• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಿಜೆಪಿಯಿಂದ ಮುಂಬೈ ಉತ್ತರಕ್ಕೆ ಅಚ್ಚರಿಯ ಆಯ್ಕೆ!

Tulunadu News Posted On April 27, 2024
0


0
Shares
  • Share On Facebook
  • Tweet It

ಮುಂಬೈ ಉತ್ತರ ಕೇಂದ್ರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಘೋಷಣೆಯಾಗಿದ್ದ ಭಾರತೀಯ ಜನತಾ ಪಾರ್ಟಿಯ ಮಾಜಿ ಮುಖಂಡ ದಿವಂಗತ ಪ್ರಮೋದ್ ಮಹಾಜನ್ ಪುತ್ರಿ ಪೂನಂ ಮಹಾಜನ್ ಅವರ ಹೆಸರು ಕೈಬಿಟ್ಟ ಬಿಜೆಪಿ ವರಿಷ್ಠರು ಅಚ್ಚರಿಯ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದಾರೆ. ಇಡೀ ಜಗತ್ತಿನ ಗಮನ ಸೆಳೆದಿದ್ದ ಮುಂಬೈ 26/11 ದಾಳಿ ಪ್ರಕರಣದಲ್ಲಿ ಸರಕಾರಿ ವಕೀಲರಾಗಿದ್ದ ಉಜ್ವಲ್ ನಿಕ್ಕಂ ಅವರನ್ನು ಕಣಕ್ಕೆ ಇಳಿಸುವುದಾಗಿ ಘೋಷಿಸಲಾಗಿದೆ.

2011 ರಲ್ಲಿ ಮುಂಬೈನಲ್ಲಿ ನಡೆದ ದಾಳಿಯ ಪ್ರಕರಣದಲ್ಲಿ ಉಜ್ವಲ್ ನಿಕ್ಕಂ ಅವರು ಸರಕಾರಿ ವಕೀಲರಾಗಿ ಎಲ್ಲರ ಕೇಂದ್ರಬಿಂದು ಆಗಿದ್ದರು. ಆದರೆ ಪೂನಂ ಮಹಾಜನ್ ಅವರು ಹತ್ತು ವರ್ಷಗಳಿಂದ ಮುಂಬೈ ಉತ್ತರ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿದ್ದಾರೆ. ಇವರು ಬಿಜೆಪಿ ಯುವಮೋರ್ಚಾದ ಮಾಜಿ ಅಧ್ಯಕ್ಷರೂ ಹೌದು. ಆದರೆ ಇತ್ತೀಚೆಗೆ ಸಂಘಟನಾತ್ಮಕವಾಗಿ ಅಷ್ಟೇನೂ ಸಕ್ರಿಯವಾಗಿಲ್ಲದ ಕಾರಣದಿಂದ ಅವರನ್ನು ಲೋಕಸಭಾ ಸ್ಥಾನದಿಂದ ಪಕ್ಷ ಕೈಬಿಡುವ ಸೂಚನೆಯನ್ನು ಪಕ್ಷ ನೀಡಿತ್ತು.

ಈ ನಡುವೆ ಪರಂಪರಾಗತವಾಗಿ ಕಾಂಗ್ರೆಸ್ ಪ್ರಬಲವಾಗಿರುವ ಕ್ಷೇತ್ರದಲ್ಲಿ ಬಿಜೆಪಿಗೆ ಇನ್ನೊಬ್ಬ ಪ್ರಬಲ ಅಭ್ಯರ್ಥಿಯ ಅವಶ್ಯಕತೆಯೂ ಇತ್ತು. ಯಾಕೆಂದರೆ ಪೂನಂ ಮಹಾಜನ್ ಗೆಲ್ಲುವ ಮೊದಲು ಅಲ್ಲಿ ಖ್ಯಾತ ಸಿನೆಮಾ ತಾರೆ ಸುನೀಲ್ ದತ್ ಪುತ್ರಿ ಪ್ರಿಯಾ ದತ್ ಎರಡು ಬಾರಿ ಗೆದ್ದು ಸಂಸದರಾಗಿದ್ದರು. ಕೊನೆಗೂ ಬಿಜೆಪಿಗೆ ಯೋಗ್ಯ ಅಭ್ಯರ್ಥಿ ಸಿಕ್ಕಿದ್ದಾರೆ. ಲೋಕಸಭಾ ಅಭ್ಯರ್ಥಿ ಆಗಲು ನಿಕ್ಕಂ ಕೊನೆಗೂ ಹಲವು ಸುತ್ತಿನ ಮಾತುಕತೆಯ ಬಳಿಕ ಒಪ್ಪಿಗೆ ನೀಡಿದ್ದು ಬಿಜೆಪಿಗೆ ಸಮಾಧಾನ ತಂದಿದೆ.
ಈ ಕ್ಷೇತ್ರದಲ್ಲಿಈ ಬಾರಿ ಕಾಂಗ್ರೆಸ್ ಧಾರಾವಿ ಶಾಸಕಿ ವರ್ಷಾ ಗಾಯಕ್ವಾಡ್ ಅವರನ್ನು ಕಣಕ್ಕೆ ಇಳಿಸಿದೆ. ಮುಂಬೈ ಉತ್ತರಕ್ಕೆ ಮೇ 20 ರಂದು ಐದನೇ ಹಂತದಲ್ಲಿ ಚುನಾವಣೆ ನಡೆಯಲಿದೆ.

0
Shares
  • Share On Facebook
  • Tweet It




Trending Now
ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
Tulunadu News August 22, 2025
ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
Tulunadu News August 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
    • ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!
    • ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
    • ಇನ್ನು ವಿಮಾನದಂತೆಯೆ ರೈಲಿನಲ್ಲಿಯೂ ಲಗೇಜ್ ತೂಕದ ಪರಿಶೀಲನೆ! ಪ್ರಯಾಣಿಕರು ತಿಳಿದುಕೊಳ್ಳಬೇಕಾದ ವಿಷಯಗಳು...
    • ಧರ್ಮಸ್ಥಳದ ಷಡ್ಯಂತ್ರದ ಹಿಂದೆ ಸಸಿಕಾಂತ್ ಸೆಂಥಿಲ್ ಕೈವಾಡ ಎಂದ ಜನಾರ್ಧನ ರೆಡ್ಡಿ!
    • ಕೆಂಪುಕಲ್ಲು ಓವರ್ ಲೋಡ್ ಸಾಗಾಟ! ಕೇಸ್ ದಾಖಲು
  • Popular Posts

    • 1
      ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • 2
      ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
    • 3
      ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • 4
      ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • 5
      ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!

  • Privacy Policy
  • Contact
© Tulunadu Infomedia.

Press enter/return to begin your search