• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೂರತ್ ನಂತರ ಈಗ ಇಂದೋರ್: ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಆಘಾತ!

Tulunadu News Posted On April 29, 2024
0


0
Shares
  • Share On Facebook
  • Tweet It

ಸೂರತ್ ನಲ್ಲಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾದ ನಂತರ ಈಗ ಅದು ಮಧ್ಯಪ್ರದೇಶದಲ್ಲಿಯೂ ಪುನರಾವರ್ತನೆಯಾಗುತ್ತದೆಯೋ ಎಂಬ ಭಾವನೆ ವ್ಯಕ್ತವಾಗುತ್ತಿದೆ. ಇಂದೋರ್ ಕಾಂಗ್ರೆಸ್ ಅಭ್ಯರ್ಥಿ ತಮ್ಮ ನಾಮಪತ್ರವನ್ನು ಹಿಂದಕ್ಕೆ ಪಡೆದುಕೊಂಡು ಕಾಂಗ್ರೆಸ್ ಪಕ್ಷಕ್ಕೆ ಮಧ್ಯಪ್ರದೇಶದಲ್ಲಿ ದೊಡ್ಡ ಆಘಾತ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಅಕ್ಷತ್ ಕ್ರಾಂತಿ ಕಣಕ್ಕೆ ಇಳಿದಿದ್ದರು. ಮೇ 13 ರಂದು ಇಂದೋರ್ ಲೋಕಸಭಾ ಕ್ಷೇತ್ರಕ್ಕೆ ಮತದಾನ ನಡೆಯಲಿತ್ತು. ಏಪ್ರಿಲ್ 29 ನಾಮಪತ್ರ ಹಿಂದಕ್ಕೆ ಪಡೆದುಕೊಳ್ಳಲು ಕೊನೆಯ ದಿನವಾಗಿತ್ತು. ಈ ನಡುವೆ ಕಾಂಗ್ರೆಸ್ ಅಭ್ಯರ್ಥಿ ತಮ್ಮ ನಾಮಪತ್ರವನ್ನು ಹಿಂದಕ್ಕೆ ಪಡೆದುಕೊಂಡಿದ್ದಾರೆ.

ಅವರು ಯಾವುದೇ ಕ್ಷಣದಲ್ಲಿಯೂ ಭಾರತೀಯ ಜನತಾ ಪಾರ್ಟಿಗೆ ಸೇರುವ ಸೂಚನೆಗಳು ಸಿಗುತ್ತಿವೆ. ಮಧ್ಯಪ್ರದೇಶದ ಹಿರಿಯ ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗೀಯ ಅವರೊಂದಿಗೆ ಕಾಂಗ್ರೆಸ್ ಅಭ್ಯರ್ಥಿ ಅಕ್ಷತ್ ಕ್ರಾಂತಿ ಕಾರಿನಲ್ಲಿ ತೆರಳುತ್ತಿರುವ ಫೋಟೋ ವೈರಲ್ ಆಗಿದೆ.

ಇನ್ನು ಕಾಂಗ್ರೆಸ್ ಆ ಕ್ಷೇತ್ರದಿಂದ ಕಣಕ್ಕೆ ಇಳಿಸಿದ್ದ ಡಮ್ಮಿ ಅಭ್ಯರ್ಥಿಯ ನಾಮಪತ್ರ ನಿನ್ನೆಯೇ ತಿರಸ್ಕೃತಗೊಂಡಿತ್ತು. ಆದ್ದರಿಂದ ಕಾಂಗ್ರೆಸ್ಸಿನಿಂದ ಅಧಿಕೃತ ಅಭ್ಯರ್ಥಿಯೇ ಉಳಿದಂತಾಗಿತ್ತು. ಆದರೆ ನಾಮಪತ್ರ ಹಿಂದಕ್ಕೆ ಪಡೆದುಕೊಳ್ಳುವ ಕೊನೆಯ ದಿನ ಕಾಂಗ್ರೆಸ್ ಪಕ್ಷಕ್ಕೆ ಊಹಿಸಲಾರದ ಹೊಡೆತ ಸಿಕ್ಕಿದೆ. ಇನ್ನು ಅಲ್ಲಿ ಪಕ್ಷೇತರ ಅಭ್ಯರ್ಥಿಗಳು ಒಂದಿಷ್ಟು ಜನ ಇದ್ದು, ಅವರು ಕೂಡ ಹಿಂದಕ್ಕೆ ಪಡೆದುಕೊಂಡರೆ ಇಂದೋರ್ ಮತ್ತೊಂದು ಸೂರತ್ ಆಗಲಿದೆ.
ಚುನಾವಣೆಯ ಇನ್ನೂ ಮೂರನೇ ಹಂತದ ಮೊದಲೇ ಇಬ್ಬರು ಬಿಜೆಪಿ ಸಂಸದರು ಆಯ್ಕೆಯಾದಂತೆ ಆಗಿದೆ. ಬಿಜೆಪಿಯಲ್ಲಿ ಈ ಬಗ್ಗೆ ಸಂಭ್ರಮದ ವಾತಾವರಣ ಮೂಡಿದ್ದರೆ ಕಾಂಗ್ರೆಸ್ ಇದರಿಂದ ಚಿಂತಿಗೀಡಾಗಿದೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ

  • Privacy Policy
  • Contact
© Tulunadu Infomedia.

Press enter/return to begin your search