ ನಿಧಾನವಾಗಿ ಜನಮಾನಸದಿಂದ ಮರೆಯಾಗುವ ಹೊತ್ತಿನಲ್ಲಿ ಸುಶಾಂತ್ ಆತ್ಮಹತ್ಯೆ ಮಾಡಿಕೊಂಡ ಮನೆ ಮತ್ತೆ ಸುದ್ದಿಯಾಗಿದೆ.

ಸುಶಾಂತ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿದ್ದ ಮನೆಯನ್ನು ಖರೀದಿಸಿ ನಟಿ ಆದಾ ಶರ್ಮಾ ಅಗಲಿದ ನಟ ನೆನಪು ತಮ್ಮ ಹೃದಯದಲ್ಲಿ ಶಾಶ್ವತವಾಗಿ ಇರುವ ಸಂದೇಶವನ್ನು ನೀಡಿದ್ದಾರೆ.

ಯುವ ನಾಯಕನಟ ಸುಶಾಂತ್ ಸಿಂಗ್ ಮುಂಬೈನ ಮೋಂಟದ ಬ್ಲ್ಯಾಂಕ್ ವಸತಿ ಸಂಕೀರ್ಣದಲ್ಲಿ ಹಲವು ವರ್ಷಗಳ ಕಾಲ ವಾಸವಾಗಿದ್ದರು. 2020 ಜೂನ್ 14 ರಂದು ಅದೇ ಅಪಾರ್ಟ್ ಮೆಂಟಿನ ರೂಂನಲ್ಲಿ ಅವರು ಆತ್ಮಹತ್ಯೆಗೆ ಶರಣಾಗಿದ್ದರು. ಅದರ ಬಳಿಕ ಸುಶಾಂತ್ ಸಿಂಗ್ ಆತ್ಮ ಅಲ್ಲಿದೆ ಎಂದು ಸುದ್ದಿ ಹಬ್ಬಿದ ಕಾರಣ ಯಾರೂ ಅಲ್ಲಿ ವಾಸ ಮಾಡಲು ಬರುತ್ತಿರಲಿಲ್ಲ. ಖಾಲಿ ಬಿದ್ದಿದ್ದ ಆ ಅಪಾರ್ಟ್ ಮೆಂಟನ್ನು ಈಗ ಕೇರಳ ಸ್ಟೋರಿ ಖ್ಯಾತಿಯ ಅದಾ ಶರ್ಮಾ ಖರೀದಿಸಿರುವ ಸಂಗತಿ ಬೆಳಕಿಗೆ ಬಂದಿದೆ. ಸಮುದ್ರಕ್ಕೆ ಮುಖ ಮಾಡಿರುವ ಆ ಅಪಾರ್ಟ್ ಮೆಂಟ್ 2500 ಸ್ಕ್ವೇರ್ ಫೀಟ್ ವಿಸ್ತ್ರೀರ್ಣ ಹೊಂದಿದೆ.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 3
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 4
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 5
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search