• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸಿನಿಮಾ ಸುದ್ದಿ 

ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಖ್ಯಾತ ನಟಿ ಅಮೃತಾ

Tulunadu News Posted On April 29, 2024
0


0
Shares
  • Share On Facebook
  • Tweet It

ಆಕೆಯ ಕುಟುಂಬದಲ್ಲಿ ಮದುವೆಯೊಂದು ನಿಗದಿಯಾಗಿತ್ತು. ಅದಕ್ಕಾಗಿ ಮುಂಬೈನಿಂದ ಬಿಹಾರದ ಭಾಗಲ್ಪುರಕ್ಕೆ ಆಕೆ ಬಂದಿದ್ದಳು. ಅಲ್ಲಿ ಕೆಲವು ದಿನ ವಾಸ್ತವ್ಯ ಮಾಡಲು ಆಕೆ ಯೋಜಿಸಿದ್ದಳು. ಆದರೆ ಅಚಾನಕ್ ಆಗಿ ತಾನು ವಾಸವಿದ್ದ ಫ್ಲಾಟ್ ನ ಕೋಣೆಯ ಫ್ಯಾನ್ ಗೆ ನೇಣು ಬಿಗಿದು ಆಕೆ ತನ್ನ ಜೀವನವನ್ನು ಕೊನೆಗಾಣಿಸಿದ್ದಾಳೆ. ಆಕೆಯ ಹೆಸರು ಅಮೃತಾ.
ಅಮೃತಾ ಭೋಜಪುರಿ ಸಿನೆಮಾದ ಖ್ಯಾತ ನಟಿ. ವಾಸವಿದ್ದದ್ದು ಮುಂಬೈನಲ್ಲಿ. ಮದುವೆಯಾಗಿ ಗಂಡನ ಜೊತೆ ವಾಸವಿದ್ದಳು. ಮೊನ್ನೆಯಷ್ಟೇ ಸಂಬಂಧಿಕರೊಬ್ಬರ ಮದುವೆಗಾಗಿ ಜಗಲ್ಪುರಕ್ಕೆ ಬಂದಿದ್ದಳು. ಇಲ್ಲಿಯೇ ತನ್ನ ಜೀವನವನ್ನು ಅಂತ್ಯಗೊಳಿಸಿದ್ದಾಳೆ. ಸಾವಿನ ಮೊದಲು ಯಾವುದೇ ಡೆತ್ ನೋಟ್ ಬರಿಯದೇ ಇದ್ದರೂ ತಾನು ಸಾಯುವ ಒಂದು ಗಂಟೆಯ ಮೊದಲು ಒಂದು ಸ್ಟೇಟಸ್ ಹಾಕಿದ್ದಾಳೆ. ಅದರಲ್ಲಿ “ಆತ ಎರಡು ದೋಣಿಗಳಲ್ಲಿ ಸಾಗುತ್ತಾ ಜೀವನ ಕಳೆಯುವುದು ಬೇಡಾ. ನನ್ನ ದೋಣಿಯನ್ನು ಮುಳುಗಿಸಿ ಅವನ ಜೀವನ ಪ್ರಯಣ ಸುಲಭವಾಗುವಂತೆ ಮಾಡುತ್ತೇನೆ” ಹೀಗೆ ಬರೆದುಕೊಂಡು ಆಕೆ ಸಾವಿಗೆ ಶರಣಾಗಿದ್ದಾಳೆ.


ಆಕೆಯ ಹತ್ತಿರದ ಸಂಬಂಧಿಗಳ ಪ್ರಕಾರ ಆಕೆ ಕೆಲವು ಸಮಯದಿಂದ ಡಿಪ್ರೆಶನ್ ಮತ್ತು ಇತರ ಮಾನಸಿಕ ಒತ್ತಡದಿಂದ ಬಳಲುತ್ತಿದ್ದಳು. ಅದಕ್ಕೆ ಚಿಕಿತ್ಸೆಯನ್ನು ಕೂಡ ಪಡೆಯುತ್ತಿದ್ದಳು. ಸದ್ಯ ಪೊಲೀಸರು ತಮ್ಮ ತನಿಖೆಯಿಂದ ನಟಿ ತೀವ್ರ ಹತಾಶೆಯಿಂದ ಬಳಲಿ ಈ ನಿರ್ಧಾರ ಕೈಗೊಂಡಿದ್ದಾಳೆ ಎನ್ನುವ ತೀರ್ಮಾನಕ್ಕೆ ಬಂದಿದ್ದಾರೆ.
ಈ ಬಗ್ಗೆ ವಿಶೇಷ ತಂಡವನ್ನು ರಚಿಸಿ ಪೂರ್ಣ ಪ್ರಮಾಣದಲ್ಲಿ ತನಿಖೆ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಅಮೃತಾ ಭೋಜಪುರಿ ಖ್ಯಾತ ತಾರೆ ಕೇಸರಿ ಲಾಲ್ ಯಾದವ್ ಅವರೊಂದಿಗೆ ದಿವಾನಪನ್ ಸಿನೆಮಾದಲ್ಲಿ ನಟಿಸುತ್ತಿದ್ದರು.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!
  • Popular Posts

    • 1
      ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • 2
      ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!

  • Privacy Policy
  • Contact
© Tulunadu Infomedia.

Press enter/return to begin your search