• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಯೋಧ್ಯೆಯ ರಾಮ ದರ್ಶನಕ್ಕೆ ಪಾಕಿಸ್ತಾನಿಯರು!

Tulunadu News Posted On May 3, 2024
0


0
Shares
  • Share On Facebook
  • Tweet It

ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯಾದಾಗಿನಿಂದ ಲಕ್ಷಾಂತರ ಮಂದಿ ಭಕ್ತರು ದೇಶ, ವಿದೇಶದಿಂದ ಬಂದು ಇಲ್ಲಿ ಪ್ರಾರ್ಥನೆ
ಸಲ್ಲಿಸುತ್ತಿದ್ದಾರೆ. ಇದೀಗ ಇದಕ್ಕೆ ಇನ್ನೊಂದು ವಿಷಯ ಸೇರ್ಪಡೆಯಾಗಿದೆ. ಪಾಕಿಸ್ತಾನದಿಂದಲೂ ಬಾಲರಾಮನ ದರ್ಶನ ಪಡೆಯಲು ಜನರು ಬರುತ್ತಿದ್ದಾರೆ.
ಪಾಕಿಸ್ತಾನದಲ್ಲಿರುವ ಸಿಂಧಿ ಸಮುದಾಯದ 200 ಸದಸ್ಯರ ನಿಯೋಗ ಅಯೋಧ್ಯೆಗೆ ತೆರಳಿ ಬಾಲರಾಮನಿಗೆ ಪೂಜೆ ಸಲ್ಲಿಸಿದೆ ಎಂದು ದೇವಸ್ಥಾನದ ಟ್ರಸ್ಟ್ ಅಧಿಕಾರಿಗಳು ತಿಳಿಸಿದ್ದಾರೆ.
ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಈ ನಿಯೋಗವು ಭಾರತಕ್ಕೆ ಒಂದು ತಿಂಗಳ ಧಾರ್ಮಿಕ ಪ್ರವಾಸದಲ್ಲಿದೆ. ರಸ್ತೆ ಮಾರ್ಗವಾಗಿ ಪ್ರಯಾಗ್ ರಾಜ್ ನಿಂದ ಅಯೋಧ್ಯೆಗೆ ತಲುಪಿದ ಸಿಂಧಿ ಸಮುದಾಯವನ್ನು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು ರಾಮ್ ಕಿ ಪೈಡಿಯಲ್ಲಿ ಸ್ವಾಗತಿಸಿದರು. ಭಾರತದಿಂದ ಸಿಂಧಿ ಸಮುದಾಯದ 150 ಸದಸ್ಯರ ನಿಯೋಗವೂ ಇದರೊಂದಿಗೆ ಪ್ರಯಾಣಿಸಿದೆ.
ಅಯೋಧ್ಯೆಯ ಉದಾಸಿನ್ ಋಷಿ ಆಶ್ರಮ ಮತ್ತು ಶಬರಿ ರಸೋಯಿಯಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗಿತ್ತು. ನಿಯೋಗವು ಸಂಜೆ ರಾಮ್ ಕಿ ಪೈಡಿಯಲ್ಲಿ ಸರಯು ಆರತಿಯಲ್ಲಿ ಪಾಲ್ಗೊಂಡಿತ್ತು.
ಅಯೋಧ್ಯೆಯ ಸಿಂಧಿಧಾಮ್ ಆಶ್ರಮದಲ್ಲಿ ಪಾಕಿಸ್ತಾನಿ ನಿಯೋಗಕ್ಕಾಗಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ದೇಶದ ವಿವಿಧ ಭಾಗಗಳಿಂದ ಬಂದಿರುವ ಸಿಂಧಿ ಸಂಘಗಳು ಅವರನ್ನು ಸ್ವಾಗತಿಸಿದವು. ರಾಯಪುರದ ಸಂತ ಸದಾ ರಾಮ್ ದರ್ಬಾರ್ ನ ಪೀಠದೇಶ್ವರರು, ಯುಧಿಷ್ಠರ್ ಲಾಲ್ ಸಹ ಅವರೊಂದಿಗೆ ಇದ್ದಾರೆ. ನಿಯೋಗವು ಅಯೋಧ್ಯೆಯಲ್ಲಿ ದೇವರ ದರ್ಶನ ಪಡೆದು ಅಲ್ಲಿಂದ ಲಕ್ನೋಗೆ ತೆರಳಲಿದೆ.

0
Shares
  • Share On Facebook
  • Tweet It




Trending Now
ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
Tulunadu News August 22, 2025
ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
Tulunadu News August 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
    • ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!
    • ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
    • ಇನ್ನು ವಿಮಾನದಂತೆಯೆ ರೈಲಿನಲ್ಲಿಯೂ ಲಗೇಜ್ ತೂಕದ ಪರಿಶೀಲನೆ! ಪ್ರಯಾಣಿಕರು ತಿಳಿದುಕೊಳ್ಳಬೇಕಾದ ವಿಷಯಗಳು...
    • ಧರ್ಮಸ್ಥಳದ ಷಡ್ಯಂತ್ರದ ಹಿಂದೆ ಸಸಿಕಾಂತ್ ಸೆಂಥಿಲ್ ಕೈವಾಡ ಎಂದ ಜನಾರ್ಧನ ರೆಡ್ಡಿ!
    • ಕೆಂಪುಕಲ್ಲು ಓವರ್ ಲೋಡ್ ಸಾಗಾಟ! ಕೇಸ್ ದಾಖಲು
  • Popular Posts

    • 1
      ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • 2
      ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
    • 3
      ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • 4
      ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • 5
      ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!

  • Privacy Policy
  • Contact
© Tulunadu Infomedia.

Press enter/return to begin your search