• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಓವೈಸಿ ವಿರುದ್ಧ ಬಿಜೆಪಿ ಅಭ್ಯರ್ಥಿಗೆ ವಿಐಪಿ ಭದ್ರತೆ!

Tulunadu News Posted On April 6, 2024
0


0
Shares
  • Share On Facebook
  • Tweet It

ಹೈದ್ರಾಬಾದ್ ಲೋಕಸಭಾ ಕ್ಷೇತ್ರ ಅಸಾವುದ್ದೀನ್ ಓವೈಸಿಯ ಬಲಿಷ್ಟವಾದ ಕ್ಷೇತ್ರ. ಇಲ್ಲಿ ನಾಲ್ಕು ದಶಕಗಳಿಂದ ಆತನ ಬಿಗಿಹಿಡಿತವಿದೆ. ಇಂತಹ ಕ್ಷೇತ್ರದಲ್ಲಿ ಸನಾತನ ಸಿಂಹಿಣಿಯನ್ನು ಪ್ರಥಮ ಬಾರಿಗೆ ಭಾರತೀಯ ಜನತಾ ಪಾರ್ಟಿ ಕಣಕ್ಕೆ ಇಳಿಸಿದೆ. ಅವರ ಹೆಸರು ಕೊಂಪೆಲ್ಲಾ ಮಾಧವಿ ಲತಾ.
ತಮ್ಮ ಪ್ರಖಂಡ ನಡೆಯಿಂದ ಸುದ್ದಿಯಲ್ಲಿರುವ ಮಾಧವಿ ಲತಾ ಈ ಬಾರಿ ಓವೈಸಿಯನ್ನು ಎದುರಿಸಲಿದ್ದಾರೆ. ಆದರೆ ಇದು ಅಂದುಕೊಂಡಷ್ಟು ಸುಲಭವಲ್ಲ. ಯಾಕೆಂದರೆ ಓವೈಸಿಯ ಬೆಂಬಲಿಗರು ಯಾವ ಕಾರಣಕ್ಕೂ ಆಕೆಯ ಪ್ರಚಾರ ಕಾರ್ಯ ಯಶಸ್ವಿಯಾಗಲು ಬಿಡುವ ಸಾಧ್ಯತೆ ಇಲ್ಲ. ಈಗ ಕೇಂದ್ರ ಗುಪ್ತಚರ ಇಲಾಖೆಗೆ ಮಾಹಿತಿಗಳು ಬಂದಿರುವ ಹಿನ್ನಲೆಯಲ್ಲಿ ಕೇಂದ್ರ ಸರಕಾರದಿಂದ ಮಾಧವಿ ಲತಾ ಅವರಿಗೆ ವಿಐಪಿ ಭದ್ರತೆ ಒದಗಿಸಲಾಗಿದೆ. ಆಕೆಯನ್ನು 11 ಸಿಆರ್ ಪಿಎಫ್ ಪಡೆ ಸಿಬ್ಬಂದಿ ಕಾವಲು ಕಾಯಲಿದ್ದಾರೆ.

ಓವೈಸಿ ವಿರುದ್ಧ ಸತತ ಹೋರಾಟಗಳನ್ನು ಸಂಘಟಿಸುತ್ತಿರುವ ಮಾಧವಿ ಲತಾ ಅವರಿಂದ ಈ ಬಾರಿ ಏನಾದರೂ ಪವಾಡ ಸಂಭವಿಸಬಹುದು ಎಂದು ಬಿಜೆಪಿ ಮುಖಂಡರು ನಂಬಿದ್ದಾರೆ. ಹೈದ್ರಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಖಾತೆ ತೆರೆದರೆ ಓವೈಸಿಯ ಸಂಸತ್ ಪ್ರವೇಶ ಕೂಡ ಮುಗಿದಂತೆ. ಆದರೆ ಅಲ್ಪಸಂಖ್ಯಾತ ಬಾಹುಳ್ಯ ಉಳ್ಳ ಹೈದ್ರಾಬಾದಿನಲ್ಲಿ ಮಾಧವಿ ಲತಾ ಅವರು ತ್ರಿವಳಿ ತಲಾಖ್ ವಿರುದ್ಧ ಬಿಜೆಪಿ ನಡೆಸಿದ ಪ್ರಚಾರದ ನೇತೃತ್ವ ವಹಿಸಿದ್ದರು. ಈ ಮೂಲಕ ಅಲ್ಪಸಂಖ್ಯಾತ ಮಹಿಳೆಯರ ಮನ ಗೆದ್ದಿರುವ ಸಾಧ್ಯತೆ ಕೂಡ ಇದೆ. ಮಾಧವಿ ಲತಾ ಹೈದ್ರಾಬಾದಿನ ವಿರಿಂಚಿ ಆಸ್ಪತ್ರೆಯ ಮುಖ್ಯಸ್ಥೆ ಹಾಗೂ ವೃತ್ತಿಪರ ಭರತನಾಟ್ಯ ಕಲಾವಿದೆ ಆಗಿದ್ದಾರೆ.

0
Shares
  • Share On Facebook
  • Tweet It




Trending Now
ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
Tulunadu News October 22, 2025
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
Tulunadu News October 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
  • Popular Posts

    • 1
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 2
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 3
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search