• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶೀ ವಾರಣಾಸಿಯಲ್ಲಿ ಅರ್ಚಕರ ದಿರಿಸಿನಲ್ಲಿ ಪೊಲೀಸರು!

Tulunadu News Posted On April 12, 2024
0


0
Shares
  • Share On Facebook
  • Tweet It

ಯಾವುದೇ ಪ್ರಮುಖ ಬೃಹತ್ ದೇವಾಲಯಗಳಿಗೆ ನೀವು ಭೇಟಿ ನೀಡುವಾಗ ಅಲ್ಲಿ ಸರಕಾರಿ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ದೇವಾಲಯದ ಒಳಗೆ ಭಕ್ತರ ಸರದಿ ಸಾಲುಗಳನ್ನು ಶಿಸ್ತುಬದ್ಧವಾಗಿ ಮತ್ತು ವೇಗವಾಗಿ ಮುಂದಕ್ಕೆ ನೂಕಲು ಮತ್ತು ಬೇಗ ಬೇಗ ಭಕ್ತರ ಸಾಲನ್ನು ಮುಗಿಸಲು ಕೆಲಸ ಮಾಡುತ್ತಲೇ ಇರುತ್ತಾರೆ. ಅವರು ಪೊಲೀಸ್ ಸಮವಸ್ತ್ರದಲ್ಲಿ ಇರುವುದರಿಂದ ನಿಮಗೆ ಅವರು ಪೊಲೀಸರೆಂದು ಗೊತ್ತಾಗುತ್ತದೆ.

ಆದರೆ ವಾರಣಾಸಿಯಲ್ಲಿರುವ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಪೊಲೀಸರಿಗೆ ಅರ್ಚಕರ ಉಡುಗೆ ತೊಡುಗೆಯಲ್ಲಿ ಇರುವಂತೆ ವಾರಣಾಸಿ ಪೊಲೀಸ್ ಕಮೀಷನರ್ ಮೋಹಿತ್ ಅಗರವಾಲ್ ಸೂಚಿಸಿದ್ದಾರೆ. ಪುರುಷ ಪೊಲೀಸರು ಧೋತಿ – ಕುರ್ತಾ ಧರಿಸಿದರೆ, ಮಹಿಳಾ ಪೊಲೀಸರು ಸಲ್ವಾರ್ ಕುರ್ತಾ ಧರಿಸಿದ್ದಾರೆ.
ದೇಗುಲಗಳಲ್ಲಿ ಪೊಲೀಸರ ಕರ್ತವ್ಯವು ಇತರ ಸ್ಥಳಗಳಿಗಿಂತ ಭಿನ್ನವಾಗಿದೆ. ಇಲ್ಲಿ ಪೊಲೀಸರು ವಿವಿಧ ರೀತಿಯ ಜನಸಂದಣಿಯೊಂದಿಗೆ ಕರ್ತವ್ಯ ನಿರ್ವಹಿಸಬೇಕಾಗುತ್ತದೆ. ಇಲ್ಲಿ ಜನಸಂದಣಿ ಇರುವುದು ಕಾನೂನು ಸುವ್ಯವಸ್ಥೆ ಸಮಸ್ಯೆ ಸೃಷ್ಟಿಸಲು ಅಲ್ಲ. ಜನರಿಗೆ ಸುಲಭ ದರ್ಶನವನ್ನು ಖಚಿತಪಡಿಸಲು ಮತ್ತು ಅವರಿಗೆ ಮಾರ್ಗದರ್ಶನ ಮಾಡಿ ಸಹಾಯ ಮಾಡಲು ಪೊಲೀಸರು ಇರುತ್ತಾರೆ ಎಂದು ಅಗರವಾಲ್ ಹೇಳಿದ್ದಾರೆ. ಪೊಲೀಸರು ತಳ್ಳಿದರೆ ಭಕ್ತರಿಗೆ ನೋವಾಗುತ್ತದೆ. ಅರ್ಚಕರಿಂದ ಅದೇ ಕೆಲಸ ಮಾಡಿದರೆ ಅದನ್ನು ಸಕರಾತ್ಮಕವಾಗಿ ತೆಗೆದುಕೊಳ್ಳುತ್ತಾರೆ. ಪುರೋಹಿತರ ಉಡುಪಿನಲ್ಲಿ ಪೊಲೀಸರನ್ನು ನಿಯೋಜಿಸಿದರೆ ಜನರಿಗೆ ಅವರು ತಳ್ಳಿದರೂ ಬೇಸರವಾಗುವುದಿಲ್ಲ ಎಂದು ಪೊಲೀಸ್ ಕಮೀಷನರ್ ತಿಳಿಸಿದ್ದಾರೆ.

ಆದರೆ ಈ ಕ್ರಮವನ್ನು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಖಂಡಿಸಿದ್ದಾರೆ. ಪೊಲೀಸ್ ಕಮೀಷನರ್ ಕೃತ್ಯ ಖಂಡನೀಯ, ಸರಕಾರ ತಕ್ಷಣ ಆ ಅಧಿಕಾರಿಯನ್ನು ಅಮಾನತು ಮಾಡುವಂತೆ ಆಗ್ರಹಿಸಿದ್ದಾರೆ.

0
Shares
  • Share On Facebook
  • Tweet It




Trending Now
ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
Tulunadu News July 11, 2025
ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
Tulunadu News July 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
  • Popular Posts

    • 1
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 2
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 3
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • 4
      ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • 5
      ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!

  • Privacy Policy
  • Contact
© Tulunadu Infomedia.

Press enter/return to begin your search