• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗೋಲ್ಡಿ ಬ್ರಾರ್ ಸಾವನ್ನಪ್ಪಿಲ್ಲ ಎಂದ ಅಮೇರಿಕಾ ಪತ್ರಿಕೆ!

Tulunadu News Posted On May 2, 2024
0


0
Shares
  • Share On Facebook
  • Tweet It

ಅಮೇರಿಕಾದ ಕ್ಯಾಲಿಫೋನಿಯಾ ರಾಜ್ಯದ ಫ್ರೆಸ್ನೋ ನಗರದಲ್ಲಿ ಮೇ 1 ರಂದು ಗುಂಡಿನ ದಾಳಿ ನಡೆದಿತ್ತು. ಅದರಲ್ಲಿ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಕೆನಡಾ ಮೂಲದ ಭಯೋತ್ಪಾದಕ ಗೋಲ್ಡಿ ಬ್ರಾರ್ ಸಾವನ್ನಪ್ಪಿದ್ದಾರೆ ಎಂಬ ವರದಿಯನ್ನು ಅಮೇರಿಕಾದ ಪೊಲೀಸರು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.
ಫೇರ್ ಮಾಂಟ್ ಮತ್ತು ಹಾಲ್ಟ್ ಅವೆನ್ಯೂಗಳಲ್ಲಿ ನಡೆದ ಶೂಟೌಟ್ ನಲ್ಲಿ ಅನಾಮಧೇಯ ಶೂಟರ್ ಗಳು ಶೂಟೌಟ್ ನಡೆಸಿದ್ದರು. ಅದರಲ್ಲಿ ಹತ್ಯೆಯಾದ ವ್ಯಕ್ತಿಯನ್ನು ಕ್ಸೇವಿಯರ್ ಗ್ಲಾಡ್ನಿ ಎಂದು ಫ್ರೆಸ್ನೋ ಪೊಲೀಸರು ಬುಧವಾರ ಗುರುತಿಸಿದ್ದಾರೆ. ಆತನ ವಯಸ್ಸು ಅಂದಾಜು 37 ಎಂದು ಹೇಳಲಾಗುತ್ತಿದೆ.
ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನ ಸಹವರ್ತಿ ಗೋಲ್ಡಿ ಬ್ರಾರ್ ನನ್ನು ಅಮೇರಿಕಾದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಬುಧವಾರ ಭಾರತದ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಆದರೆ ಭಾರತದಲ್ಲಿ ನಡೆದ ಸಿಧು ಮೂಸೆವಾಲಾ ಹತ್ಯೆಗೆ ಸಂಬಂಧಿಸಿದ ಪ್ರಕರಣಕ್ಕೂ ಈ ಘಟನೆಗೂ ಇದಕ್ಕೂ ಸಂಬಂಧವಿಲ್ಲ ಎಂದು ಫ್ರೆಸ್ನೋ ಬಿ ಪತ್ರಿಕೆ ವರದಿ ಮಾಡಿದೆ.
ಖ್ಯಾತ ಪಂಜಾಬಿ ಗಾಯಕ ಮತ್ತು ಕಾಂಗ್ರೆಸ್ ಮುಖಂಡ ಸಿಧು ಮೂಸೆವಾಲ್ ಅವರನ್ನು ಹಾಡುಹಗಲೇ ಶೂಟೌಟ್ ಮಾಡಿ ಕೊಲ್ಲಲಾಗಿತ್ತು. ಅದನ್ನು ಮಾಡಿದ್ದು ತನ್ನ ಗ್ಯಾಂಗ್ ಎಂದು ಗೋಲ್ಡಿ ಬ್ರಾರ್ ಎಂಬ ಕೆನಡಾ ಮೂಲಕ ಭಯೋತ್ಪಾದಕ ಹೇಳಿಕೊಂಡಿದ್ದ. ಅವನನ್ನು ಭಾರತೀಯ ಅನಾಮಧೇಯ ಶೂಟರ್ ಕೊಂದಿದ್ದಾರೆ ಎನ್ನುವುದು ಸಂಪೂರ್ಣ ಸುಳ್ಳು ಎಂದು ಅಮೇರಿಕಾ ಪೊಲೀಸರು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
  • Popular Posts

    • 1
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • 2
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search