• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಯೋಧ್ಯೆಯ ರಾಮ ದರ್ಶನಕ್ಕೆ ಪಾಕಿಸ್ತಾನಿಯರು!

Tulunadu News Posted On May 3, 2024
0


0
Shares
  • Share On Facebook
  • Tweet It

ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯಾದಾಗಿನಿಂದ ಲಕ್ಷಾಂತರ ಮಂದಿ ಭಕ್ತರು ದೇಶ, ವಿದೇಶದಿಂದ ಬಂದು ಇಲ್ಲಿ ಪ್ರಾರ್ಥನೆ
ಸಲ್ಲಿಸುತ್ತಿದ್ದಾರೆ. ಇದೀಗ ಇದಕ್ಕೆ ಇನ್ನೊಂದು ವಿಷಯ ಸೇರ್ಪಡೆಯಾಗಿದೆ. ಪಾಕಿಸ್ತಾನದಿಂದಲೂ ಬಾಲರಾಮನ ದರ್ಶನ ಪಡೆಯಲು ಜನರು ಬರುತ್ತಿದ್ದಾರೆ.
ಪಾಕಿಸ್ತಾನದಲ್ಲಿರುವ ಸಿಂಧಿ ಸಮುದಾಯದ 200 ಸದಸ್ಯರ ನಿಯೋಗ ಅಯೋಧ್ಯೆಗೆ ತೆರಳಿ ಬಾಲರಾಮನಿಗೆ ಪೂಜೆ ಸಲ್ಲಿಸಿದೆ ಎಂದು ದೇವಸ್ಥಾನದ ಟ್ರಸ್ಟ್ ಅಧಿಕಾರಿಗಳು ತಿಳಿಸಿದ್ದಾರೆ.
ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಈ ನಿಯೋಗವು ಭಾರತಕ್ಕೆ ಒಂದು ತಿಂಗಳ ಧಾರ್ಮಿಕ ಪ್ರವಾಸದಲ್ಲಿದೆ. ರಸ್ತೆ ಮಾರ್ಗವಾಗಿ ಪ್ರಯಾಗ್ ರಾಜ್ ನಿಂದ ಅಯೋಧ್ಯೆಗೆ ತಲುಪಿದ ಸಿಂಧಿ ಸಮುದಾಯವನ್ನು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು ರಾಮ್ ಕಿ ಪೈಡಿಯಲ್ಲಿ ಸ್ವಾಗತಿಸಿದರು. ಭಾರತದಿಂದ ಸಿಂಧಿ ಸಮುದಾಯದ 150 ಸದಸ್ಯರ ನಿಯೋಗವೂ ಇದರೊಂದಿಗೆ ಪ್ರಯಾಣಿಸಿದೆ.
ಅಯೋಧ್ಯೆಯ ಉದಾಸಿನ್ ಋಷಿ ಆಶ್ರಮ ಮತ್ತು ಶಬರಿ ರಸೋಯಿಯಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗಿತ್ತು. ನಿಯೋಗವು ಸಂಜೆ ರಾಮ್ ಕಿ ಪೈಡಿಯಲ್ಲಿ ಸರಯು ಆರತಿಯಲ್ಲಿ ಪಾಲ್ಗೊಂಡಿತ್ತು.
ಅಯೋಧ್ಯೆಯ ಸಿಂಧಿಧಾಮ್ ಆಶ್ರಮದಲ್ಲಿ ಪಾಕಿಸ್ತಾನಿ ನಿಯೋಗಕ್ಕಾಗಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ದೇಶದ ವಿವಿಧ ಭಾಗಗಳಿಂದ ಬಂದಿರುವ ಸಿಂಧಿ ಸಂಘಗಳು ಅವರನ್ನು ಸ್ವಾಗತಿಸಿದವು. ರಾಯಪುರದ ಸಂತ ಸದಾ ರಾಮ್ ದರ್ಬಾರ್ ನ ಪೀಠದೇಶ್ವರರು, ಯುಧಿಷ್ಠರ್ ಲಾಲ್ ಸಹ ಅವರೊಂದಿಗೆ ಇದ್ದಾರೆ. ನಿಯೋಗವು ಅಯೋಧ್ಯೆಯಲ್ಲಿ ದೇವರ ದರ್ಶನ ಪಡೆದು ಅಲ್ಲಿಂದ ಲಕ್ನೋಗೆ ತೆರಳಲಿದೆ.

0
Shares
  • Share On Facebook
  • Tweet It




Trending Now
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
Tulunadu News April 6, 2026
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
  • Popular Posts

    • 1
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search