• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸಿನಿಮಾ ಸುದ್ದಿ 

ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಖ್ಯಾತ ನಟಿ ಅಮೃತಾ

Tulunadu News Posted On April 29, 2024
0


0
Shares
  • Share On Facebook
  • Tweet It

ಆಕೆಯ ಕುಟುಂಬದಲ್ಲಿ ಮದುವೆಯೊಂದು ನಿಗದಿಯಾಗಿತ್ತು. ಅದಕ್ಕಾಗಿ ಮುಂಬೈನಿಂದ ಬಿಹಾರದ ಭಾಗಲ್ಪುರಕ್ಕೆ ಆಕೆ ಬಂದಿದ್ದಳು. ಅಲ್ಲಿ ಕೆಲವು ದಿನ ವಾಸ್ತವ್ಯ ಮಾಡಲು ಆಕೆ ಯೋಜಿಸಿದ್ದಳು. ಆದರೆ ಅಚಾನಕ್ ಆಗಿ ತಾನು ವಾಸವಿದ್ದ ಫ್ಲಾಟ್ ನ ಕೋಣೆಯ ಫ್ಯಾನ್ ಗೆ ನೇಣು ಬಿಗಿದು ಆಕೆ ತನ್ನ ಜೀವನವನ್ನು ಕೊನೆಗಾಣಿಸಿದ್ದಾಳೆ. ಆಕೆಯ ಹೆಸರು ಅಮೃತಾ.
ಅಮೃತಾ ಭೋಜಪುರಿ ಸಿನೆಮಾದ ಖ್ಯಾತ ನಟಿ. ವಾಸವಿದ್ದದ್ದು ಮುಂಬೈನಲ್ಲಿ. ಮದುವೆಯಾಗಿ ಗಂಡನ ಜೊತೆ ವಾಸವಿದ್ದಳು. ಮೊನ್ನೆಯಷ್ಟೇ ಸಂಬಂಧಿಕರೊಬ್ಬರ ಮದುವೆಗಾಗಿ ಜಗಲ್ಪುರಕ್ಕೆ ಬಂದಿದ್ದಳು. ಇಲ್ಲಿಯೇ ತನ್ನ ಜೀವನವನ್ನು ಅಂತ್ಯಗೊಳಿಸಿದ್ದಾಳೆ. ಸಾವಿನ ಮೊದಲು ಯಾವುದೇ ಡೆತ್ ನೋಟ್ ಬರಿಯದೇ ಇದ್ದರೂ ತಾನು ಸಾಯುವ ಒಂದು ಗಂಟೆಯ ಮೊದಲು ಒಂದು ಸ್ಟೇಟಸ್ ಹಾಕಿದ್ದಾಳೆ. ಅದರಲ್ಲಿ “ಆತ ಎರಡು ದೋಣಿಗಳಲ್ಲಿ ಸಾಗುತ್ತಾ ಜೀವನ ಕಳೆಯುವುದು ಬೇಡಾ. ನನ್ನ ದೋಣಿಯನ್ನು ಮುಳುಗಿಸಿ ಅವನ ಜೀವನ ಪ್ರಯಣ ಸುಲಭವಾಗುವಂತೆ ಮಾಡುತ್ತೇನೆ” ಹೀಗೆ ಬರೆದುಕೊಂಡು ಆಕೆ ಸಾವಿಗೆ ಶರಣಾಗಿದ್ದಾಳೆ.


ಆಕೆಯ ಹತ್ತಿರದ ಸಂಬಂಧಿಗಳ ಪ್ರಕಾರ ಆಕೆ ಕೆಲವು ಸಮಯದಿಂದ ಡಿಪ್ರೆಶನ್ ಮತ್ತು ಇತರ ಮಾನಸಿಕ ಒತ್ತಡದಿಂದ ಬಳಲುತ್ತಿದ್ದಳು. ಅದಕ್ಕೆ ಚಿಕಿತ್ಸೆಯನ್ನು ಕೂಡ ಪಡೆಯುತ್ತಿದ್ದಳು. ಸದ್ಯ ಪೊಲೀಸರು ತಮ್ಮ ತನಿಖೆಯಿಂದ ನಟಿ ತೀವ್ರ ಹತಾಶೆಯಿಂದ ಬಳಲಿ ಈ ನಿರ್ಧಾರ ಕೈಗೊಂಡಿದ್ದಾಳೆ ಎನ್ನುವ ತೀರ್ಮಾನಕ್ಕೆ ಬಂದಿದ್ದಾರೆ.
ಈ ಬಗ್ಗೆ ವಿಶೇಷ ತಂಡವನ್ನು ರಚಿಸಿ ಪೂರ್ಣ ಪ್ರಮಾಣದಲ್ಲಿ ತನಿಖೆ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಅಮೃತಾ ಭೋಜಪುರಿ ಖ್ಯಾತ ತಾರೆ ಕೇಸರಿ ಲಾಲ್ ಯಾದವ್ ಅವರೊಂದಿಗೆ ದಿವಾನಪನ್ ಸಿನೆಮಾದಲ್ಲಿ ನಟಿಸುತ್ತಿದ್ದರು.

0
Shares
  • Share On Facebook
  • Tweet It


- Advertisement -


Trending Now
ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
Tulunadu News June 25, 2025
ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
Tulunadu News June 25, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
    • ನಮ್ಮ ಸರಕಾರವಿದ್ದೇ ಒಂದು ಚರಂಡಿ ಮಾಡಲು ಆಗಿಲ್ಲ - ಕಾಂಗ್ರೆಸ್ ಶಾಸಕ ಬಹಿರಂಗ ಬೇಸರ!
    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
  • Popular Posts

    • 1
      ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • 2
      ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
    • 3
      ನಮ್ಮ ಸರಕಾರವಿದ್ದೇ ಒಂದು ಚರಂಡಿ ಮಾಡಲು ಆಗಿಲ್ಲ - ಕಾಂಗ್ರೆಸ್ ಶಾಸಕ ಬಹಿರಂಗ ಬೇಸರ!
    • 4
      ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search