• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಓವೈಸಿ ವಿರುದ್ಧ ಬಿಜೆಪಿ ಅಭ್ಯರ್ಥಿಗೆ ವಿಐಪಿ ಭದ್ರತೆ!

Tulunadu News Posted On April 6, 2024
0


0
Shares
  • Share On Facebook
  • Tweet It

ಹೈದ್ರಾಬಾದ್ ಲೋಕಸಭಾ ಕ್ಷೇತ್ರ ಅಸಾವುದ್ದೀನ್ ಓವೈಸಿಯ ಬಲಿಷ್ಟವಾದ ಕ್ಷೇತ್ರ. ಇಲ್ಲಿ ನಾಲ್ಕು ದಶಕಗಳಿಂದ ಆತನ ಬಿಗಿಹಿಡಿತವಿದೆ. ಇಂತಹ ಕ್ಷೇತ್ರದಲ್ಲಿ ಸನಾತನ ಸಿಂಹಿಣಿಯನ್ನು ಪ್ರಥಮ ಬಾರಿಗೆ ಭಾರತೀಯ ಜನತಾ ಪಾರ್ಟಿ ಕಣಕ್ಕೆ ಇಳಿಸಿದೆ. ಅವರ ಹೆಸರು ಕೊಂಪೆಲ್ಲಾ ಮಾಧವಿ ಲತಾ.
ತಮ್ಮ ಪ್ರಖಂಡ ನಡೆಯಿಂದ ಸುದ್ದಿಯಲ್ಲಿರುವ ಮಾಧವಿ ಲತಾ ಈ ಬಾರಿ ಓವೈಸಿಯನ್ನು ಎದುರಿಸಲಿದ್ದಾರೆ. ಆದರೆ ಇದು ಅಂದುಕೊಂಡಷ್ಟು ಸುಲಭವಲ್ಲ. ಯಾಕೆಂದರೆ ಓವೈಸಿಯ ಬೆಂಬಲಿಗರು ಯಾವ ಕಾರಣಕ್ಕೂ ಆಕೆಯ ಪ್ರಚಾರ ಕಾರ್ಯ ಯಶಸ್ವಿಯಾಗಲು ಬಿಡುವ ಸಾಧ್ಯತೆ ಇಲ್ಲ. ಈಗ ಕೇಂದ್ರ ಗುಪ್ತಚರ ಇಲಾಖೆಗೆ ಮಾಹಿತಿಗಳು ಬಂದಿರುವ ಹಿನ್ನಲೆಯಲ್ಲಿ ಕೇಂದ್ರ ಸರಕಾರದಿಂದ ಮಾಧವಿ ಲತಾ ಅವರಿಗೆ ವಿಐಪಿ ಭದ್ರತೆ ಒದಗಿಸಲಾಗಿದೆ. ಆಕೆಯನ್ನು 11 ಸಿಆರ್ ಪಿಎಫ್ ಪಡೆ ಸಿಬ್ಬಂದಿ ಕಾವಲು ಕಾಯಲಿದ್ದಾರೆ.

ಓವೈಸಿ ವಿರುದ್ಧ ಸತತ ಹೋರಾಟಗಳನ್ನು ಸಂಘಟಿಸುತ್ತಿರುವ ಮಾಧವಿ ಲತಾ ಅವರಿಂದ ಈ ಬಾರಿ ಏನಾದರೂ ಪವಾಡ ಸಂಭವಿಸಬಹುದು ಎಂದು ಬಿಜೆಪಿ ಮುಖಂಡರು ನಂಬಿದ್ದಾರೆ. ಹೈದ್ರಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಖಾತೆ ತೆರೆದರೆ ಓವೈಸಿಯ ಸಂಸತ್ ಪ್ರವೇಶ ಕೂಡ ಮುಗಿದಂತೆ. ಆದರೆ ಅಲ್ಪಸಂಖ್ಯಾತ ಬಾಹುಳ್ಯ ಉಳ್ಳ ಹೈದ್ರಾಬಾದಿನಲ್ಲಿ ಮಾಧವಿ ಲತಾ ಅವರು ತ್ರಿವಳಿ ತಲಾಖ್ ವಿರುದ್ಧ ಬಿಜೆಪಿ ನಡೆಸಿದ ಪ್ರಚಾರದ ನೇತೃತ್ವ ವಹಿಸಿದ್ದರು. ಈ ಮೂಲಕ ಅಲ್ಪಸಂಖ್ಯಾತ ಮಹಿಳೆಯರ ಮನ ಗೆದ್ದಿರುವ ಸಾಧ್ಯತೆ ಕೂಡ ಇದೆ. ಮಾಧವಿ ಲತಾ ಹೈದ್ರಾಬಾದಿನ ವಿರಿಂಚಿ ಆಸ್ಪತ್ರೆಯ ಮುಖ್ಯಸ್ಥೆ ಹಾಗೂ ವೃತ್ತಿಪರ ಭರತನಾಟ್ಯ ಕಲಾವಿದೆ ಆಗಿದ್ದಾರೆ.

0
Shares
  • Share On Facebook
  • Tweet It




Trending Now
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
  • Popular Posts

    • 1
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 2
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 3
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search