• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಹೈಕಮಾಂಡ್ ಹೇಳಿದರೆ ಸಿಎಂ ಕುರ್ಚಿ ಬಿಡುವೆ ಎಂದ ಸಿದ್ದರಾಮಯ್ಯ ಕೊಟ್ಟ ಸುಳಿವೇನು?

Tulunadu News Posted On April 13, 2024


  • Share On Facebook
  • Tweet It

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ರಾಜ್ಯದ ಕಾಂಗ್ರೆಸ್ ಸರಕಾರದ ಹಲವು ಸಚಿವರ ಕುಟುಂಬದವರು ಕಣಕ್ಕೆ ಇಳಿದಿರುವುದು ಇಡೀ ರಾಜ್ಯಕ್ಕೆ ಗೊತ್ತಿದೆ. ಈ ಸಲ ಸಚಿವರು ಹೇಳಿದ ವ್ಯಕ್ತಿಗೆ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ನೀಡಿದೆ. ಈಗ ಆ ಅಭ್ಯರ್ಥಿಗಳನ್ನು ಗೆಲ್ಲಿಸುವ ಹೊಣೆಯೂ ಆಯಾ ಸಚಿವರ ಮೇಲಿದೆ. ಅದರೊಂದಿಗೆ ಕರ್ನಾಟಕದಿಂದ ಕನಿಷ್ಟ 20 ಸೀಟುಗಳನ್ನು ಗೆಲ್ಲಲೇಬೇಕೆಂಬ ಟಾಸ್ಕನ್ನು ಹೈಕಮಾಂಡ್ ಸಿದ್ದು ಹಾಗೂ ಡಿಕೆಶಿ ಹೆಗಲಿಗೆ ಹಾಕಿದೆ. ಒಂದು ವೇಳೆ ಅಷ್ಟು ಸೀಟುಗಳು ಬರದಿದ್ದರೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ತಮ್ಮ ಸ್ಥಾನದಿಂದ ಕೆಳಗಿಳಿಯಬೇಕಾಗುತ್ತದೆಯಾ? ಹೊಸ ಮಂತ್ರಿಮಂಡಲದ ರಚನೆ ಆಗುತ್ತದೆಯಾ? ಈ ಪ್ರಶ್ನೆಗಳಿಗೆ ಜೂನ್ 4 ರ ಸಂಜೆಯ ಬಳಿಕ ಉತ್ತರ ಸಿಗಬಹುದು.
ಆದರೆ ಒಂದು ವೇಳೆ ತಮ್ಮ ಕುಟುಂಬದವರು ನಿಂತ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸೋತರೆ ಆ ಸಚಿವರ ತಲೆದಂಡವಾಗುವುದಿದ್ದರೆ ಒಟ್ಟಾರೆ ರಾಜ್ಯದಲ್ಲಿ ಕಾಂಗ್ರೆಸ್ ಎರಡಂಕಿಗೆ ತಲುಪದಿದ್ದರೆ ಸಿದ್ಧರಾಮಯ್ಯ ಕೆಳಗಿಳಿಯಬೇಕಾದ ಒತ್ತಡ ಸೃಷ್ಟಿಯಾಗಲಿದೆಯಾ? ಈಗಾಗಲೇ ಕಾಂಗ್ರೆಸ್ ಹೈಕಮಾಂಡ್ ರಾಜ್ಯದ 28 ಲೋಕಸಭಾ ಕ್ಷೇತ್ರಗಳನ್ನು ಸಿದ್ದು – ಡಿಕೆಶಿ ತಂಡಗಳಿಗೆ ಹಂಚಿಕೊಟ್ಟಾಗಿದೆ. ಯಾರ ಮೇಲ್ವಿಚಾರಣೆಯ ಕ್ಷೇತ್ರಗಳು ಎಷ್ಟು ಗೆಲ್ಲುತ್ತದೆ ಎನ್ನುವುದರ ಮೇಲೆ ಸಿದ್ದು ಸಿಎಂ ಭವಿಷ್ಯ ಅಡಗಿದೆಯಾ ಎನ್ನುವುದು ರಾಜಕೀಯ ಪಂಡಿತರ ಲೆಕ್ಕಾಚಾರ.
ಇನ್ನು ಮತದಾನಕ್ಕೆ ದಿನಗಳು ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್ ಲೆಕ್ಕಾಚಾರಗಳು 20 ಸೀಟಿನ ತನಕ ತಾವು ಹೋಗುವುದಿಲ್ಲ ಎನ್ನುವ ಸುಳಿವು ನೀಡಿವೆ. ಸಿಎಂ ಒಂದು ಹೆಜ್ಜೆ ಮುಂದೆ ಹೋಗಿ ” ಮೈತ್ರಿಕೂಟಕ್ಕೆ ಸಂಪೂರ್ಣ ಬಹುಮತ ಸಿಗದೇ ಇರಬಹುದು. ಆದರೆ ಕೇಂದ್ರದಲ್ಲಿ ಸರಕಾರ ರಚಿಸಲು ಎನ್ ಡಿಗೂ ಸಾಕಷ್ಟು ಸ್ಥಾನಗಳು ಸಿಗುವುದಿಲ್ಲ ” ಎಂದು ಅತಂತ್ರ ಲೋಕಸಭೆಯ ಸುಳಿವು ನೀಡಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search