• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಎಲ್ಲವೂ ದೆಹಲಿಯಲ್ಲಿ ನಿರ್ಧಾರ ಆಗಿದೆ, ಕೆಲವು ದಿನ ಕಾಯಿರಿ ಎಂದ್ರು ಡಿಕೆಶಿ!

Tulunadu News Posted On April 16, 2024
0


0
Shares
  • Share On Facebook
  • Tweet It

ಚುನಾವಣಾ ಪ್ರಚಾರದಲ್ಲಿ ನಿರತರಾಗಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಒಕ್ಕಲಿಗ ಸಂಘದ ಸಭೆಯಲ್ಲಿ ” ಎಲ್ಲವೂ ದೆಹಲಿಯಲ್ಲಿ ನಿರ್ಧಾರ ಆಗಿದೆ. ಕೆಲವು ದಿನ ಕಾಯಿರಿ” ಎಂದು ಹೇಳಿದ್ದಾರೆ. ಈ ವಾಕ್ಯದ ಅರ್ಥ ಬಹಳ ಸ್ಪಷ್ಟವಾಗಿದ್ದು, ಲೋಕಸಭಾ ಚುನಾವಣೆಯ ಬಳಿಕ ಯಾವುದೇ ಸಂದರ್ಭದಲ್ಲಿಯೂ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಗ್ತಾರಾ ಎನ್ನುವ ಅಭಿಪ್ರಾಯ ದಟ್ಟವಾಗಿದೆ.
ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುತ್ತಾರೆ ಎನ್ನುವ ಭರವಸೆಯಿಂದ ಈ ಬಾರಿ ಒಕ್ಕಲಿಗ ಸಮುದಾಯ ಕಾಂಗ್ರೆಸ್ ಪಕ್ಷದೊಂದಿಗೆ ಗಟ್ಟಿಯಾಗಿ ನಿಂತ ಕಾರಣ ಕಳೆದ ಮೇನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿರೀಕ್ಷೆಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದು ಬೀಗಿತ್ತು. ಇವತ್ತಿಗೂ ಕರ್ನಾಟಕದಲ್ಲಿ ಒಕ್ಕಲಿಗರ ಅಧಿಪತಿ ಯಾರು ಎನ್ನುವ ಪ್ರಶ್ನೆಗೆ ನಿಸ್ಸಂಶಯವಾಗಿ ಅದು ದೇವೆಗೌಡರು ಎನ್ನುವ ಉತ್ತರ ಬರುತ್ತದೆ. ಆದರೆ ಕಳೆದ ವರ್ಷ ಯಾವ ರೀತಿಯ ವಾತಾವರಣ ಮೂಡಿತ್ತು ಎಂದರೆ ಜೆಡಿಎಸ್ ವೋಟ್ ಬ್ಯಾಂಕ್ ಆಗಿದ್ದ ಒಕ್ಕಲಿಗರು ಹಾಗೂ ಇತ್ತ ಅಲ್ಪಸಂಖ್ಯಾತರು ಎರಡೂ ಸಮುದಾಯದವರು ಏಕಕಾಲದಲ್ಲಿ ಕಾಂಗ್ರೆಸ್ ಬೆನ್ನಿಗೆ ನಿಂತರು. ನಾವು ಜೆಡಿಎಸ್ ಗೆ ಮತ ನೀಡಿ ಒಂದು ವೇಳೆ ಅತಂತ್ರ ಸರಕಾರ ಬಂದರೆ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಸರಕಾರ ಮಾಡುತ್ತೆ ಎಂದು ಅಲ್ಪಸಂಖ್ಯಾತರು ಜೆಡಿಎಸ್ ಜೊತೆಗೆ ಹೋಗಲಿಲ್ಲ. ಇತ್ತ ಡಿಕೆಶಿ ಸಿಎಂ ಆದರೆ ಸಮುದಾಯಕ್ಕೆ ಒಳ್ಳೆಯದು ಎಂದು ಒಕ್ಕಲಿಗರು ಸಾರಾಸಗಟಾಗಿ ಕಾಂಗ್ರೆಸ್ಸಿಗೆ ಬೆಂಬಲಿಸಿದರು. ಆದರೆ ಸರಕಾರವೇನೋ ಕಾಂಗ್ರೆಸ್ಸಿನದ್ದು ಬಂತು. ಆದರೆ ಡಿಕೆಶಿ ಮುಖ್ಯಮಂತ್ರಿಯಾಗಲಿಲ್ಲ. ಆದ್ದರಿಂದ ಬೇಸರಗೊಂಡಿರುವ ಒಕ್ಕಲಿಗರು ಈ ಬಾರಿ ಜೆಡಿಎಸ್ ಜೊತೆ ಹೋದರೆ ಕಷ್ಟ ಎಂದುಕೊಂಡಿರುವ ಡಿಕೆಶಿ ತಾವು ಶೀಘ್ರದಲ್ಲಿ ಮುಖ್ಯಮಂತ್ರಿ ಆಗುವ ಸುಳಿವನ್ನು ಕೊಟ್ರಾ ಎನ್ನುವುದು ಈಗ ರಾಜಕೀಯ ವಲಯದಲ್ಲಿ ಉದ್ಭವಿಸಿರುವ ಪ್ರಶ್ನೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

  • Privacy Policy
  • Contact
© Tulunadu Infomedia.

Press enter/return to begin your search