• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರಜ್ವಲ್ ಮೊಬೈಲಿನಿಂದ ವಿಡಿಯೋ ಲೀಕ್ ಆದದ್ದು ಹೇಗೆ?

Tulunadu News Posted On May 2, 2024
0


0
Shares
  • Share On Facebook
  • Tweet It

ಪ್ರಜ್ವಲ್ ಅವರ ಖಾಸಗಿ ಮೊಬೈಲಿನಿಂದ ವಿಡಿಯೋ ಲೀಕ್ ಆದದ್ದೇ ಒಂದು ಕುತೂಹಲಕಾರಿ ಸಂಗತಿ ಎನ್ನಬಹುದು. ಮೂಲಗಳ ಪ್ರಕಾರ ಏಳೆಂಟು ತಿಂಗಳ ಹಿಂದೆಯೇ ಪ್ರಜ್ವಲ್ ಅವರ ಮೊಬೈಲ್ ನಾಪತ್ತೆಯಾಗಿತ್ತು. ಎಷ್ಟು ಹುಡುಕಿದರೂ ಸಿಗದೇ ಇದ್ದಾಗ ಅದು ಕಳುವಾಗಿದೆ ಎನ್ನುವ ನಿರ್ಧಾರಕ್ಕೆ ಸಂಸದರು ಬಂದಿದ್ದರು. ಮೊಬೈಲ್ ಕಳುವಾದ ತಕ್ಷಣ ಎಲ್ಲರೂ ಮಾಡುವಂತೆ ಇವರು ಕೂಡ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಆ ಬಳಿಕ ಹೊಸ ಮೊಬೈಲ್ ಖರೀದಿಸಿದ್ದರು. ಕಳುವಾದ ಮೊಬೈಲ್ ಬಗ್ಗೆ ವಿಶೇಷವಾಗಿ ತಲೆಕೆಡಿಸಿಕೊಳ್ಳಲು ಹೋಗಿರಲಿಲ್ಲ. ಆದರೆ ಕಳುವಾದ ಮೊಬೈಲಿನಲ್ಲಿ ಕೆಲವು “ಸೇವ್” ಮಾಡಲ್ಪಟ್ಟ ವಿಡಿಯೋಗಳು ಇವೆ ಮತ್ತು ಅದಕ್ಕಾಗಿಯೇ ಮೊಬೈಲ್ ಕಳುವು ಮಾಡಲಾಗಿದೆ ಎನ್ನುವ ಅನುಮಾನ ಮೂಡುತ್ತಿದ್ದಂತೆ ಪ್ರಜ್ವಲ್ ಜಾಗೃತರಾದರು. ತಕ್ಷಣ ಅವರು ಆ ವಿಡಿಯೋಗಳು ಬಹಿರಂಗವಾಗದಂತೆ ನ್ಯಾಯಾಲಯದಿಂದ ಸ್ಟೇ ತಂದರು.
ಆ ಸ್ಟೇ ರದ್ದುಗೊಳಿಸಲು ಏನಾದರೂ ಮಾಡಿ ಎಂದೇ ಅವರ ಕಾರು ಚಾಲಕ ಭಾರತೀಯ ಜನತಾ ಪಾರ್ಟಿಯ ಮುಖಂಡ ದೇವರಾಜೇಗೌಡರ ಮೊರೆ ಹೋದದ್ದು. ಅದರ ನಂತರದ ವಿಷಯ ಈಗ ಜಗತ್ತಿಗೆ ಗೊತ್ತಿದೆ.
ಇದೆಲ್ಲವು ಗೊತ್ತಾಗುತ್ತಿದ್ದಂತೆ ತಮ್ಮ ಮೊಬೈಲ್ ನ ದತ್ತಾಂಶ ಲೀಕ್ ಆಗದಂತೆ ಬೇರೆ ಬೇರೆ ರೀತಿಯಲ್ಲಿ ಪ್ರಜ್ವಲ್ ಪ್ರಯತ್ನಪಟ್ಟಿದ್ದಾರೆ. ಆದರೆ ಅಷ್ಟರಲ್ಲಿ ಅವರ ಮೊಬೈಲಿನಿಂದ ಡಾಟಾ ಬೇರೆ ಸಿಸ್ಟಂಗೆ ವರ್ಗಾವಣೆ ಆಗಿ ಹೋಗಿದೆ. ಇದೆಲ್ಲವೂ ನಡೆದು ಏಳೆಂಟು ತಿಂಗಳು ಆಗಿ ಹೋಗಿದೆ. ಅಲ್ಲಿಂದ ಇಲ್ಲಿಯ ತನಕ ಆ ವಿಡಿಯೋ ಎಲ್ಲಿದ್ದವು. ಚುನಾವಣೆಗೆ ಐದಾರು ದಿನಗಳು ಇದ್ದಾಗ ಹೇಗೆ ಎಲ್ಲಿಂದ ಹೊರಗೆ ಬಂದವು ಎನ್ನುವುದನ್ನು ವಿಶೇಷ ತನಿಖಾ ತಂಡ ವಿಚಾರಣೆ ಮಾಡುತ್ತಿದೆ.

0
Shares
  • Share On Facebook
  • Tweet It




Trending Now
ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
Tulunadu News June 30, 2025
ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
Tulunadu News June 30, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
  • Popular Posts

    • 1
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 2
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 3
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • 4
      ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • 5
      PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...

  • Privacy Policy
  • Contact
© Tulunadu Infomedia.

Press enter/return to begin your search