• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಓವೈಸಿ ವಿರುದ್ಧ ಬಿಜೆಪಿ ಅಭ್ಯರ್ಥಿಗೆ ವಿಐಪಿ ಭದ್ರತೆ!

Tulunadu News Posted On April 6, 2024
0


0
Shares
  • Share On Facebook
  • Tweet It

ಹೈದ್ರಾಬಾದ್ ಲೋಕಸಭಾ ಕ್ಷೇತ್ರ ಅಸಾವುದ್ದೀನ್ ಓವೈಸಿಯ ಬಲಿಷ್ಟವಾದ ಕ್ಷೇತ್ರ. ಇಲ್ಲಿ ನಾಲ್ಕು ದಶಕಗಳಿಂದ ಆತನ ಬಿಗಿಹಿಡಿತವಿದೆ. ಇಂತಹ ಕ್ಷೇತ್ರದಲ್ಲಿ ಸನಾತನ ಸಿಂಹಿಣಿಯನ್ನು ಪ್ರಥಮ ಬಾರಿಗೆ ಭಾರತೀಯ ಜನತಾ ಪಾರ್ಟಿ ಕಣಕ್ಕೆ ಇಳಿಸಿದೆ. ಅವರ ಹೆಸರು ಕೊಂಪೆಲ್ಲಾ ಮಾಧವಿ ಲತಾ.
ತಮ್ಮ ಪ್ರಖಂಡ ನಡೆಯಿಂದ ಸುದ್ದಿಯಲ್ಲಿರುವ ಮಾಧವಿ ಲತಾ ಈ ಬಾರಿ ಓವೈಸಿಯನ್ನು ಎದುರಿಸಲಿದ್ದಾರೆ. ಆದರೆ ಇದು ಅಂದುಕೊಂಡಷ್ಟು ಸುಲಭವಲ್ಲ. ಯಾಕೆಂದರೆ ಓವೈಸಿಯ ಬೆಂಬಲಿಗರು ಯಾವ ಕಾರಣಕ್ಕೂ ಆಕೆಯ ಪ್ರಚಾರ ಕಾರ್ಯ ಯಶಸ್ವಿಯಾಗಲು ಬಿಡುವ ಸಾಧ್ಯತೆ ಇಲ್ಲ. ಈಗ ಕೇಂದ್ರ ಗುಪ್ತಚರ ಇಲಾಖೆಗೆ ಮಾಹಿತಿಗಳು ಬಂದಿರುವ ಹಿನ್ನಲೆಯಲ್ಲಿ ಕೇಂದ್ರ ಸರಕಾರದಿಂದ ಮಾಧವಿ ಲತಾ ಅವರಿಗೆ ವಿಐಪಿ ಭದ್ರತೆ ಒದಗಿಸಲಾಗಿದೆ. ಆಕೆಯನ್ನು 11 ಸಿಆರ್ ಪಿಎಫ್ ಪಡೆ ಸಿಬ್ಬಂದಿ ಕಾವಲು ಕಾಯಲಿದ್ದಾರೆ.

ಓವೈಸಿ ವಿರುದ್ಧ ಸತತ ಹೋರಾಟಗಳನ್ನು ಸಂಘಟಿಸುತ್ತಿರುವ ಮಾಧವಿ ಲತಾ ಅವರಿಂದ ಈ ಬಾರಿ ಏನಾದರೂ ಪವಾಡ ಸಂಭವಿಸಬಹುದು ಎಂದು ಬಿಜೆಪಿ ಮುಖಂಡರು ನಂಬಿದ್ದಾರೆ. ಹೈದ್ರಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಖಾತೆ ತೆರೆದರೆ ಓವೈಸಿಯ ಸಂಸತ್ ಪ್ರವೇಶ ಕೂಡ ಮುಗಿದಂತೆ. ಆದರೆ ಅಲ್ಪಸಂಖ್ಯಾತ ಬಾಹುಳ್ಯ ಉಳ್ಳ ಹೈದ್ರಾಬಾದಿನಲ್ಲಿ ಮಾಧವಿ ಲತಾ ಅವರು ತ್ರಿವಳಿ ತಲಾಖ್ ವಿರುದ್ಧ ಬಿಜೆಪಿ ನಡೆಸಿದ ಪ್ರಚಾರದ ನೇತೃತ್ವ ವಹಿಸಿದ್ದರು. ಈ ಮೂಲಕ ಅಲ್ಪಸಂಖ್ಯಾತ ಮಹಿಳೆಯರ ಮನ ಗೆದ್ದಿರುವ ಸಾಧ್ಯತೆ ಕೂಡ ಇದೆ. ಮಾಧವಿ ಲತಾ ಹೈದ್ರಾಬಾದಿನ ವಿರಿಂಚಿ ಆಸ್ಪತ್ರೆಯ ಮುಖ್ಯಸ್ಥೆ ಹಾಗೂ ವೃತ್ತಿಪರ ಭರತನಾಟ್ಯ ಕಲಾವಿದೆ ಆಗಿದ್ದಾರೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • 4
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search