• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬಿಜೆಪಿ ಮತ ಯಾಚನೆ : ಸ್ಥಿಮಿತ ಕಳೆದುಕೊಂಡು ಹಲ್ಲೆಗೆ ಯತ್ನಿಸಿದ ಕಾಂಗ್ರೆಸ್ ನಾಯಕರು!

Tulunadu News Posted On April 19, 2024


  • Share On Facebook
  • Tweet It

ಹೇಳಿ ಕೇಳಿ ದಕ್ಷಿಣಕನ್ನಡ ಜಿಲ್ಲೆ ಮೊದಲೇ ಬಿಜೆಪಿಯ ಭದ್ರಕೋಟೆ. ಅದರ ಮೇಲೆ ಮಂಗಳೂರಿಗೆ ಮೋದಿ ಬಂದು ಹೋದ ಮೇಲಂತೂ ಇಡೀ ಜಿಲ್ಲೆಯಲ್ಲಿ ಬಿಜೆಪಿ ಪರ ದೊಡ್ಡ ಅಲೆಯೇ ಎದ್ದಿದೆ. ಸಹಜವಾಗಿ ಕಾಂಗ್ರೆಸ್ ಪಡೆ ತತ್ತರಿಸಿ ಹೋಗಿದ್ದು ಆ ಪಕ್ಷದ ಎಲ್ಲಾ ನಾಯಕರು ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ ವರ್ತಿಸುತ್ತಿರುವುದು ಕಂಡು ಬರುತ್ತಿದೆ.

ನಗರದ ಚಿಲಿಂಬಿ ಪರಿಸರದ ಸಾರ್ವಜನಿಕ ರಸ್ತೆಯಲ್ಲಿ ಮಂಗಳೂರು ದಕ್ಷಿಣದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಅಶ್ವಿತ್ ಕೊಟ್ಟಾರಿಯವರ ನೇತೃತ್ವದಲ್ಲಿ ಕ್ಯಾ.ಬ್ರಿಜೇಶ್ ಚೌಟರ ಪರ ಪ್ರಚಾರ ನಡೆಸುತ್ತಿದ್ದ ವೇಳೆ ತಗಾದೆ ತೆಗೆದ ಕಾಂಗ್ರೆಸ್ಸಿಗರು ಗುಂಪುಗೂಡಿ ಬಂದು “ನೀವು ಬಿಜೆಪಿಯವರು ಇಲ್ಲಿ ಪ್ರಚಾರ ಮಾಡಬಾರದು, ಇದು ನಮ್ಮ ಜಾಗ” ಎಂದು ನೇರವಾಗಿ ಹಲ್ಲೆಗೆ ಮುಂದಾಗಿ ಸಾರ್ವಜನಿಕ ಪ್ರದೇಶದಲ್ಲಿ ಬಿಜೆಪಿಯವರ ಮತಯಾಚನೆಗೆ ಅಡ್ಡಿಪಡಿಸಲು ಯತ್ನಿಸಿದರು.

ಕೆಲವು ಕಾಂಗ್ರೆಸ್ ಕಾರ್ಯಕರ್ತರು ಇದೇ ವೇಳೆ ಉದ್ದೇಶಪೂರ್ವಕವಾಗಿ ರಸ್ತೆ ಬ್ಲಾಕ್ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಟ್ಟರೂ ಸಂಯಮ ಕಳೆದುಕೊಳ್ಳದ ಬಿಜೆಪಿ ಕಾರ್ಯಕರ್ತರು, ಯಾವುದೇ ಗಲಭೆಗೆ ಆಸ್ಪದ ನೀಡದೇ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಡುತ್ತಿದ್ದರು.

ನಂತರ ಘಟನೆಯ ಬಗ್ಗೆ ಮಾಹಿತಿ ಪಡೆದ ಶಾಸಕ ವೇದವ್ಯಾಸ ಕಾಮತರು ಕೂಡಲೇ ಅಲ್ಲಿಗೆ ಆಗಮಿಸಿ ಸಾರ್ವಜನಿಕ ಸ್ಥಳದಲ್ಲಿ ಮತಯಾಚನೆಗೆ ಅಡ್ಡಿಪಡಿಸಿದ ಕಾಂಗ್ರೆಸ್ ನಾಯಕರ ವರ್ತನೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಆದರೂ ಅಂತಹ ಘಟನೆಗಳು ದೇವಸ್ಥಾನದ ಒಳಗೆ ನಡೆದಿದ್ದರೆ ಸಿಸಿಟಿವಿ ದೃಶ್ಯವನ್ನು ಬಹಿರಂಗಪಡಿಲಿ. ಸೇರಿದ್ದ ಸಾರ್ವಜನಿಕರೂ ಸಹ ಕಾಂಗ್ರೆಸ್ಸಿನ ಈ ಪ್ರಜಾಪ್ರಭುತ್ವ ವಿರೋಧಿ ವರ್ತನೆಗೆ ಹಿಡಿ ಶಾಪ ಹಾಕುತ್ತಿದ್ದರು. ಸ್ಥಳಕ್ಕಾಗಮಿಸಿದ ಪೊಲೀಸರು ಅಲ್ಲಿನ ವಾಸ್ತವತೆಯನ್ನು ಅರಿತು ವಿನಾಕಾರಣ ಗೊಂದಲ ಸೃಷ್ಟಿಸಿದ ಕಾಂಗ್ರೆಸ್ ನಾಯಕರನ್ನು ಚದುರಿಸಲು ಯತ್ನಿಸಿದರು.

ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಅಲಿಯಾಸ್ ಕೊತ್ವಾಲ್ ಶಿಷ್ಯನ ಚಾಳಿಯನ್ನೇ ನಮ್ಮ ಜಿಲ್ಲೆಗೂ ಮುಂದುವರಿಸಿ ಗೂಂಡಾವರ್ತನೆ ತೋರಿದ ಕಾಂಗ್ರೆಸ್ ನಾಯಕರ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.

ಕಾಂಗ್ರೆಸ್ಸಿಗರ ದಬ್ಬಾಳಿಕೆಯ ಹೊರತಾಗಿಯೂ ಬಿಜೆಪಿ ಯುವಮೋರ್ಚಾದ ಕಾರ್ಯಕರ್ತರು ತಮ್ಮ ಪಕ್ಷದ ಅಭ್ಯರ್ಥಿಯ ಪರ ಮತಯಾಚನೆ ನಡೆಸಿ ಗೆದ್ದೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search