• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪೆನ್ ಡ್ರೈವ್ ಹೊರಗೆ ಬರಲು ಕಾರಣನಾದ ಡ್ರೈವರ್ ಹೇಳಿದ್ದೇನು?

Tulunadu News Posted On April 30, 2024
0


0
Shares
  • Share On Facebook
  • Tweet It

ಪ್ರಜ್ವಲ್ ರೇವಣ್ಣ ಅವರಿಗೆ ಹದಿನೈದು ವರ್ಷಗಳಿಂದ ಕಾರು ಚಾಲಕನಾಗಿದ್ದ ಕಾರ್ತಿಕ್ ಎನ್ನುವ ವ್ಯಕ್ತಿ ಅಜ್ಞಾತ ಸ್ಥಳದಿಂದ ಒಂದು ವಿಡಿಯೋ ಮಾಡಿ ಅದನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ಅವರು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮೊಮ್ಮೊಗ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಬಗ್ಗೆ ಕೇಳಿ ಬಂದಿರುವ ಲೈಂಗಿಕ ದೌರ್ಜನ್ಯ ಆರೋಪದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇವರ ಹೇಳಿಕೆ ಆ ವಿಡಿಯೋ ಬಗ್ಗೆ ಇನ್ನಷ್ಟು ಕುತೂಹಲವನ್ನು ಹೆಚ್ಚು ಮಾಡಿದೆ.
ಆ ವಿಡಿಯೋದಲ್ಲಿ ಕಾಂಗ್ರೆಸ್ಸಿನವರಿಗೆ ತಾನು ವಿಡಿಯೋ ಕೊಟ್ಟಿಲ್ಲ ಎಂದು ಅವರು ಹೇಳಿದ್ದಾರೆ. ಕಾಂಗ್ರೆಸ್ ಅವರ ಮೇಲೆ ನಂಬಿಕೆ ಇಲ್ಲದೆ ದೇವರಾಜೇಗೌಡರ ಹತ್ತಿರ ಕೊಟ್ಟಿದೆ. ನಾನು 15 ವರ್ಷಗಳಿಂದ ಪ್ರಜ್ವಲ್ ರೇವಣ್ಣ ಹಾಗೂ ಅವರ ಕುಟುಂಬಕ್ಕೆ ಕಾರು ಚಾಲಕನಾಗಿ ಕೆಲಸ ಮಾಡಿದ್ದೇನೆ. ಒಂದು ವರ್ಷದ ಹಿಂದೆ ಕೆಲಸ ಬಿಟ್ಟಿದ್ದೇನೆ. ನನ್ನ ಜಮೀನು ಬರೆಸಿಕೊಂಡು ನನ್ನ ಪತ್ನಿಗೆ ಹಿಂಸೆ ಕೊಟ್ಟು ಹಲ್ಲೆ ಮಾಡಿದ್ರು. ಆದ್ದರಿಂದ ಕೆಲಸ ಬಿಟ್ಟು ಅವರ ಮನೆಯಿಂದ ಹೊರಬಂದೆ ಎಂದು ಮಾಜಿ ಚಾಲಕ ಹೇಳಿದ್ದಾರೆ.
ಯಾವುದೇ ಅಶ್ಲೀಲ ವಿಡಿಯೋ ರಿಲೀಸ್ ಮಾಡಬಾರದು ಎಂದು ನನ್ನ ವಿರುದ್ಧ ಪ್ರಜ್ವಲ್ ರೇವಣ್ಣ ಸ್ಟೇ ತಂದಿದ್ದರು. ಅದಕ್ಕೆ ನಾನು ಬಿಜೆಪಿ ಮುಖಂಡ ದೇವರಾಜೇಗೌಡರ ಬಳಿ ಹೋಗಿ ಪೆನ್ ಡ್ರೈವ್ ಕೊಟ್ಟೆ. ಆಗ ನಿನ್ನ ಬಳಿ ಇರುವ ವಿಡಿಯೋ, ಫೋಟೋಸ್ ನಾನು ಯಾರಿಗೂ ಕೊಡಲ್ಲ ಎಂದು ದೇವರಾಜೇಗೌಡರು ಹೇಳಿದ್ರು. ನಾನು ನನ್ನ ಬಳಿ ಇದ್ದ ವಿಡಿಯೋದ ಒಂದು ಕಾಪಿ ಮಾಡಿ ಕೊಟ್ಟೆ. ಅವರು ಅದನ್ನು ತಮ್ಮ ಸ್ವಾರ್ಥಕ್ಕೆ ಉಪಯೋಗಿಸಿಕೊಂಡರೋ ಬಿಟ್ಟರೋ ಗೊತ್ತಿಲ್ಲ. ಅವರನ್ನು ಬಿಟ್ಟರೆ ಬೇರೆ ಯಾರಿಗೂ ನಾನು ಕೊಟ್ಟಿಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್ ನವರ ಮೇಲೆ ನಂಬಿಕೆ ಇಲ್ಲದೆ ಇವರಿಗೆ ಕೊಟ್ಟಿದ್ದೆ. ನಂತರ ಪೆನ್ ಡ್ರೈವ್ ಯಾರು ಹಂಚಿದರೋ ಗೊತ್ತಿಲ್ಲ. ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಕಾಂಗ್ರೆಸ್ ಅವರಿಗೆ ಕೊಡುವುದಿದ್ದರೆ ಬಿಜೆಪಿಯ ದೇವರಾಜೇಗೌಡರ ಬಳಿ ಏಕೆ ಹೋಗುತ್ತಿದ್ದೆ. ಎಸ್ ಐಟಿ ಮುಂದೆ ಹಾಜರಾಗಿ ಎಲ್ಲಾ ಹೇಳಿಕೊಳ್ಳುತ್ತೇನೆ. ನಂತರ ಮಾಧ್ಯಮದ ಮುಂದೆ ಎಲ್ಲವನ್ನು ವಿವರವಾಗಿ ಹೇಳುತ್ತೇನೆ ಎಂದಿದ್ದಾರೆ.
ರೇವಣ್ಣ ಮನೆಯಲ್ಲಿ ಏನೆಲ್ಲಾ ನಡೆದಿದೆ ಎಂದು ಎಲ್ಲವನ್ನೂ ನೋಡಿದ್ದೇನೆ. ಎಲ್ಲವನ್ನು ಎಸ್ ಐಟಿ ಮುಂದೆ ಹೇಳುತ್ತೇನೆ. ಯಾರಿಗೆ ಅನ್ಯಾಯವಾಗಿದೆಯೋ ಅವರು ಧೈರ್ಯವಾಗಿ ಮುಂದೆ ಬನ್ನಿ ಎಂದು ಕಾರ್ತಿಕ್ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ. ಹಾಸನದಲ್ಲಿ ಸಂತ್ರಸ್ತರನ್ನು ಪತ್ತೆ ಹಚ್ಚಿ ಮಾಹಿತಿ ಸಂಗ್ರಹಿಸಲು ಎಸ್ ಐಟಿಯ ಪ್ರತ್ಯೇಕ ತಂಡ ಕಾರ್ಯಾಚರಿಸುತ್ತಿದೆ.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search