• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತ್ ಮಾತಾ ಕೀ ಜೈ ಹೇಳಿದರೆ ಖರ್ಗೆ ಅಪಾರ್ಥ ಮಾಡಿಕೊಳ್ಳಬಾರದು ಎಂದ ಸವದಿ!

Tulunadu News Posted On April 12, 2024
0


0
Shares
  • Share On Facebook
  • Tweet It

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಹಾರಿ ಅಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿ ಶಾಸಕರಾಗಿರುವ ಲಕ್ಷ್ಮಣ್ ಸವದಿಯವರು ಕಾಂಗ್ರೆಸ್ ಪರ ಚುನಾವಣಾ ಪ್ರಚಾರದಲ್ಲಿ ಹೇಳಿರುವ ಮಾತೊಂದು ಈಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಅವರು ಪಕ್ಷದ ಅಭ್ಯರ್ಥಿಯ ಪರ ಭಾಷಣ ಮಾಡಿ ಕೊನೆಗೆ ಹೇಳಿದ ಮಾತುಗಳು ಈಗ ವೈರಲ್ ಆಗಿದೆ. ಅವರು ವೇದಿಕೆಯಲ್ಲಿದ್ದ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರತ್ತ ತಿರುಗಿ “ದಯವಿಟ್ಟು ಖರ್ಗೆ ಸಾಹೇಬ್ರು ಅಪಾರ್ಥ ಮಾಡಿಕೊಳ್ಳಬಾರದು” ಎಂದು ಹೇಳಿ ಜನರತ್ತ ತಿರುಗಿ ತಾನು ಒಂದು ಮಾತು ಹೇಳುತ್ತೇನೆ, ತಾವು ಅದಕ್ಕೆ ಜೈ ಎನ್ನಬೇಕು ಎನ್ನುತ್ತಾರೆ. ನಂತರ ಬೋಲೋ ಭಾರತ್ ಮಾತಾ ಕಿ ಎನ್ನುತ್ತಾರೆ.

ಇದರಿಂದ ಹೋಗಿರುವ ಸಂದೇಶ ಏನೆಂದರೆ ಭಾರತ್ ಮಾತಾ ಕಿ ಜೈ ಎನ್ನುವುದು ಖರ್ಗೆಯವರಿಗೆ ಇಷ್ಟವಿಲ್ಲ, ಆದರೂ ಅನುಮತಿ ಕೇಳಿಕೊಂಡು ತಾನು ಹೇಳುತ್ತಿದ್ದೇನೆ ಎನ್ನುವ ಅರ್ಥದಲ್ಲಿ ಅವರ ಬಾಡಿ ಲ್ಯಾಂಗ್ವೆಜ್ ಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಈ ಕುರಿತು ಬಿಜೆಪಿ ತನ್ನ ಏಕ್ಸ್ (ಟ್ವಿಟರ್) ನಲ್ಲಿ ” ಸನ್ಮಾನ್ಯ ಲಕ್ಷ್ಮಣ್ ಸವದಿ ಅವರ ದಯನೀಯ ಸ್ಥಿತಿ ಕಂಡು ನಿಜಕ್ಕೂ ಬೇಸರವಾಗುತ್ತಿದೆ. ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಲು ಕೂಡ ನೀವು ಸ್ವತಂತ್ರರಲ್ಲ. ಅದಕ್ಕೂ ಖರ್ಗೆ ಅವರ ಅನುಮತಿ ಪಡೆಯಲೇಬೇಕು. ಇಂತಹ ದೇಶ ವಿರೋಧಿ ಕಾಂಗ್ರೆಸ್ ಪಕ್ಷದ ಪರ ಪ್ರಚಾರ ನಡೆಸಲು ನಿಮ್ಮ ಆತ್ಮಸಾಕ್ಷಿ ಒಪ್ಪುತ್ತದೆಯೆ ಎಂದು ಪ್ರಶ್ನಿಸಿದೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • 2
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search