• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದರ್ಶನ್ ಮಂಡ್ಯದಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಚಂದ್ರು ಪರ!

Tulunadu News Posted On April 18, 2024
0


0
Shares
  • Share On Facebook
  • Tweet It

ಯಾರ್ರೀ ಡಿ ಬಾಸ್, ಮಂಡ್ಯದಲ್ಲಿ ಯಾವ ಬಾಸು ನಡೆಯುವುದಿಲ್ಲ ಎಂದು ಕಳೆದ ಬಾರಿ ಎಚ್ ಡಿ ಕುಮಾರಸ್ವಾಮಿಯವರು ಮಂಡ್ಯದಲ್ಲಿ ತಮ್ಮ ಮಗನ ವಿರುದ್ಧವಾಗಿ ಸುಮಲತಾ ಅಂಬರೀಷ್ ಪರ ಚುನಾವಣಾ ಪ್ರಚಾರ ಮಾಡುತ್ತಿದ್ದ ದರ್ಶನ್ ವಿರುದ್ಧ ಗುಡುಗಿದ್ದರು. ಆ ವಿಡಿಯೋ ಈ ಬಾರಿ ಮತ್ತೆ ವೈರಲ್ ಆಗುತ್ತಿದೆ. ಇದೇ ಸಮಯದಲ್ಲಿ ನಟ ದರ್ಶನ್ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಅದೇ ಮಂಡ್ಯದಲ್ಲಿ ಪ್ರಚಾರ ಮಾಡುತ್ತಿರುವುದು ಕಾಕತಾಳೀಯವೇ ಅಥವಾ ಉದ್ದೇಶಪೂರ್ವಕವೇ ಎನ್ನುವುದು ರಾಜಕೀಯ ವಿಶ್ಲೇಷಣೆ ಮಾಡಬಹುದಾದ ಸಂಗತಿ.

ಈ ಬಾರಿ ಮಂಡ್ಯದಲ್ಲಿ ರಾಜಕೀಯ ವಾತಾವರಣವೇ ಉಲ್ಟಾ ಆಗಿದೆ. ಹಿಂದಿನ ಲೋಕಸಭಾ ಚುನಾವಣೆಯ ಮೇಲೆ ಪರಸ್ಪರ ವಿರೋಧಿ ಪಾಳಯದಲ್ಲಿದ್ದ ಸುಮಲತಾ ಹಾಗೂ ಕುಮಾರಸ್ವಾಮಿ ಈಗ ಮೈತ್ರಿಪಕ್ಷದಲ್ಲಿದ್ದಾರೆ. ಇನ್ನು ಸುಮಲತಾ ಅವರಿಗೆ ಈ ಬಾರಿ ಟಿಕೆಟ್ ಸಿಕ್ಕಿಲ್ಲ. ಅವರು ಇಲ್ಲಿಯ ತನಕ ಬೇರೆ ಕ್ಷೇತ್ರಗಳಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದ್ದಾರೆಯೇ ಹೊರತು ಮಂಡ್ಯದಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿ ಕುಮಾರಸ್ವಾಮಿ ಪರ ಏನೂ ಪ್ರಚಾರಕ್ಕೆ ಇಳಿದಿಲ್ಲ.

ಅಮ್ಮಾ ಏನ್ ಹೇಳ್ತಾರೆಯೋ ಹಾಗೆ ಎನ್ನುತ್ತಿದ್ದ ದರ್ಶನ್ ಈ ಬಾರಿ ಮಂಡ್ಯದಲ್ಲಿ “ಅಮ್ಮ”ನ ವಿರೋಧಿ ಪಕ್ಷ ಕಾಂಗ್ರೆಸ್ಸಿನ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಪ್ರಚಾರಕ್ಕೆ ಇಳಿದಿದ್ದಾರೆ. ತಾನು ಕಾಂಗ್ರೆಸ್ ಪರ ಪ್ರಚಾರಕ್ಕೆ ಬಂದಿಲ್ಲ. ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿದ್ದೇನೆ ಎಂದು ಹೇಳುತ್ತಿರುವ ದರ್ಶನ್ ಅವರು ಇದಕ್ಕಾಗಿ ಸುಮಲತಾ ಅವರ ಬಳಿ ಅನುಮತಿ ಕೇಳಿದ್ದಾರಾ ಅಥವಾ ಸ್ವನಿರ್ಧಾರವಾ ಎನ್ನುವುದು ತಿಳಿಯುತ್ತಿಲ್ಲ. ಒಂದು ವೇಳೆ ಸುಮಲತಾ ಕಾಂಗ್ರೆಸ್ ಪರ ಪ್ರಚಾರ ಮಾಡಬೇಡಾ ಎಂದಿದ್ದರೆ ದರ್ಶನ್ ಮಾಡುತ್ತಿರಲಿಲ್ಲವೇ? ಹಾಗಾದರೆ ಸುಮಲತಾ ಮೌನ ಸಮ್ಮತಿ ಇದೆಯಾ ಎನ್ನುವುದು ಈಗ ಇರುವ ಪ್ರಶ್ನೆ

0
Shares
  • Share On Facebook
  • Tweet It




Trending Now
ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
Tulunadu News October 22, 2025
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
Tulunadu News October 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
  • Popular Posts

    • 1
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 2
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 3
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search