• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಖ್ಯಾತ ನಟಿ ಅಮೃತಾ

Tulunadu News Posted On April 29, 2024


  • Share On Facebook
  • Tweet It

ಆಕೆಯ ಕುಟುಂಬದಲ್ಲಿ ಮದುವೆಯೊಂದು ನಿಗದಿಯಾಗಿತ್ತು. ಅದಕ್ಕಾಗಿ ಮುಂಬೈನಿಂದ ಬಿಹಾರದ ಭಾಗಲ್ಪುರಕ್ಕೆ ಆಕೆ ಬಂದಿದ್ದಳು. ಅಲ್ಲಿ ಕೆಲವು ದಿನ ವಾಸ್ತವ್ಯ ಮಾಡಲು ಆಕೆ ಯೋಜಿಸಿದ್ದಳು. ಆದರೆ ಅಚಾನಕ್ ಆಗಿ ತಾನು ವಾಸವಿದ್ದ ಫ್ಲಾಟ್ ನ ಕೋಣೆಯ ಫ್ಯಾನ್ ಗೆ ನೇಣು ಬಿಗಿದು ಆಕೆ ತನ್ನ ಜೀವನವನ್ನು ಕೊನೆಗಾಣಿಸಿದ್ದಾಳೆ. ಆಕೆಯ ಹೆಸರು ಅಮೃತಾ.
ಅಮೃತಾ ಭೋಜಪುರಿ ಸಿನೆಮಾದ ಖ್ಯಾತ ನಟಿ. ವಾಸವಿದ್ದದ್ದು ಮುಂಬೈನಲ್ಲಿ. ಮದುವೆಯಾಗಿ ಗಂಡನ ಜೊತೆ ವಾಸವಿದ್ದಳು. ಮೊನ್ನೆಯಷ್ಟೇ ಸಂಬಂಧಿಕರೊಬ್ಬರ ಮದುವೆಗಾಗಿ ಜಗಲ್ಪುರಕ್ಕೆ ಬಂದಿದ್ದಳು. ಇಲ್ಲಿಯೇ ತನ್ನ ಜೀವನವನ್ನು ಅಂತ್ಯಗೊಳಿಸಿದ್ದಾಳೆ. ಸಾವಿನ ಮೊದಲು ಯಾವುದೇ ಡೆತ್ ನೋಟ್ ಬರಿಯದೇ ಇದ್ದರೂ ತಾನು ಸಾಯುವ ಒಂದು ಗಂಟೆಯ ಮೊದಲು ಒಂದು ಸ್ಟೇಟಸ್ ಹಾಕಿದ್ದಾಳೆ. ಅದರಲ್ಲಿ “ಆತ ಎರಡು ದೋಣಿಗಳಲ್ಲಿ ಸಾಗುತ್ತಾ ಜೀವನ ಕಳೆಯುವುದು ಬೇಡಾ. ನನ್ನ ದೋಣಿಯನ್ನು ಮುಳುಗಿಸಿ ಅವನ ಜೀವನ ಪ್ರಯಣ ಸುಲಭವಾಗುವಂತೆ ಮಾಡುತ್ತೇನೆ” ಹೀಗೆ ಬರೆದುಕೊಂಡು ಆಕೆ ಸಾವಿಗೆ ಶರಣಾಗಿದ್ದಾಳೆ.


ಆಕೆಯ ಹತ್ತಿರದ ಸಂಬಂಧಿಗಳ ಪ್ರಕಾರ ಆಕೆ ಕೆಲವು ಸಮಯದಿಂದ ಡಿಪ್ರೆಶನ್ ಮತ್ತು ಇತರ ಮಾನಸಿಕ ಒತ್ತಡದಿಂದ ಬಳಲುತ್ತಿದ್ದಳು. ಅದಕ್ಕೆ ಚಿಕಿತ್ಸೆಯನ್ನು ಕೂಡ ಪಡೆಯುತ್ತಿದ್ದಳು. ಸದ್ಯ ಪೊಲೀಸರು ತಮ್ಮ ತನಿಖೆಯಿಂದ ನಟಿ ತೀವ್ರ ಹತಾಶೆಯಿಂದ ಬಳಲಿ ಈ ನಿರ್ಧಾರ ಕೈಗೊಂಡಿದ್ದಾಳೆ ಎನ್ನುವ ತೀರ್ಮಾನಕ್ಕೆ ಬಂದಿದ್ದಾರೆ.
ಈ ಬಗ್ಗೆ ವಿಶೇಷ ತಂಡವನ್ನು ರಚಿಸಿ ಪೂರ್ಣ ಪ್ರಮಾಣದಲ್ಲಿ ತನಿಖೆ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಅಮೃತಾ ಭೋಜಪುರಿ ಖ್ಯಾತ ತಾರೆ ಕೇಸರಿ ಲಾಲ್ ಯಾದವ್ ಅವರೊಂದಿಗೆ ದಿವಾನಪನ್ ಸಿನೆಮಾದಲ್ಲಿ ನಟಿಸುತ್ತಿದ್ದರು.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search