• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇವಿಎಂ ಬೇಡಾ ಎಂದವರಿಗೆ ಸುಪ್ರೀಂಕೋರ್ಟ್ ಇವತ್ತು ಹೇಳಿದ್ದು ಏನು?

Tulunadu News Posted On April 16, 2024
0


0
Shares
  • Share On Facebook
  • Tweet It

ಅಸೋಸಿಯೇಶನ್ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ ಪರ ವಾದ ಮಂಡಿಸಿದ ವಕೀಲ ಪ್ರಶಾಂತ್ ಭೂಷಣ್ ಅವರು ನಮ್ಮ ದೇಶ ಪೇಪರ್ ಬ್ಯಾಲೆಟ್ ಮತದಾನ ಪದ್ಧತಿಗೆ ಹಿಂದಿರುಗಬೇಕು ಎಂದು ವಾದ ಮಂಡಿಸಿದರು. ಇವಿಎಂಗಳಲ್ಲಿ ಚಲಾವಣೆಯ ಮತಗಳನ್ನು ವಿವಿಪ್ಯಾಟ್ ಸ್ಲಿಪ್ ಗಳೊಂದಿಗೆ ಕ್ರಾಸ್ ಚೆಕ್ ಮಾಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಬ್ಯಾಲೆಟ್ ಪೇಪರ್ ಮತದಾನ ಪದ್ಧತಿಯಲ್ಲಿರುವ ಸಮಸ್ಯೆಗಳನ್ನು ಎತ್ತಿ ತೋರಿಸಿತು.

ವಿವಿ ಪ್ಯಾಟ್ ವಿನ್ಯಾಸವನ್ನು ಬದಲಿಸಬೇಕಾಗಿದ್ದು, ಪಾರದರ್ಶಕ ಗಾಜನ್ನು ಹೊಂದಿರಬೇಕು. ಆದರೆ ಅದು ಈಗ ಅಪಾರದರ್ಶಕ ಗಾಜನ್ನು ಹೊಂದಿದ್ದು, ಒಳಗಡೆ ಬೆಳಕು ಆನ್ ಆದರೆ ಮಾತ್ರ ನಮಗೆ ವಿವಿಪ್ಯಾಟ್ ಸ್ಲಿಪ್ ಕಾಣುತ್ತದೆ ಎಂದ ಪ್ರಶಾಂತ್ ಭೂಷಣ ಅವರು ಇದೇ ವೇಳೆ ಜರ್ಮನಿಯ ಉದಾಹರಣೆಯನ್ನು ನೀಡಿದರು. ಈ ವೇಳೆ ನ್ಯಾಯಮೂರ್ತಿ ದೀಪಶಂಕರ್ ದತ್ತಾ ಜರ್ಮನಿಯ ಜನಸಂಖ್ಯೆ ಎಷ್ಟು ಎಂದು ಕೇಳಿದರು. ಆಗ ಪ್ರಶಾಂತ್ ಭೂಷಣ್ ಜರ್ಮನಿಯಲ್ಲಿ ಸುಮಾರು 6 ಕೋಟಿ ಮತದಾರರು ಮಾತ್ರ ಇದ್ದು, ಭಾರತದಲ್ಲಿ 50 ರಿಂದ 60 ಕೋಟಿ ಮತದಾರರಿದ್ದಾರೆ ಎಂದು ಹೇಳಿದರು.

ಆಗ ಮಧ್ಯಪ್ರವೇಶಿಸಿದ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ” ಭಾರತದಲ್ಲಿ 97 ಕೋಟಿ ಮತದಾರರು ನೋಂದಣಿಯಾಗಿದ್ದಾರೆ. ಬ್ಯಾಲೆಟ್ ಪೇಪರ್ ಗಳು ಇದ್ದಾಗ ಏನಾಯಿತು ಎಂದು ನಮಗೆಲ್ಲರಿಗೂ ತಿಳಿದಿದೆ” ಎಂದರು. ಅದರೊಂದಿಗೆ ಭಾರತದ ಚುನಾವಣೆಯನ್ನು ವಿದೇಶಗಳಲ್ಲಿನ ಮತದಾನದೊಂದಿಗೆ ಹೋಲಿಸಬೇಡಿ ಎಂದು ನ್ಯಾಯಮೂರ್ತಿ ದೀಪಂಕರ್ ದತ್ತಾ ಅರ್ಜಿದಾರ ವಕೀಲರಿಗೆ ಹೇಳಿದರು. ನನ್ನ ತವರು ರಾಜ್ಯ ಪಶ್ಚಿಮ ಬಂಗಾಳದ ಜನಸಂಖ್ಯೆಯು ಜರ್ಮನಿಗಿಂತ ಹೆಚ್ಚಾಗಿದೆ. ನಾವು ಯಾರನ್ನಾದರೂ ಒಬ್ಬರನ್ನು ನಂಬಬೇಕು. ಈ ರೀತಿಯ ವ್ಯವಸ್ಥೆಯನ್ನು ಕೆಡವಲು ಪ್ರಯತ್ನಿಸಬೇಡಿ” ಎಂದು ತಿಳಿಸಿದರು.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search