• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಿಜೆಪಿಯಿಂದ ಮುಂಬೈ ಉತ್ತರಕ್ಕೆ ಅಚ್ಚರಿಯ ಆಯ್ಕೆ!

Tulunadu News Posted On April 27, 2024
0


0
Shares
  • Share On Facebook
  • Tweet It

ಮುಂಬೈ ಉತ್ತರ ಕೇಂದ್ರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಘೋಷಣೆಯಾಗಿದ್ದ ಭಾರತೀಯ ಜನತಾ ಪಾರ್ಟಿಯ ಮಾಜಿ ಮುಖಂಡ ದಿವಂಗತ ಪ್ರಮೋದ್ ಮಹಾಜನ್ ಪುತ್ರಿ ಪೂನಂ ಮಹಾಜನ್ ಅವರ ಹೆಸರು ಕೈಬಿಟ್ಟ ಬಿಜೆಪಿ ವರಿಷ್ಠರು ಅಚ್ಚರಿಯ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದಾರೆ. ಇಡೀ ಜಗತ್ತಿನ ಗಮನ ಸೆಳೆದಿದ್ದ ಮುಂಬೈ 26/11 ದಾಳಿ ಪ್ರಕರಣದಲ್ಲಿ ಸರಕಾರಿ ವಕೀಲರಾಗಿದ್ದ ಉಜ್ವಲ್ ನಿಕ್ಕಂ ಅವರನ್ನು ಕಣಕ್ಕೆ ಇಳಿಸುವುದಾಗಿ ಘೋಷಿಸಲಾಗಿದೆ.

2011 ರಲ್ಲಿ ಮುಂಬೈನಲ್ಲಿ ನಡೆದ ದಾಳಿಯ ಪ್ರಕರಣದಲ್ಲಿ ಉಜ್ವಲ್ ನಿಕ್ಕಂ ಅವರು ಸರಕಾರಿ ವಕೀಲರಾಗಿ ಎಲ್ಲರ ಕೇಂದ್ರಬಿಂದು ಆಗಿದ್ದರು. ಆದರೆ ಪೂನಂ ಮಹಾಜನ್ ಅವರು ಹತ್ತು ವರ್ಷಗಳಿಂದ ಮುಂಬೈ ಉತ್ತರ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿದ್ದಾರೆ. ಇವರು ಬಿಜೆಪಿ ಯುವಮೋರ್ಚಾದ ಮಾಜಿ ಅಧ್ಯಕ್ಷರೂ ಹೌದು. ಆದರೆ ಇತ್ತೀಚೆಗೆ ಸಂಘಟನಾತ್ಮಕವಾಗಿ ಅಷ್ಟೇನೂ ಸಕ್ರಿಯವಾಗಿಲ್ಲದ ಕಾರಣದಿಂದ ಅವರನ್ನು ಲೋಕಸಭಾ ಸ್ಥಾನದಿಂದ ಪಕ್ಷ ಕೈಬಿಡುವ ಸೂಚನೆಯನ್ನು ಪಕ್ಷ ನೀಡಿತ್ತು.

ಈ ನಡುವೆ ಪರಂಪರಾಗತವಾಗಿ ಕಾಂಗ್ರೆಸ್ ಪ್ರಬಲವಾಗಿರುವ ಕ್ಷೇತ್ರದಲ್ಲಿ ಬಿಜೆಪಿಗೆ ಇನ್ನೊಬ್ಬ ಪ್ರಬಲ ಅಭ್ಯರ್ಥಿಯ ಅವಶ್ಯಕತೆಯೂ ಇತ್ತು. ಯಾಕೆಂದರೆ ಪೂನಂ ಮಹಾಜನ್ ಗೆಲ್ಲುವ ಮೊದಲು ಅಲ್ಲಿ ಖ್ಯಾತ ಸಿನೆಮಾ ತಾರೆ ಸುನೀಲ್ ದತ್ ಪುತ್ರಿ ಪ್ರಿಯಾ ದತ್ ಎರಡು ಬಾರಿ ಗೆದ್ದು ಸಂಸದರಾಗಿದ್ದರು. ಕೊನೆಗೂ ಬಿಜೆಪಿಗೆ ಯೋಗ್ಯ ಅಭ್ಯರ್ಥಿ ಸಿಕ್ಕಿದ್ದಾರೆ. ಲೋಕಸಭಾ ಅಭ್ಯರ್ಥಿ ಆಗಲು ನಿಕ್ಕಂ ಕೊನೆಗೂ ಹಲವು ಸುತ್ತಿನ ಮಾತುಕತೆಯ ಬಳಿಕ ಒಪ್ಪಿಗೆ ನೀಡಿದ್ದು ಬಿಜೆಪಿಗೆ ಸಮಾಧಾನ ತಂದಿದೆ.
ಈ ಕ್ಷೇತ್ರದಲ್ಲಿಈ ಬಾರಿ ಕಾಂಗ್ರೆಸ್ ಧಾರಾವಿ ಶಾಸಕಿ ವರ್ಷಾ ಗಾಯಕ್ವಾಡ್ ಅವರನ್ನು ಕಣಕ್ಕೆ ಇಳಿಸಿದೆ. ಮುಂಬೈ ಉತ್ತರಕ್ಕೆ ಮೇ 20 ರಂದು ಐದನೇ ಹಂತದಲ್ಲಿ ಚುನಾವಣೆ ನಡೆಯಲಿದೆ.

0
Shares
  • Share On Facebook
  • Tweet It




Trending Now
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
Tulunadu News March 2, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
  • Popular Posts

    • 1
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 2
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 3
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • 4
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 5
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!

  • Privacy Policy
  • Contact
© Tulunadu Infomedia.

Press enter/return to begin your search