• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇವಿಎಂ ಬೇಡಾ ಎಂದವರಿಗೆ ಸುಪ್ರೀಂಕೋರ್ಟ್ ಇವತ್ತು ಹೇಳಿದ್ದು ಏನು?

Tulunadu News Posted On April 16, 2024
0


0
Shares
  • Share On Facebook
  • Tweet It

ಅಸೋಸಿಯೇಶನ್ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ ಪರ ವಾದ ಮಂಡಿಸಿದ ವಕೀಲ ಪ್ರಶಾಂತ್ ಭೂಷಣ್ ಅವರು ನಮ್ಮ ದೇಶ ಪೇಪರ್ ಬ್ಯಾಲೆಟ್ ಮತದಾನ ಪದ್ಧತಿಗೆ ಹಿಂದಿರುಗಬೇಕು ಎಂದು ವಾದ ಮಂಡಿಸಿದರು. ಇವಿಎಂಗಳಲ್ಲಿ ಚಲಾವಣೆಯ ಮತಗಳನ್ನು ವಿವಿಪ್ಯಾಟ್ ಸ್ಲಿಪ್ ಗಳೊಂದಿಗೆ ಕ್ರಾಸ್ ಚೆಕ್ ಮಾಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಬ್ಯಾಲೆಟ್ ಪೇಪರ್ ಮತದಾನ ಪದ್ಧತಿಯಲ್ಲಿರುವ ಸಮಸ್ಯೆಗಳನ್ನು ಎತ್ತಿ ತೋರಿಸಿತು.

ವಿವಿ ಪ್ಯಾಟ್ ವಿನ್ಯಾಸವನ್ನು ಬದಲಿಸಬೇಕಾಗಿದ್ದು, ಪಾರದರ್ಶಕ ಗಾಜನ್ನು ಹೊಂದಿರಬೇಕು. ಆದರೆ ಅದು ಈಗ ಅಪಾರದರ್ಶಕ ಗಾಜನ್ನು ಹೊಂದಿದ್ದು, ಒಳಗಡೆ ಬೆಳಕು ಆನ್ ಆದರೆ ಮಾತ್ರ ನಮಗೆ ವಿವಿಪ್ಯಾಟ್ ಸ್ಲಿಪ್ ಕಾಣುತ್ತದೆ ಎಂದ ಪ್ರಶಾಂತ್ ಭೂಷಣ ಅವರು ಇದೇ ವೇಳೆ ಜರ್ಮನಿಯ ಉದಾಹರಣೆಯನ್ನು ನೀಡಿದರು. ಈ ವೇಳೆ ನ್ಯಾಯಮೂರ್ತಿ ದೀಪಶಂಕರ್ ದತ್ತಾ ಜರ್ಮನಿಯ ಜನಸಂಖ್ಯೆ ಎಷ್ಟು ಎಂದು ಕೇಳಿದರು. ಆಗ ಪ್ರಶಾಂತ್ ಭೂಷಣ್ ಜರ್ಮನಿಯಲ್ಲಿ ಸುಮಾರು 6 ಕೋಟಿ ಮತದಾರರು ಮಾತ್ರ ಇದ್ದು, ಭಾರತದಲ್ಲಿ 50 ರಿಂದ 60 ಕೋಟಿ ಮತದಾರರಿದ್ದಾರೆ ಎಂದು ಹೇಳಿದರು.

ಆಗ ಮಧ್ಯಪ್ರವೇಶಿಸಿದ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ” ಭಾರತದಲ್ಲಿ 97 ಕೋಟಿ ಮತದಾರರು ನೋಂದಣಿಯಾಗಿದ್ದಾರೆ. ಬ್ಯಾಲೆಟ್ ಪೇಪರ್ ಗಳು ಇದ್ದಾಗ ಏನಾಯಿತು ಎಂದು ನಮಗೆಲ್ಲರಿಗೂ ತಿಳಿದಿದೆ” ಎಂದರು. ಅದರೊಂದಿಗೆ ಭಾರತದ ಚುನಾವಣೆಯನ್ನು ವಿದೇಶಗಳಲ್ಲಿನ ಮತದಾನದೊಂದಿಗೆ ಹೋಲಿಸಬೇಡಿ ಎಂದು ನ್ಯಾಯಮೂರ್ತಿ ದೀಪಂಕರ್ ದತ್ತಾ ಅರ್ಜಿದಾರ ವಕೀಲರಿಗೆ ಹೇಳಿದರು. ನನ್ನ ತವರು ರಾಜ್ಯ ಪಶ್ಚಿಮ ಬಂಗಾಳದ ಜನಸಂಖ್ಯೆಯು ಜರ್ಮನಿಗಿಂತ ಹೆಚ್ಚಾಗಿದೆ. ನಾವು ಯಾರನ್ನಾದರೂ ಒಬ್ಬರನ್ನು ನಂಬಬೇಕು. ಈ ರೀತಿಯ ವ್ಯವಸ್ಥೆಯನ್ನು ಕೆಡವಲು ಪ್ರಯತ್ನಿಸಬೇಡಿ” ಎಂದು ತಿಳಿಸಿದರು.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ

  • Privacy Policy
  • Contact
© Tulunadu Infomedia.

Press enter/return to begin your search