• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶೀ ವಾರಣಾಸಿಯಲ್ಲಿ ಅರ್ಚಕರ ದಿರಿಸಿನಲ್ಲಿ ಪೊಲೀಸರು!

Tulunadu News Posted On April 12, 2024
0


0
Shares
  • Share On Facebook
  • Tweet It

ಯಾವುದೇ ಪ್ರಮುಖ ಬೃಹತ್ ದೇವಾಲಯಗಳಿಗೆ ನೀವು ಭೇಟಿ ನೀಡುವಾಗ ಅಲ್ಲಿ ಸರಕಾರಿ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ದೇವಾಲಯದ ಒಳಗೆ ಭಕ್ತರ ಸರದಿ ಸಾಲುಗಳನ್ನು ಶಿಸ್ತುಬದ್ಧವಾಗಿ ಮತ್ತು ವೇಗವಾಗಿ ಮುಂದಕ್ಕೆ ನೂಕಲು ಮತ್ತು ಬೇಗ ಬೇಗ ಭಕ್ತರ ಸಾಲನ್ನು ಮುಗಿಸಲು ಕೆಲಸ ಮಾಡುತ್ತಲೇ ಇರುತ್ತಾರೆ. ಅವರು ಪೊಲೀಸ್ ಸಮವಸ್ತ್ರದಲ್ಲಿ ಇರುವುದರಿಂದ ನಿಮಗೆ ಅವರು ಪೊಲೀಸರೆಂದು ಗೊತ್ತಾಗುತ್ತದೆ.

ಆದರೆ ವಾರಣಾಸಿಯಲ್ಲಿರುವ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಪೊಲೀಸರಿಗೆ ಅರ್ಚಕರ ಉಡುಗೆ ತೊಡುಗೆಯಲ್ಲಿ ಇರುವಂತೆ ವಾರಣಾಸಿ ಪೊಲೀಸ್ ಕಮೀಷನರ್ ಮೋಹಿತ್ ಅಗರವಾಲ್ ಸೂಚಿಸಿದ್ದಾರೆ. ಪುರುಷ ಪೊಲೀಸರು ಧೋತಿ – ಕುರ್ತಾ ಧರಿಸಿದರೆ, ಮಹಿಳಾ ಪೊಲೀಸರು ಸಲ್ವಾರ್ ಕುರ್ತಾ ಧರಿಸಿದ್ದಾರೆ.
ದೇಗುಲಗಳಲ್ಲಿ ಪೊಲೀಸರ ಕರ್ತವ್ಯವು ಇತರ ಸ್ಥಳಗಳಿಗಿಂತ ಭಿನ್ನವಾಗಿದೆ. ಇಲ್ಲಿ ಪೊಲೀಸರು ವಿವಿಧ ರೀತಿಯ ಜನಸಂದಣಿಯೊಂದಿಗೆ ಕರ್ತವ್ಯ ನಿರ್ವಹಿಸಬೇಕಾಗುತ್ತದೆ. ಇಲ್ಲಿ ಜನಸಂದಣಿ ಇರುವುದು ಕಾನೂನು ಸುವ್ಯವಸ್ಥೆ ಸಮಸ್ಯೆ ಸೃಷ್ಟಿಸಲು ಅಲ್ಲ. ಜನರಿಗೆ ಸುಲಭ ದರ್ಶನವನ್ನು ಖಚಿತಪಡಿಸಲು ಮತ್ತು ಅವರಿಗೆ ಮಾರ್ಗದರ್ಶನ ಮಾಡಿ ಸಹಾಯ ಮಾಡಲು ಪೊಲೀಸರು ಇರುತ್ತಾರೆ ಎಂದು ಅಗರವಾಲ್ ಹೇಳಿದ್ದಾರೆ. ಪೊಲೀಸರು ತಳ್ಳಿದರೆ ಭಕ್ತರಿಗೆ ನೋವಾಗುತ್ತದೆ. ಅರ್ಚಕರಿಂದ ಅದೇ ಕೆಲಸ ಮಾಡಿದರೆ ಅದನ್ನು ಸಕರಾತ್ಮಕವಾಗಿ ತೆಗೆದುಕೊಳ್ಳುತ್ತಾರೆ. ಪುರೋಹಿತರ ಉಡುಪಿನಲ್ಲಿ ಪೊಲೀಸರನ್ನು ನಿಯೋಜಿಸಿದರೆ ಜನರಿಗೆ ಅವರು ತಳ್ಳಿದರೂ ಬೇಸರವಾಗುವುದಿಲ್ಲ ಎಂದು ಪೊಲೀಸ್ ಕಮೀಷನರ್ ತಿಳಿಸಿದ್ದಾರೆ.

ಆದರೆ ಈ ಕ್ರಮವನ್ನು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಖಂಡಿಸಿದ್ದಾರೆ. ಪೊಲೀಸ್ ಕಮೀಷನರ್ ಕೃತ್ಯ ಖಂಡನೀಯ, ಸರಕಾರ ತಕ್ಷಣ ಆ ಅಧಿಕಾರಿಯನ್ನು ಅಮಾನತು ಮಾಡುವಂತೆ ಆಗ್ರಹಿಸಿದ್ದಾರೆ.

0
Shares
  • Share On Facebook
  • Tweet It




Trending Now
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
  • Popular Posts

    • 1
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 2
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 3
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search