• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರಜ್ವಲ್ ಮೊಬೈಲಿನಿಂದ ವಿಡಿಯೋ ಲೀಕ್ ಆದದ್ದು ಹೇಗೆ?

Tulunadu News Posted On May 2, 2024
0


0
Shares
  • Share On Facebook
  • Tweet It

ಪ್ರಜ್ವಲ್ ಅವರ ಖಾಸಗಿ ಮೊಬೈಲಿನಿಂದ ವಿಡಿಯೋ ಲೀಕ್ ಆದದ್ದೇ ಒಂದು ಕುತೂಹಲಕಾರಿ ಸಂಗತಿ ಎನ್ನಬಹುದು. ಮೂಲಗಳ ಪ್ರಕಾರ ಏಳೆಂಟು ತಿಂಗಳ ಹಿಂದೆಯೇ ಪ್ರಜ್ವಲ್ ಅವರ ಮೊಬೈಲ್ ನಾಪತ್ತೆಯಾಗಿತ್ತು. ಎಷ್ಟು ಹುಡುಕಿದರೂ ಸಿಗದೇ ಇದ್ದಾಗ ಅದು ಕಳುವಾಗಿದೆ ಎನ್ನುವ ನಿರ್ಧಾರಕ್ಕೆ ಸಂಸದರು ಬಂದಿದ್ದರು. ಮೊಬೈಲ್ ಕಳುವಾದ ತಕ್ಷಣ ಎಲ್ಲರೂ ಮಾಡುವಂತೆ ಇವರು ಕೂಡ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಆ ಬಳಿಕ ಹೊಸ ಮೊಬೈಲ್ ಖರೀದಿಸಿದ್ದರು. ಕಳುವಾದ ಮೊಬೈಲ್ ಬಗ್ಗೆ ವಿಶೇಷವಾಗಿ ತಲೆಕೆಡಿಸಿಕೊಳ್ಳಲು ಹೋಗಿರಲಿಲ್ಲ. ಆದರೆ ಕಳುವಾದ ಮೊಬೈಲಿನಲ್ಲಿ ಕೆಲವು “ಸೇವ್” ಮಾಡಲ್ಪಟ್ಟ ವಿಡಿಯೋಗಳು ಇವೆ ಮತ್ತು ಅದಕ್ಕಾಗಿಯೇ ಮೊಬೈಲ್ ಕಳುವು ಮಾಡಲಾಗಿದೆ ಎನ್ನುವ ಅನುಮಾನ ಮೂಡುತ್ತಿದ್ದಂತೆ ಪ್ರಜ್ವಲ್ ಜಾಗೃತರಾದರು. ತಕ್ಷಣ ಅವರು ಆ ವಿಡಿಯೋಗಳು ಬಹಿರಂಗವಾಗದಂತೆ ನ್ಯಾಯಾಲಯದಿಂದ ಸ್ಟೇ ತಂದರು.
ಆ ಸ್ಟೇ ರದ್ದುಗೊಳಿಸಲು ಏನಾದರೂ ಮಾಡಿ ಎಂದೇ ಅವರ ಕಾರು ಚಾಲಕ ಭಾರತೀಯ ಜನತಾ ಪಾರ್ಟಿಯ ಮುಖಂಡ ದೇವರಾಜೇಗೌಡರ ಮೊರೆ ಹೋದದ್ದು. ಅದರ ನಂತರದ ವಿಷಯ ಈಗ ಜಗತ್ತಿಗೆ ಗೊತ್ತಿದೆ.
ಇದೆಲ್ಲವು ಗೊತ್ತಾಗುತ್ತಿದ್ದಂತೆ ತಮ್ಮ ಮೊಬೈಲ್ ನ ದತ್ತಾಂಶ ಲೀಕ್ ಆಗದಂತೆ ಬೇರೆ ಬೇರೆ ರೀತಿಯಲ್ಲಿ ಪ್ರಜ್ವಲ್ ಪ್ರಯತ್ನಪಟ್ಟಿದ್ದಾರೆ. ಆದರೆ ಅಷ್ಟರಲ್ಲಿ ಅವರ ಮೊಬೈಲಿನಿಂದ ಡಾಟಾ ಬೇರೆ ಸಿಸ್ಟಂಗೆ ವರ್ಗಾವಣೆ ಆಗಿ ಹೋಗಿದೆ. ಇದೆಲ್ಲವೂ ನಡೆದು ಏಳೆಂಟು ತಿಂಗಳು ಆಗಿ ಹೋಗಿದೆ. ಅಲ್ಲಿಂದ ಇಲ್ಲಿಯ ತನಕ ಆ ವಿಡಿಯೋ ಎಲ್ಲಿದ್ದವು. ಚುನಾವಣೆಗೆ ಐದಾರು ದಿನಗಳು ಇದ್ದಾಗ ಹೇಗೆ ಎಲ್ಲಿಂದ ಹೊರಗೆ ಬಂದವು ಎನ್ನುವುದನ್ನು ವಿಶೇಷ ತನಿಖಾ ತಂಡ ವಿಚಾರಣೆ ಮಾಡುತ್ತಿದೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search