• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದರ್ಶನ್ ಮಂಡ್ಯದಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಚಂದ್ರು ಪರ!

Tulunadu News Posted On April 18, 2024
0


0
Shares
  • Share On Facebook
  • Tweet It

ಯಾರ್ರೀ ಡಿ ಬಾಸ್, ಮಂಡ್ಯದಲ್ಲಿ ಯಾವ ಬಾಸು ನಡೆಯುವುದಿಲ್ಲ ಎಂದು ಕಳೆದ ಬಾರಿ ಎಚ್ ಡಿ ಕುಮಾರಸ್ವಾಮಿಯವರು ಮಂಡ್ಯದಲ್ಲಿ ತಮ್ಮ ಮಗನ ವಿರುದ್ಧವಾಗಿ ಸುಮಲತಾ ಅಂಬರೀಷ್ ಪರ ಚುನಾವಣಾ ಪ್ರಚಾರ ಮಾಡುತ್ತಿದ್ದ ದರ್ಶನ್ ವಿರುದ್ಧ ಗುಡುಗಿದ್ದರು. ಆ ವಿಡಿಯೋ ಈ ಬಾರಿ ಮತ್ತೆ ವೈರಲ್ ಆಗುತ್ತಿದೆ. ಇದೇ ಸಮಯದಲ್ಲಿ ನಟ ದರ್ಶನ್ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಅದೇ ಮಂಡ್ಯದಲ್ಲಿ ಪ್ರಚಾರ ಮಾಡುತ್ತಿರುವುದು ಕಾಕತಾಳೀಯವೇ ಅಥವಾ ಉದ್ದೇಶಪೂರ್ವಕವೇ ಎನ್ನುವುದು ರಾಜಕೀಯ ವಿಶ್ಲೇಷಣೆ ಮಾಡಬಹುದಾದ ಸಂಗತಿ.

ಈ ಬಾರಿ ಮಂಡ್ಯದಲ್ಲಿ ರಾಜಕೀಯ ವಾತಾವರಣವೇ ಉಲ್ಟಾ ಆಗಿದೆ. ಹಿಂದಿನ ಲೋಕಸಭಾ ಚುನಾವಣೆಯ ಮೇಲೆ ಪರಸ್ಪರ ವಿರೋಧಿ ಪಾಳಯದಲ್ಲಿದ್ದ ಸುಮಲತಾ ಹಾಗೂ ಕುಮಾರಸ್ವಾಮಿ ಈಗ ಮೈತ್ರಿಪಕ್ಷದಲ್ಲಿದ್ದಾರೆ. ಇನ್ನು ಸುಮಲತಾ ಅವರಿಗೆ ಈ ಬಾರಿ ಟಿಕೆಟ್ ಸಿಕ್ಕಿಲ್ಲ. ಅವರು ಇಲ್ಲಿಯ ತನಕ ಬೇರೆ ಕ್ಷೇತ್ರಗಳಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದ್ದಾರೆಯೇ ಹೊರತು ಮಂಡ್ಯದಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿ ಕುಮಾರಸ್ವಾಮಿ ಪರ ಏನೂ ಪ್ರಚಾರಕ್ಕೆ ಇಳಿದಿಲ್ಲ.

ಅಮ್ಮಾ ಏನ್ ಹೇಳ್ತಾರೆಯೋ ಹಾಗೆ ಎನ್ನುತ್ತಿದ್ದ ದರ್ಶನ್ ಈ ಬಾರಿ ಮಂಡ್ಯದಲ್ಲಿ “ಅಮ್ಮ”ನ ವಿರೋಧಿ ಪಕ್ಷ ಕಾಂಗ್ರೆಸ್ಸಿನ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಪ್ರಚಾರಕ್ಕೆ ಇಳಿದಿದ್ದಾರೆ. ತಾನು ಕಾಂಗ್ರೆಸ್ ಪರ ಪ್ರಚಾರಕ್ಕೆ ಬಂದಿಲ್ಲ. ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿದ್ದೇನೆ ಎಂದು ಹೇಳುತ್ತಿರುವ ದರ್ಶನ್ ಅವರು ಇದಕ್ಕಾಗಿ ಸುಮಲತಾ ಅವರ ಬಳಿ ಅನುಮತಿ ಕೇಳಿದ್ದಾರಾ ಅಥವಾ ಸ್ವನಿರ್ಧಾರವಾ ಎನ್ನುವುದು ತಿಳಿಯುತ್ತಿಲ್ಲ. ಒಂದು ವೇಳೆ ಸುಮಲತಾ ಕಾಂಗ್ರೆಸ್ ಪರ ಪ್ರಚಾರ ಮಾಡಬೇಡಾ ಎಂದಿದ್ದರೆ ದರ್ಶನ್ ಮಾಡುತ್ತಿರಲಿಲ್ಲವೇ? ಹಾಗಾದರೆ ಸುಮಲತಾ ಮೌನ ಸಮ್ಮತಿ ಇದೆಯಾ ಎನ್ನುವುದು ಈಗ ಇರುವ ಪ್ರಶ್ನೆ

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search