• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶೀ ವಾರಣಾಸಿಯಲ್ಲಿ ಅರ್ಚಕರ ದಿರಿಸಿನಲ್ಲಿ ಪೊಲೀಸರು!

Tulunadu News Posted On April 12, 2024
0


0
Shares
  • Share On Facebook
  • Tweet It

ಯಾವುದೇ ಪ್ರಮುಖ ಬೃಹತ್ ದೇವಾಲಯಗಳಿಗೆ ನೀವು ಭೇಟಿ ನೀಡುವಾಗ ಅಲ್ಲಿ ಸರಕಾರಿ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ದೇವಾಲಯದ ಒಳಗೆ ಭಕ್ತರ ಸರದಿ ಸಾಲುಗಳನ್ನು ಶಿಸ್ತುಬದ್ಧವಾಗಿ ಮತ್ತು ವೇಗವಾಗಿ ಮುಂದಕ್ಕೆ ನೂಕಲು ಮತ್ತು ಬೇಗ ಬೇಗ ಭಕ್ತರ ಸಾಲನ್ನು ಮುಗಿಸಲು ಕೆಲಸ ಮಾಡುತ್ತಲೇ ಇರುತ್ತಾರೆ. ಅವರು ಪೊಲೀಸ್ ಸಮವಸ್ತ್ರದಲ್ಲಿ ಇರುವುದರಿಂದ ನಿಮಗೆ ಅವರು ಪೊಲೀಸರೆಂದು ಗೊತ್ತಾಗುತ್ತದೆ.

ಆದರೆ ವಾರಣಾಸಿಯಲ್ಲಿರುವ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಪೊಲೀಸರಿಗೆ ಅರ್ಚಕರ ಉಡುಗೆ ತೊಡುಗೆಯಲ್ಲಿ ಇರುವಂತೆ ವಾರಣಾಸಿ ಪೊಲೀಸ್ ಕಮೀಷನರ್ ಮೋಹಿತ್ ಅಗರವಾಲ್ ಸೂಚಿಸಿದ್ದಾರೆ. ಪುರುಷ ಪೊಲೀಸರು ಧೋತಿ – ಕುರ್ತಾ ಧರಿಸಿದರೆ, ಮಹಿಳಾ ಪೊಲೀಸರು ಸಲ್ವಾರ್ ಕುರ್ತಾ ಧರಿಸಿದ್ದಾರೆ.
ದೇಗುಲಗಳಲ್ಲಿ ಪೊಲೀಸರ ಕರ್ತವ್ಯವು ಇತರ ಸ್ಥಳಗಳಿಗಿಂತ ಭಿನ್ನವಾಗಿದೆ. ಇಲ್ಲಿ ಪೊಲೀಸರು ವಿವಿಧ ರೀತಿಯ ಜನಸಂದಣಿಯೊಂದಿಗೆ ಕರ್ತವ್ಯ ನಿರ್ವಹಿಸಬೇಕಾಗುತ್ತದೆ. ಇಲ್ಲಿ ಜನಸಂದಣಿ ಇರುವುದು ಕಾನೂನು ಸುವ್ಯವಸ್ಥೆ ಸಮಸ್ಯೆ ಸೃಷ್ಟಿಸಲು ಅಲ್ಲ. ಜನರಿಗೆ ಸುಲಭ ದರ್ಶನವನ್ನು ಖಚಿತಪಡಿಸಲು ಮತ್ತು ಅವರಿಗೆ ಮಾರ್ಗದರ್ಶನ ಮಾಡಿ ಸಹಾಯ ಮಾಡಲು ಪೊಲೀಸರು ಇರುತ್ತಾರೆ ಎಂದು ಅಗರವಾಲ್ ಹೇಳಿದ್ದಾರೆ. ಪೊಲೀಸರು ತಳ್ಳಿದರೆ ಭಕ್ತರಿಗೆ ನೋವಾಗುತ್ತದೆ. ಅರ್ಚಕರಿಂದ ಅದೇ ಕೆಲಸ ಮಾಡಿದರೆ ಅದನ್ನು ಸಕರಾತ್ಮಕವಾಗಿ ತೆಗೆದುಕೊಳ್ಳುತ್ತಾರೆ. ಪುರೋಹಿತರ ಉಡುಪಿನಲ್ಲಿ ಪೊಲೀಸರನ್ನು ನಿಯೋಜಿಸಿದರೆ ಜನರಿಗೆ ಅವರು ತಳ್ಳಿದರೂ ಬೇಸರವಾಗುವುದಿಲ್ಲ ಎಂದು ಪೊಲೀಸ್ ಕಮೀಷನರ್ ತಿಳಿಸಿದ್ದಾರೆ.

ಆದರೆ ಈ ಕ್ರಮವನ್ನು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಖಂಡಿಸಿದ್ದಾರೆ. ಪೊಲೀಸ್ ಕಮೀಷನರ್ ಕೃತ್ಯ ಖಂಡನೀಯ, ಸರಕಾರ ತಕ್ಷಣ ಆ ಅಧಿಕಾರಿಯನ್ನು ಅಮಾನತು ಮಾಡುವಂತೆ ಆಗ್ರಹಿಸಿದ್ದಾರೆ.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 3
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..

  • Privacy Policy
  • Contact
© Tulunadu Infomedia.

Press enter/return to begin your search