• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಓವೈಸಿ ವಿರುದ್ಧ ಬಿಜೆಪಿ ಅಭ್ಯರ್ಥಿಗೆ ವಿಐಪಿ ಭದ್ರತೆ!

Tulunadu News Posted On April 6, 2024


  • Share On Facebook
  • Tweet It

ಹೈದ್ರಾಬಾದ್ ಲೋಕಸಭಾ ಕ್ಷೇತ್ರ ಅಸಾವುದ್ದೀನ್ ಓವೈಸಿಯ ಬಲಿಷ್ಟವಾದ ಕ್ಷೇತ್ರ. ಇಲ್ಲಿ ನಾಲ್ಕು ದಶಕಗಳಿಂದ ಆತನ ಬಿಗಿಹಿಡಿತವಿದೆ. ಇಂತಹ ಕ್ಷೇತ್ರದಲ್ಲಿ ಸನಾತನ ಸಿಂಹಿಣಿಯನ್ನು ಪ್ರಥಮ ಬಾರಿಗೆ ಭಾರತೀಯ ಜನತಾ ಪಾರ್ಟಿ ಕಣಕ್ಕೆ ಇಳಿಸಿದೆ. ಅವರ ಹೆಸರು ಕೊಂಪೆಲ್ಲಾ ಮಾಧವಿ ಲತಾ.
ತಮ್ಮ ಪ್ರಖಂಡ ನಡೆಯಿಂದ ಸುದ್ದಿಯಲ್ಲಿರುವ ಮಾಧವಿ ಲತಾ ಈ ಬಾರಿ ಓವೈಸಿಯನ್ನು ಎದುರಿಸಲಿದ್ದಾರೆ. ಆದರೆ ಇದು ಅಂದುಕೊಂಡಷ್ಟು ಸುಲಭವಲ್ಲ. ಯಾಕೆಂದರೆ ಓವೈಸಿಯ ಬೆಂಬಲಿಗರು ಯಾವ ಕಾರಣಕ್ಕೂ ಆಕೆಯ ಪ್ರಚಾರ ಕಾರ್ಯ ಯಶಸ್ವಿಯಾಗಲು ಬಿಡುವ ಸಾಧ್ಯತೆ ಇಲ್ಲ. ಈಗ ಕೇಂದ್ರ ಗುಪ್ತಚರ ಇಲಾಖೆಗೆ ಮಾಹಿತಿಗಳು ಬಂದಿರುವ ಹಿನ್ನಲೆಯಲ್ಲಿ ಕೇಂದ್ರ ಸರಕಾರದಿಂದ ಮಾಧವಿ ಲತಾ ಅವರಿಗೆ ವಿಐಪಿ ಭದ್ರತೆ ಒದಗಿಸಲಾಗಿದೆ. ಆಕೆಯನ್ನು 11 ಸಿಆರ್ ಪಿಎಫ್ ಪಡೆ ಸಿಬ್ಬಂದಿ ಕಾವಲು ಕಾಯಲಿದ್ದಾರೆ.

ಓವೈಸಿ ವಿರುದ್ಧ ಸತತ ಹೋರಾಟಗಳನ್ನು ಸಂಘಟಿಸುತ್ತಿರುವ ಮಾಧವಿ ಲತಾ ಅವರಿಂದ ಈ ಬಾರಿ ಏನಾದರೂ ಪವಾಡ ಸಂಭವಿಸಬಹುದು ಎಂದು ಬಿಜೆಪಿ ಮುಖಂಡರು ನಂಬಿದ್ದಾರೆ. ಹೈದ್ರಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಖಾತೆ ತೆರೆದರೆ ಓವೈಸಿಯ ಸಂಸತ್ ಪ್ರವೇಶ ಕೂಡ ಮುಗಿದಂತೆ. ಆದರೆ ಅಲ್ಪಸಂಖ್ಯಾತ ಬಾಹುಳ್ಯ ಉಳ್ಳ ಹೈದ್ರಾಬಾದಿನಲ್ಲಿ ಮಾಧವಿ ಲತಾ ಅವರು ತ್ರಿವಳಿ ತಲಾಖ್ ವಿರುದ್ಧ ಬಿಜೆಪಿ ನಡೆಸಿದ ಪ್ರಚಾರದ ನೇತೃತ್ವ ವಹಿಸಿದ್ದರು. ಈ ಮೂಲಕ ಅಲ್ಪಸಂಖ್ಯಾತ ಮಹಿಳೆಯರ ಮನ ಗೆದ್ದಿರುವ ಸಾಧ್ಯತೆ ಕೂಡ ಇದೆ. ಮಾಧವಿ ಲತಾ ಹೈದ್ರಾಬಾದಿನ ವಿರಿಂಚಿ ಆಸ್ಪತ್ರೆಯ ಮುಖ್ಯಸ್ಥೆ ಹಾಗೂ ವೃತ್ತಿಪರ ಭರತನಾಟ್ಯ ಕಲಾವಿದೆ ಆಗಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search