• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಎಲ್ಲವೂ ದೆಹಲಿಯಲ್ಲಿ ನಿರ್ಧಾರ ಆಗಿದೆ, ಕೆಲವು ದಿನ ಕಾಯಿರಿ ಎಂದ್ರು ಡಿಕೆಶಿ!

Tulunadu News Posted On April 16, 2024
0


0
Shares
  • Share On Facebook
  • Tweet It

ಚುನಾವಣಾ ಪ್ರಚಾರದಲ್ಲಿ ನಿರತರಾಗಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಒಕ್ಕಲಿಗ ಸಂಘದ ಸಭೆಯಲ್ಲಿ ” ಎಲ್ಲವೂ ದೆಹಲಿಯಲ್ಲಿ ನಿರ್ಧಾರ ಆಗಿದೆ. ಕೆಲವು ದಿನ ಕಾಯಿರಿ” ಎಂದು ಹೇಳಿದ್ದಾರೆ. ಈ ವಾಕ್ಯದ ಅರ್ಥ ಬಹಳ ಸ್ಪಷ್ಟವಾಗಿದ್ದು, ಲೋಕಸಭಾ ಚುನಾವಣೆಯ ಬಳಿಕ ಯಾವುದೇ ಸಂದರ್ಭದಲ್ಲಿಯೂ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಗ್ತಾರಾ ಎನ್ನುವ ಅಭಿಪ್ರಾಯ ದಟ್ಟವಾಗಿದೆ.
ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುತ್ತಾರೆ ಎನ್ನುವ ಭರವಸೆಯಿಂದ ಈ ಬಾರಿ ಒಕ್ಕಲಿಗ ಸಮುದಾಯ ಕಾಂಗ್ರೆಸ್ ಪಕ್ಷದೊಂದಿಗೆ ಗಟ್ಟಿಯಾಗಿ ನಿಂತ ಕಾರಣ ಕಳೆದ ಮೇನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿರೀಕ್ಷೆಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದು ಬೀಗಿತ್ತು. ಇವತ್ತಿಗೂ ಕರ್ನಾಟಕದಲ್ಲಿ ಒಕ್ಕಲಿಗರ ಅಧಿಪತಿ ಯಾರು ಎನ್ನುವ ಪ್ರಶ್ನೆಗೆ ನಿಸ್ಸಂಶಯವಾಗಿ ಅದು ದೇವೆಗೌಡರು ಎನ್ನುವ ಉತ್ತರ ಬರುತ್ತದೆ. ಆದರೆ ಕಳೆದ ವರ್ಷ ಯಾವ ರೀತಿಯ ವಾತಾವರಣ ಮೂಡಿತ್ತು ಎಂದರೆ ಜೆಡಿಎಸ್ ವೋಟ್ ಬ್ಯಾಂಕ್ ಆಗಿದ್ದ ಒಕ್ಕಲಿಗರು ಹಾಗೂ ಇತ್ತ ಅಲ್ಪಸಂಖ್ಯಾತರು ಎರಡೂ ಸಮುದಾಯದವರು ಏಕಕಾಲದಲ್ಲಿ ಕಾಂಗ್ರೆಸ್ ಬೆನ್ನಿಗೆ ನಿಂತರು. ನಾವು ಜೆಡಿಎಸ್ ಗೆ ಮತ ನೀಡಿ ಒಂದು ವೇಳೆ ಅತಂತ್ರ ಸರಕಾರ ಬಂದರೆ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಸರಕಾರ ಮಾಡುತ್ತೆ ಎಂದು ಅಲ್ಪಸಂಖ್ಯಾತರು ಜೆಡಿಎಸ್ ಜೊತೆಗೆ ಹೋಗಲಿಲ್ಲ. ಇತ್ತ ಡಿಕೆಶಿ ಸಿಎಂ ಆದರೆ ಸಮುದಾಯಕ್ಕೆ ಒಳ್ಳೆಯದು ಎಂದು ಒಕ್ಕಲಿಗರು ಸಾರಾಸಗಟಾಗಿ ಕಾಂಗ್ರೆಸ್ಸಿಗೆ ಬೆಂಬಲಿಸಿದರು. ಆದರೆ ಸರಕಾರವೇನೋ ಕಾಂಗ್ರೆಸ್ಸಿನದ್ದು ಬಂತು. ಆದರೆ ಡಿಕೆಶಿ ಮುಖ್ಯಮಂತ್ರಿಯಾಗಲಿಲ್ಲ. ಆದ್ದರಿಂದ ಬೇಸರಗೊಂಡಿರುವ ಒಕ್ಕಲಿಗರು ಈ ಬಾರಿ ಜೆಡಿಎಸ್ ಜೊತೆ ಹೋದರೆ ಕಷ್ಟ ಎಂದುಕೊಂಡಿರುವ ಡಿಕೆಶಿ ತಾವು ಶೀಘ್ರದಲ್ಲಿ ಮುಖ್ಯಮಂತ್ರಿ ಆಗುವ ಸುಳಿವನ್ನು ಕೊಟ್ರಾ ಎನ್ನುವುದು ಈಗ ರಾಜಕೀಯ ವಲಯದಲ್ಲಿ ಉದ್ಭವಿಸಿರುವ ಪ್ರಶ್ನೆ.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search