• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹೈಕಮಾಂಡ್ ಹೇಳಿದರೆ ಸಿಎಂ ಕುರ್ಚಿ ಬಿಡುವೆ ಎಂದ ಸಿದ್ದರಾಮಯ್ಯ ಕೊಟ್ಟ ಸುಳಿವೇನು?

Tulunadu News Posted On April 13, 2024
0


0
Shares
  • Share On Facebook
  • Tweet It

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ರಾಜ್ಯದ ಕಾಂಗ್ರೆಸ್ ಸರಕಾರದ ಹಲವು ಸಚಿವರ ಕುಟುಂಬದವರು ಕಣಕ್ಕೆ ಇಳಿದಿರುವುದು ಇಡೀ ರಾಜ್ಯಕ್ಕೆ ಗೊತ್ತಿದೆ. ಈ ಸಲ ಸಚಿವರು ಹೇಳಿದ ವ್ಯಕ್ತಿಗೆ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ನೀಡಿದೆ. ಈಗ ಆ ಅಭ್ಯರ್ಥಿಗಳನ್ನು ಗೆಲ್ಲಿಸುವ ಹೊಣೆಯೂ ಆಯಾ ಸಚಿವರ ಮೇಲಿದೆ. ಅದರೊಂದಿಗೆ ಕರ್ನಾಟಕದಿಂದ ಕನಿಷ್ಟ 20 ಸೀಟುಗಳನ್ನು ಗೆಲ್ಲಲೇಬೇಕೆಂಬ ಟಾಸ್ಕನ್ನು ಹೈಕಮಾಂಡ್ ಸಿದ್ದು ಹಾಗೂ ಡಿಕೆಶಿ ಹೆಗಲಿಗೆ ಹಾಕಿದೆ. ಒಂದು ವೇಳೆ ಅಷ್ಟು ಸೀಟುಗಳು ಬರದಿದ್ದರೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ತಮ್ಮ ಸ್ಥಾನದಿಂದ ಕೆಳಗಿಳಿಯಬೇಕಾಗುತ್ತದೆಯಾ? ಹೊಸ ಮಂತ್ರಿಮಂಡಲದ ರಚನೆ ಆಗುತ್ತದೆಯಾ? ಈ ಪ್ರಶ್ನೆಗಳಿಗೆ ಜೂನ್ 4 ರ ಸಂಜೆಯ ಬಳಿಕ ಉತ್ತರ ಸಿಗಬಹುದು.
ಆದರೆ ಒಂದು ವೇಳೆ ತಮ್ಮ ಕುಟುಂಬದವರು ನಿಂತ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸೋತರೆ ಆ ಸಚಿವರ ತಲೆದಂಡವಾಗುವುದಿದ್ದರೆ ಒಟ್ಟಾರೆ ರಾಜ್ಯದಲ್ಲಿ ಕಾಂಗ್ರೆಸ್ ಎರಡಂಕಿಗೆ ತಲುಪದಿದ್ದರೆ ಸಿದ್ಧರಾಮಯ್ಯ ಕೆಳಗಿಳಿಯಬೇಕಾದ ಒತ್ತಡ ಸೃಷ್ಟಿಯಾಗಲಿದೆಯಾ? ಈಗಾಗಲೇ ಕಾಂಗ್ರೆಸ್ ಹೈಕಮಾಂಡ್ ರಾಜ್ಯದ 28 ಲೋಕಸಭಾ ಕ್ಷೇತ್ರಗಳನ್ನು ಸಿದ್ದು – ಡಿಕೆಶಿ ತಂಡಗಳಿಗೆ ಹಂಚಿಕೊಟ್ಟಾಗಿದೆ. ಯಾರ ಮೇಲ್ವಿಚಾರಣೆಯ ಕ್ಷೇತ್ರಗಳು ಎಷ್ಟು ಗೆಲ್ಲುತ್ತದೆ ಎನ್ನುವುದರ ಮೇಲೆ ಸಿದ್ದು ಸಿಎಂ ಭವಿಷ್ಯ ಅಡಗಿದೆಯಾ ಎನ್ನುವುದು ರಾಜಕೀಯ ಪಂಡಿತರ ಲೆಕ್ಕಾಚಾರ.
ಇನ್ನು ಮತದಾನಕ್ಕೆ ದಿನಗಳು ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್ ಲೆಕ್ಕಾಚಾರಗಳು 20 ಸೀಟಿನ ತನಕ ತಾವು ಹೋಗುವುದಿಲ್ಲ ಎನ್ನುವ ಸುಳಿವು ನೀಡಿವೆ. ಸಿಎಂ ಒಂದು ಹೆಜ್ಜೆ ಮುಂದೆ ಹೋಗಿ ” ಮೈತ್ರಿಕೂಟಕ್ಕೆ ಸಂಪೂರ್ಣ ಬಹುಮತ ಸಿಗದೇ ಇರಬಹುದು. ಆದರೆ ಕೇಂದ್ರದಲ್ಲಿ ಸರಕಾರ ರಚಿಸಲು ಎನ್ ಡಿಗೂ ಸಾಕಷ್ಟು ಸ್ಥಾನಗಳು ಸಿಗುವುದಿಲ್ಲ ” ಎಂದು ಅತಂತ್ರ ಲೋಕಸಭೆಯ ಸುಳಿವು ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search