• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಯೋಧ್ಯೆಯಲ್ಲಿ ರಾಮನವಮಿಯಂದು ಬಾಲರಾಮನ ಹಣೆಗೆ ಸೂರ್ಯತಿಲಕ!

Tulunadu News Posted On April 13, 2024
0


0
Shares
  • Share On Facebook
  • Tweet It

ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣವಾದ ಬಳಿಕ ಮೊದಲ ರಾಮ ನವಮಿಗೆ ಅಯೋಧ್ಯೆಯ ರಾಮ ಮಂದಿರದಲ್ಲಿ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಅಂದು ಗರ್ಭಗುಡಿಯಲ್ಲಿ ಒಂದು ಪವಾಡ ನಡೆಯಲಿದೆ. ಬಾಲರಾಮನ ಹಣೆಗೆ ಸೂರ್ಯನ ಕಿರಣ ಚುಂಬಿಸುವ ಗಳಿಗೆಗೆ ಎಲ್ಲರೂ ಕಾಯುತ್ತಿದ್ದಾರೆ.
ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ಕಟ್ಟುವಾಗಲೇ ಬಾಲರಾಮನ ಮೂರ್ತಿಯ ಹಣೆಗೆ ಸೂರ್ಯನ ಕಿರಣಗಳು ಮುತ್ತಿಕ್ಕುವಂತೆ ವಿನ್ಯಾಸಗೊಳಿಸಲಾಗಿದೆ. ಇದಕ್ಕಾಗಿ ವಾಸ್ತುತಜ್ಞರ ಸಹಾಯವನ್ನು ಪಡೆದುಕೊಳ್ಳಲಾಗಿದೆ. ಇದಕ್ಕಾಗಿ ಈ ಮೊದಲೇ ಪ್ರಯೋಗಾತ್ಮಕ ಪರೀಕ್ಷೆಗಳು ಯಶಸ್ವಿಯಾಗಿ ನಡೆದಿವೆ.
ರಾಮನವಮಿಯಂದು ರಾಮ ಜನಿಸಿದ ಸಮಯಕ್ಕೆ ಸರಿಯಾಗಿ ಸೂರ್ಯನ ಕಿರಣ ಹಣೆಯ ಮೇಲೆ ಬರುವಂತೆ ಇದನ್ನು ವಿನ್ಯಾಸಗೊಳಿಸಲಾಗಿದೆ. ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ಸೂರ್ಯನ ಕಿರಣ ಬಾಲರಾಮನ ಹಣೆಗೆ ಚುಂಬಿಸಿ ನಾಲ್ಕು ನಿಮಿಷ ಅಲ್ಲಿಯೇ ಇರಲಿದೆ. 75 ಮಿ.ಮೀ ಗಾತ್ರದ ಈ ಸೂರ್ಯ ತಿಲಕ ನಂತರ ನಿಧಾನವಾಗಿ ಸರಿಯಲಿದೆ.
ಇದರ ಹಿಂದೆ ರೂರ್ಖಿಯಲ್ಲಿರುವ ಕೇಂದ್ರಿಯ ನಿರ್ಮಾಣ ಸಂಶೋಧನಾ ಸಂಸ್ಥೆಯ ಸಂಶೋಧನಾ ವಿಭಾಗದ ಸಹಾಯ ಪಡೆಯಲಾಗಿದೆ. ತಿಲಕ್ ಆಫ್ ಸೂರ್ಯರೇಸ್ ಎಂಬ ಸಾಧನವನ್ನು ಅಭಿವೃದ್ಧಿಪಡಿಸಲಾಗಿದೆ. ಈ ಸಾಧನದಿಂದಲೇ ಬಾಲರಾಮನ ಮೂರ್ತಿಯ ಮೇಲೆ ಸೂರ್ಯ ತಿಲಕ ಮೂಡುವಂತೆ ವಿನ್ಯಾಸಗೊಳಿಸಲಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search