• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೂರತ್ ನಂತರ ಈಗ ಇಂದೋರ್: ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಆಘಾತ!

Tulunadu News Posted On April 29, 2024
0


0
Shares
  • Share On Facebook
  • Tweet It

ಸೂರತ್ ನಲ್ಲಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾದ ನಂತರ ಈಗ ಅದು ಮಧ್ಯಪ್ರದೇಶದಲ್ಲಿಯೂ ಪುನರಾವರ್ತನೆಯಾಗುತ್ತದೆಯೋ ಎಂಬ ಭಾವನೆ ವ್ಯಕ್ತವಾಗುತ್ತಿದೆ. ಇಂದೋರ್ ಕಾಂಗ್ರೆಸ್ ಅಭ್ಯರ್ಥಿ ತಮ್ಮ ನಾಮಪತ್ರವನ್ನು ಹಿಂದಕ್ಕೆ ಪಡೆದುಕೊಂಡು ಕಾಂಗ್ರೆಸ್ ಪಕ್ಷಕ್ಕೆ ಮಧ್ಯಪ್ರದೇಶದಲ್ಲಿ ದೊಡ್ಡ ಆಘಾತ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಅಕ್ಷತ್ ಕ್ರಾಂತಿ ಕಣಕ್ಕೆ ಇಳಿದಿದ್ದರು. ಮೇ 13 ರಂದು ಇಂದೋರ್ ಲೋಕಸಭಾ ಕ್ಷೇತ್ರಕ್ಕೆ ಮತದಾನ ನಡೆಯಲಿತ್ತು. ಏಪ್ರಿಲ್ 29 ನಾಮಪತ್ರ ಹಿಂದಕ್ಕೆ ಪಡೆದುಕೊಳ್ಳಲು ಕೊನೆಯ ದಿನವಾಗಿತ್ತು. ಈ ನಡುವೆ ಕಾಂಗ್ರೆಸ್ ಅಭ್ಯರ್ಥಿ ತಮ್ಮ ನಾಮಪತ್ರವನ್ನು ಹಿಂದಕ್ಕೆ ಪಡೆದುಕೊಂಡಿದ್ದಾರೆ.

ಅವರು ಯಾವುದೇ ಕ್ಷಣದಲ್ಲಿಯೂ ಭಾರತೀಯ ಜನತಾ ಪಾರ್ಟಿಗೆ ಸೇರುವ ಸೂಚನೆಗಳು ಸಿಗುತ್ತಿವೆ. ಮಧ್ಯಪ್ರದೇಶದ ಹಿರಿಯ ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗೀಯ ಅವರೊಂದಿಗೆ ಕಾಂಗ್ರೆಸ್ ಅಭ್ಯರ್ಥಿ ಅಕ್ಷತ್ ಕ್ರಾಂತಿ ಕಾರಿನಲ್ಲಿ ತೆರಳುತ್ತಿರುವ ಫೋಟೋ ವೈರಲ್ ಆಗಿದೆ.

ಇನ್ನು ಕಾಂಗ್ರೆಸ್ ಆ ಕ್ಷೇತ್ರದಿಂದ ಕಣಕ್ಕೆ ಇಳಿಸಿದ್ದ ಡಮ್ಮಿ ಅಭ್ಯರ್ಥಿಯ ನಾಮಪತ್ರ ನಿನ್ನೆಯೇ ತಿರಸ್ಕೃತಗೊಂಡಿತ್ತು. ಆದ್ದರಿಂದ ಕಾಂಗ್ರೆಸ್ಸಿನಿಂದ ಅಧಿಕೃತ ಅಭ್ಯರ್ಥಿಯೇ ಉಳಿದಂತಾಗಿತ್ತು. ಆದರೆ ನಾಮಪತ್ರ ಹಿಂದಕ್ಕೆ ಪಡೆದುಕೊಳ್ಳುವ ಕೊನೆಯ ದಿನ ಕಾಂಗ್ರೆಸ್ ಪಕ್ಷಕ್ಕೆ ಊಹಿಸಲಾರದ ಹೊಡೆತ ಸಿಕ್ಕಿದೆ. ಇನ್ನು ಅಲ್ಲಿ ಪಕ್ಷೇತರ ಅಭ್ಯರ್ಥಿಗಳು ಒಂದಿಷ್ಟು ಜನ ಇದ್ದು, ಅವರು ಕೂಡ ಹಿಂದಕ್ಕೆ ಪಡೆದುಕೊಂಡರೆ ಇಂದೋರ್ ಮತ್ತೊಂದು ಸೂರತ್ ಆಗಲಿದೆ.
ಚುನಾವಣೆಯ ಇನ್ನೂ ಮೂರನೇ ಹಂತದ ಮೊದಲೇ ಇಬ್ಬರು ಬಿಜೆಪಿ ಸಂಸದರು ಆಯ್ಕೆಯಾದಂತೆ ಆಗಿದೆ. ಬಿಜೆಪಿಯಲ್ಲಿ ಈ ಬಗ್ಗೆ ಸಂಭ್ರಮದ ವಾತಾವರಣ ಮೂಡಿದ್ದರೆ ಕಾಂಗ್ರೆಸ್ ಇದರಿಂದ ಚಿಂತಿಗೀಡಾಗಿದೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search