• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪೆನ್ ಡ್ರೈವ್ ಹೊರಗೆ ಬರಲು ಕಾರಣನಾದ ಡ್ರೈವರ್ ಹೇಳಿದ್ದೇನು?

Tulunadu News Posted On April 30, 2024
0


0
Shares
  • Share On Facebook
  • Tweet It

ಪ್ರಜ್ವಲ್ ರೇವಣ್ಣ ಅವರಿಗೆ ಹದಿನೈದು ವರ್ಷಗಳಿಂದ ಕಾರು ಚಾಲಕನಾಗಿದ್ದ ಕಾರ್ತಿಕ್ ಎನ್ನುವ ವ್ಯಕ್ತಿ ಅಜ್ಞಾತ ಸ್ಥಳದಿಂದ ಒಂದು ವಿಡಿಯೋ ಮಾಡಿ ಅದನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ಅವರು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮೊಮ್ಮೊಗ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಬಗ್ಗೆ ಕೇಳಿ ಬಂದಿರುವ ಲೈಂಗಿಕ ದೌರ್ಜನ್ಯ ಆರೋಪದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇವರ ಹೇಳಿಕೆ ಆ ವಿಡಿಯೋ ಬಗ್ಗೆ ಇನ್ನಷ್ಟು ಕುತೂಹಲವನ್ನು ಹೆಚ್ಚು ಮಾಡಿದೆ.
ಆ ವಿಡಿಯೋದಲ್ಲಿ ಕಾಂಗ್ರೆಸ್ಸಿನವರಿಗೆ ತಾನು ವಿಡಿಯೋ ಕೊಟ್ಟಿಲ್ಲ ಎಂದು ಅವರು ಹೇಳಿದ್ದಾರೆ. ಕಾಂಗ್ರೆಸ್ ಅವರ ಮೇಲೆ ನಂಬಿಕೆ ಇಲ್ಲದೆ ದೇವರಾಜೇಗೌಡರ ಹತ್ತಿರ ಕೊಟ್ಟಿದೆ. ನಾನು 15 ವರ್ಷಗಳಿಂದ ಪ್ರಜ್ವಲ್ ರೇವಣ್ಣ ಹಾಗೂ ಅವರ ಕುಟುಂಬಕ್ಕೆ ಕಾರು ಚಾಲಕನಾಗಿ ಕೆಲಸ ಮಾಡಿದ್ದೇನೆ. ಒಂದು ವರ್ಷದ ಹಿಂದೆ ಕೆಲಸ ಬಿಟ್ಟಿದ್ದೇನೆ. ನನ್ನ ಜಮೀನು ಬರೆಸಿಕೊಂಡು ನನ್ನ ಪತ್ನಿಗೆ ಹಿಂಸೆ ಕೊಟ್ಟು ಹಲ್ಲೆ ಮಾಡಿದ್ರು. ಆದ್ದರಿಂದ ಕೆಲಸ ಬಿಟ್ಟು ಅವರ ಮನೆಯಿಂದ ಹೊರಬಂದೆ ಎಂದು ಮಾಜಿ ಚಾಲಕ ಹೇಳಿದ್ದಾರೆ.
ಯಾವುದೇ ಅಶ್ಲೀಲ ವಿಡಿಯೋ ರಿಲೀಸ್ ಮಾಡಬಾರದು ಎಂದು ನನ್ನ ವಿರುದ್ಧ ಪ್ರಜ್ವಲ್ ರೇವಣ್ಣ ಸ್ಟೇ ತಂದಿದ್ದರು. ಅದಕ್ಕೆ ನಾನು ಬಿಜೆಪಿ ಮುಖಂಡ ದೇವರಾಜೇಗೌಡರ ಬಳಿ ಹೋಗಿ ಪೆನ್ ಡ್ರೈವ್ ಕೊಟ್ಟೆ. ಆಗ ನಿನ್ನ ಬಳಿ ಇರುವ ವಿಡಿಯೋ, ಫೋಟೋಸ್ ನಾನು ಯಾರಿಗೂ ಕೊಡಲ್ಲ ಎಂದು ದೇವರಾಜೇಗೌಡರು ಹೇಳಿದ್ರು. ನಾನು ನನ್ನ ಬಳಿ ಇದ್ದ ವಿಡಿಯೋದ ಒಂದು ಕಾಪಿ ಮಾಡಿ ಕೊಟ್ಟೆ. ಅವರು ಅದನ್ನು ತಮ್ಮ ಸ್ವಾರ್ಥಕ್ಕೆ ಉಪಯೋಗಿಸಿಕೊಂಡರೋ ಬಿಟ್ಟರೋ ಗೊತ್ತಿಲ್ಲ. ಅವರನ್ನು ಬಿಟ್ಟರೆ ಬೇರೆ ಯಾರಿಗೂ ನಾನು ಕೊಟ್ಟಿಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್ ನವರ ಮೇಲೆ ನಂಬಿಕೆ ಇಲ್ಲದೆ ಇವರಿಗೆ ಕೊಟ್ಟಿದ್ದೆ. ನಂತರ ಪೆನ್ ಡ್ರೈವ್ ಯಾರು ಹಂಚಿದರೋ ಗೊತ್ತಿಲ್ಲ. ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಕಾಂಗ್ರೆಸ್ ಅವರಿಗೆ ಕೊಡುವುದಿದ್ದರೆ ಬಿಜೆಪಿಯ ದೇವರಾಜೇಗೌಡರ ಬಳಿ ಏಕೆ ಹೋಗುತ್ತಿದ್ದೆ. ಎಸ್ ಐಟಿ ಮುಂದೆ ಹಾಜರಾಗಿ ಎಲ್ಲಾ ಹೇಳಿಕೊಳ್ಳುತ್ತೇನೆ. ನಂತರ ಮಾಧ್ಯಮದ ಮುಂದೆ ಎಲ್ಲವನ್ನು ವಿವರವಾಗಿ ಹೇಳುತ್ತೇನೆ ಎಂದಿದ್ದಾರೆ.
ರೇವಣ್ಣ ಮನೆಯಲ್ಲಿ ಏನೆಲ್ಲಾ ನಡೆದಿದೆ ಎಂದು ಎಲ್ಲವನ್ನೂ ನೋಡಿದ್ದೇನೆ. ಎಲ್ಲವನ್ನು ಎಸ್ ಐಟಿ ಮುಂದೆ ಹೇಳುತ್ತೇನೆ. ಯಾರಿಗೆ ಅನ್ಯಾಯವಾಗಿದೆಯೋ ಅವರು ಧೈರ್ಯವಾಗಿ ಮುಂದೆ ಬನ್ನಿ ಎಂದು ಕಾರ್ತಿಕ್ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ. ಹಾಸನದಲ್ಲಿ ಸಂತ್ರಸ್ತರನ್ನು ಪತ್ತೆ ಹಚ್ಚಿ ಮಾಹಿತಿ ಸಂಗ್ರಹಿಸಲು ಎಸ್ ಐಟಿಯ ಪ್ರತ್ಯೇಕ ತಂಡ ಕಾರ್ಯಾಚರಿಸುತ್ತಿದೆ.

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search