• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರಜ್ವಲ್ ಮೊಬೈಲಿನಿಂದ ವಿಡಿಯೋ ಲೀಕ್ ಆದದ್ದು ಹೇಗೆ?

Tulunadu News Posted On May 2, 2024
0


0
Shares
  • Share On Facebook
  • Tweet It

ಪ್ರಜ್ವಲ್ ಅವರ ಖಾಸಗಿ ಮೊಬೈಲಿನಿಂದ ವಿಡಿಯೋ ಲೀಕ್ ಆದದ್ದೇ ಒಂದು ಕುತೂಹಲಕಾರಿ ಸಂಗತಿ ಎನ್ನಬಹುದು. ಮೂಲಗಳ ಪ್ರಕಾರ ಏಳೆಂಟು ತಿಂಗಳ ಹಿಂದೆಯೇ ಪ್ರಜ್ವಲ್ ಅವರ ಮೊಬೈಲ್ ನಾಪತ್ತೆಯಾಗಿತ್ತು. ಎಷ್ಟು ಹುಡುಕಿದರೂ ಸಿಗದೇ ಇದ್ದಾಗ ಅದು ಕಳುವಾಗಿದೆ ಎನ್ನುವ ನಿರ್ಧಾರಕ್ಕೆ ಸಂಸದರು ಬಂದಿದ್ದರು. ಮೊಬೈಲ್ ಕಳುವಾದ ತಕ್ಷಣ ಎಲ್ಲರೂ ಮಾಡುವಂತೆ ಇವರು ಕೂಡ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಆ ಬಳಿಕ ಹೊಸ ಮೊಬೈಲ್ ಖರೀದಿಸಿದ್ದರು. ಕಳುವಾದ ಮೊಬೈಲ್ ಬಗ್ಗೆ ವಿಶೇಷವಾಗಿ ತಲೆಕೆಡಿಸಿಕೊಳ್ಳಲು ಹೋಗಿರಲಿಲ್ಲ. ಆದರೆ ಕಳುವಾದ ಮೊಬೈಲಿನಲ್ಲಿ ಕೆಲವು “ಸೇವ್” ಮಾಡಲ್ಪಟ್ಟ ವಿಡಿಯೋಗಳು ಇವೆ ಮತ್ತು ಅದಕ್ಕಾಗಿಯೇ ಮೊಬೈಲ್ ಕಳುವು ಮಾಡಲಾಗಿದೆ ಎನ್ನುವ ಅನುಮಾನ ಮೂಡುತ್ತಿದ್ದಂತೆ ಪ್ರಜ್ವಲ್ ಜಾಗೃತರಾದರು. ತಕ್ಷಣ ಅವರು ಆ ವಿಡಿಯೋಗಳು ಬಹಿರಂಗವಾಗದಂತೆ ನ್ಯಾಯಾಲಯದಿಂದ ಸ್ಟೇ ತಂದರು.
ಆ ಸ್ಟೇ ರದ್ದುಗೊಳಿಸಲು ಏನಾದರೂ ಮಾಡಿ ಎಂದೇ ಅವರ ಕಾರು ಚಾಲಕ ಭಾರತೀಯ ಜನತಾ ಪಾರ್ಟಿಯ ಮುಖಂಡ ದೇವರಾಜೇಗೌಡರ ಮೊರೆ ಹೋದದ್ದು. ಅದರ ನಂತರದ ವಿಷಯ ಈಗ ಜಗತ್ತಿಗೆ ಗೊತ್ತಿದೆ.
ಇದೆಲ್ಲವು ಗೊತ್ತಾಗುತ್ತಿದ್ದಂತೆ ತಮ್ಮ ಮೊಬೈಲ್ ನ ದತ್ತಾಂಶ ಲೀಕ್ ಆಗದಂತೆ ಬೇರೆ ಬೇರೆ ರೀತಿಯಲ್ಲಿ ಪ್ರಜ್ವಲ್ ಪ್ರಯತ್ನಪಟ್ಟಿದ್ದಾರೆ. ಆದರೆ ಅಷ್ಟರಲ್ಲಿ ಅವರ ಮೊಬೈಲಿನಿಂದ ಡಾಟಾ ಬೇರೆ ಸಿಸ್ಟಂಗೆ ವರ್ಗಾವಣೆ ಆಗಿ ಹೋಗಿದೆ. ಇದೆಲ್ಲವೂ ನಡೆದು ಏಳೆಂಟು ತಿಂಗಳು ಆಗಿ ಹೋಗಿದೆ. ಅಲ್ಲಿಂದ ಇಲ್ಲಿಯ ತನಕ ಆ ವಿಡಿಯೋ ಎಲ್ಲಿದ್ದವು. ಚುನಾವಣೆಗೆ ಐದಾರು ದಿನಗಳು ಇದ್ದಾಗ ಹೇಗೆ ಎಲ್ಲಿಂದ ಹೊರಗೆ ಬಂದವು ಎನ್ನುವುದನ್ನು ವಿಶೇಷ ತನಿಖಾ ತಂಡ ವಿಚಾರಣೆ ಮಾಡುತ್ತಿದೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search