• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಓವೈಸಿ ವಿರುದ್ಧ ಬಿಜೆಪಿ ಅಭ್ಯರ್ಥಿಗೆ ವಿಐಪಿ ಭದ್ರತೆ!

Tulunadu News Posted On April 6, 2024
0


0
Shares
  • Share On Facebook
  • Tweet It

ಹೈದ್ರಾಬಾದ್ ಲೋಕಸಭಾ ಕ್ಷೇತ್ರ ಅಸಾವುದ್ದೀನ್ ಓವೈಸಿಯ ಬಲಿಷ್ಟವಾದ ಕ್ಷೇತ್ರ. ಇಲ್ಲಿ ನಾಲ್ಕು ದಶಕಗಳಿಂದ ಆತನ ಬಿಗಿಹಿಡಿತವಿದೆ. ಇಂತಹ ಕ್ಷೇತ್ರದಲ್ಲಿ ಸನಾತನ ಸಿಂಹಿಣಿಯನ್ನು ಪ್ರಥಮ ಬಾರಿಗೆ ಭಾರತೀಯ ಜನತಾ ಪಾರ್ಟಿ ಕಣಕ್ಕೆ ಇಳಿಸಿದೆ. ಅವರ ಹೆಸರು ಕೊಂಪೆಲ್ಲಾ ಮಾಧವಿ ಲತಾ.
ತಮ್ಮ ಪ್ರಖಂಡ ನಡೆಯಿಂದ ಸುದ್ದಿಯಲ್ಲಿರುವ ಮಾಧವಿ ಲತಾ ಈ ಬಾರಿ ಓವೈಸಿಯನ್ನು ಎದುರಿಸಲಿದ್ದಾರೆ. ಆದರೆ ಇದು ಅಂದುಕೊಂಡಷ್ಟು ಸುಲಭವಲ್ಲ. ಯಾಕೆಂದರೆ ಓವೈಸಿಯ ಬೆಂಬಲಿಗರು ಯಾವ ಕಾರಣಕ್ಕೂ ಆಕೆಯ ಪ್ರಚಾರ ಕಾರ್ಯ ಯಶಸ್ವಿಯಾಗಲು ಬಿಡುವ ಸಾಧ್ಯತೆ ಇಲ್ಲ. ಈಗ ಕೇಂದ್ರ ಗುಪ್ತಚರ ಇಲಾಖೆಗೆ ಮಾಹಿತಿಗಳು ಬಂದಿರುವ ಹಿನ್ನಲೆಯಲ್ಲಿ ಕೇಂದ್ರ ಸರಕಾರದಿಂದ ಮಾಧವಿ ಲತಾ ಅವರಿಗೆ ವಿಐಪಿ ಭದ್ರತೆ ಒದಗಿಸಲಾಗಿದೆ. ಆಕೆಯನ್ನು 11 ಸಿಆರ್ ಪಿಎಫ್ ಪಡೆ ಸಿಬ್ಬಂದಿ ಕಾವಲು ಕಾಯಲಿದ್ದಾರೆ.

ಓವೈಸಿ ವಿರುದ್ಧ ಸತತ ಹೋರಾಟಗಳನ್ನು ಸಂಘಟಿಸುತ್ತಿರುವ ಮಾಧವಿ ಲತಾ ಅವರಿಂದ ಈ ಬಾರಿ ಏನಾದರೂ ಪವಾಡ ಸಂಭವಿಸಬಹುದು ಎಂದು ಬಿಜೆಪಿ ಮುಖಂಡರು ನಂಬಿದ್ದಾರೆ. ಹೈದ್ರಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಖಾತೆ ತೆರೆದರೆ ಓವೈಸಿಯ ಸಂಸತ್ ಪ್ರವೇಶ ಕೂಡ ಮುಗಿದಂತೆ. ಆದರೆ ಅಲ್ಪಸಂಖ್ಯಾತ ಬಾಹುಳ್ಯ ಉಳ್ಳ ಹೈದ್ರಾಬಾದಿನಲ್ಲಿ ಮಾಧವಿ ಲತಾ ಅವರು ತ್ರಿವಳಿ ತಲಾಖ್ ವಿರುದ್ಧ ಬಿಜೆಪಿ ನಡೆಸಿದ ಪ್ರಚಾರದ ನೇತೃತ್ವ ವಹಿಸಿದ್ದರು. ಈ ಮೂಲಕ ಅಲ್ಪಸಂಖ್ಯಾತ ಮಹಿಳೆಯರ ಮನ ಗೆದ್ದಿರುವ ಸಾಧ್ಯತೆ ಕೂಡ ಇದೆ. ಮಾಧವಿ ಲತಾ ಹೈದ್ರಾಬಾದಿನ ವಿರಿಂಚಿ ಆಸ್ಪತ್ರೆಯ ಮುಖ್ಯಸ್ಥೆ ಹಾಗೂ ವೃತ್ತಿಪರ ಭರತನಾಟ್ಯ ಕಲಾವಿದೆ ಆಗಿದ್ದಾರೆ.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search