• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಿಜೆಪಿಯಿಂದ ಮುಂಬೈ ಉತ್ತರಕ್ಕೆ ಅಚ್ಚರಿಯ ಆಯ್ಕೆ!

Tulunadu News Posted On April 27, 2024
0


0
Shares
  • Share On Facebook
  • Tweet It

ಮುಂಬೈ ಉತ್ತರ ಕೇಂದ್ರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಘೋಷಣೆಯಾಗಿದ್ದ ಭಾರತೀಯ ಜನತಾ ಪಾರ್ಟಿಯ ಮಾಜಿ ಮುಖಂಡ ದಿವಂಗತ ಪ್ರಮೋದ್ ಮಹಾಜನ್ ಪುತ್ರಿ ಪೂನಂ ಮಹಾಜನ್ ಅವರ ಹೆಸರು ಕೈಬಿಟ್ಟ ಬಿಜೆಪಿ ವರಿಷ್ಠರು ಅಚ್ಚರಿಯ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದಾರೆ. ಇಡೀ ಜಗತ್ತಿನ ಗಮನ ಸೆಳೆದಿದ್ದ ಮುಂಬೈ 26/11 ದಾಳಿ ಪ್ರಕರಣದಲ್ಲಿ ಸರಕಾರಿ ವಕೀಲರಾಗಿದ್ದ ಉಜ್ವಲ್ ನಿಕ್ಕಂ ಅವರನ್ನು ಕಣಕ್ಕೆ ಇಳಿಸುವುದಾಗಿ ಘೋಷಿಸಲಾಗಿದೆ.

2011 ರಲ್ಲಿ ಮುಂಬೈನಲ್ಲಿ ನಡೆದ ದಾಳಿಯ ಪ್ರಕರಣದಲ್ಲಿ ಉಜ್ವಲ್ ನಿಕ್ಕಂ ಅವರು ಸರಕಾರಿ ವಕೀಲರಾಗಿ ಎಲ್ಲರ ಕೇಂದ್ರಬಿಂದು ಆಗಿದ್ದರು. ಆದರೆ ಪೂನಂ ಮಹಾಜನ್ ಅವರು ಹತ್ತು ವರ್ಷಗಳಿಂದ ಮುಂಬೈ ಉತ್ತರ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿದ್ದಾರೆ. ಇವರು ಬಿಜೆಪಿ ಯುವಮೋರ್ಚಾದ ಮಾಜಿ ಅಧ್ಯಕ್ಷರೂ ಹೌದು. ಆದರೆ ಇತ್ತೀಚೆಗೆ ಸಂಘಟನಾತ್ಮಕವಾಗಿ ಅಷ್ಟೇನೂ ಸಕ್ರಿಯವಾಗಿಲ್ಲದ ಕಾರಣದಿಂದ ಅವರನ್ನು ಲೋಕಸಭಾ ಸ್ಥಾನದಿಂದ ಪಕ್ಷ ಕೈಬಿಡುವ ಸೂಚನೆಯನ್ನು ಪಕ್ಷ ನೀಡಿತ್ತು.

ಈ ನಡುವೆ ಪರಂಪರಾಗತವಾಗಿ ಕಾಂಗ್ರೆಸ್ ಪ್ರಬಲವಾಗಿರುವ ಕ್ಷೇತ್ರದಲ್ಲಿ ಬಿಜೆಪಿಗೆ ಇನ್ನೊಬ್ಬ ಪ್ರಬಲ ಅಭ್ಯರ್ಥಿಯ ಅವಶ್ಯಕತೆಯೂ ಇತ್ತು. ಯಾಕೆಂದರೆ ಪೂನಂ ಮಹಾಜನ್ ಗೆಲ್ಲುವ ಮೊದಲು ಅಲ್ಲಿ ಖ್ಯಾತ ಸಿನೆಮಾ ತಾರೆ ಸುನೀಲ್ ದತ್ ಪುತ್ರಿ ಪ್ರಿಯಾ ದತ್ ಎರಡು ಬಾರಿ ಗೆದ್ದು ಸಂಸದರಾಗಿದ್ದರು. ಕೊನೆಗೂ ಬಿಜೆಪಿಗೆ ಯೋಗ್ಯ ಅಭ್ಯರ್ಥಿ ಸಿಕ್ಕಿದ್ದಾರೆ. ಲೋಕಸಭಾ ಅಭ್ಯರ್ಥಿ ಆಗಲು ನಿಕ್ಕಂ ಕೊನೆಗೂ ಹಲವು ಸುತ್ತಿನ ಮಾತುಕತೆಯ ಬಳಿಕ ಒಪ್ಪಿಗೆ ನೀಡಿದ್ದು ಬಿಜೆಪಿಗೆ ಸಮಾಧಾನ ತಂದಿದೆ.
ಈ ಕ್ಷೇತ್ರದಲ್ಲಿಈ ಬಾರಿ ಕಾಂಗ್ರೆಸ್ ಧಾರಾವಿ ಶಾಸಕಿ ವರ್ಷಾ ಗಾಯಕ್ವಾಡ್ ಅವರನ್ನು ಕಣಕ್ಕೆ ಇಳಿಸಿದೆ. ಮುಂಬೈ ಉತ್ತರಕ್ಕೆ ಮೇ 20 ರಂದು ಐದನೇ ಹಂತದಲ್ಲಿ ಚುನಾವಣೆ ನಡೆಯಲಿದೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search