• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಟಿ20 ವಿಶ್ವಕಪ್ ಗೆದ್ದರೆ ಪಾಕ್ ಆಟಗಾರರಿಗೆ ಸಿಗುವ ಮೊತ್ತ ಕೇಳಿ ಪಾಕ್ ಶಾಕ್!

Tulunadu News Posted On May 6, 2024
0


0
Shares
  • Share On Facebook
  • Tweet It

ನಮ್ಮಲ್ಲಿ ಚುನಾವಣೆ ಹತ್ತಿರ ಬರುವಾಗ ರಾಜಕೀಯ ಪಕ್ಷಗಳು ದೊಡ್ಡ ದೊಡ್ಡ ಭರವಸೆಗಳನ್ನು ನೀಡುವುದನ್ನು ನಾವು ಕಂಡಿದ್ದೇವೆ. ಅದರಲ್ಲಿ ಎಷ್ಟೋ ಭರವಸೆಗಳನ್ನು ಈಡೇರಿಸಲು ಸಾಧ್ಯವೇ ಇಲ್ಲ ಎನ್ನುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿ ಗೊತ್ತಾಗುತ್ತದೆ. ಆದರೂ ಅನೇಕ ಬಾರಿ ಜನರು ಅದಕ್ಕೆ ಮರಳಾಗುವುದು ಇದೆ. ಕೆಲವೊಮ್ಮೆ ಆ ಭರವಸೆಗಳನ್ನು ಕೊಟ್ಟು ಅಧಿಕಾರಕ್ಕೆ ಬಂದ ರಾಜಕೀಯ ಪಕ್ಷಗಳು ಅದನ್ನು ಈಡೇರಿಸಲಾಗದೇ ಜನರಿಂದ ಉಗಿಸಿಕೊಂಡಿರುವುದು ಕೂಡ ನಡೆದಿದೆ. ಆದರೂ ರಾಜಕೀಯ ಪಕ್ಷಗಳ ಆಮಿಷ ಕಡಿಮೆಯಾಗುವುದಿಲ್ಲ. ಈಗ ಪಾಕಿಸ್ತಾನದ ಕ್ರಿಕೆಟ್ ಮಂಡಳಿ ಕೂಡ ಈ ಆಮಿಷ ಕೊಡುವುದರಲ್ಲಿ ತಾನು ಹಿಂದಿಲ್ಲ ಎನ್ನುವುದನ್ನು ಸಾಬೀತುಪಡಿಸಿದೆ.
ಜೂನ್ ತಿಂಗಳಲ್ಲಿ ಅಮೇರಿಕಾದಲ್ಲಿ ನಡೆಯುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡ ಗೆದ್ದರೆ ತಂಡದ ಪ್ರತಿ ಆಟಗಾರನಿಗೂ 1 ಲಕ್ಷ ಯುಎಸ್ ಡಾಲರ್ ಬಹುಮಾನ ನೀಡುವುದಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಘೋಷಣೆ ಮಾಡಿದೆ.


ಪಾಕಿಸ್ತಾನದ ಈ ಘೋಷಣೆ ಕೇಳಿ ಅಲ್ಲಿನ ನಾಗರಿಕರು ಅವಾಕ್ಕಾಗಿದ್ದಾರೆ. ಯಾಕೆಂದರೆ ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ಘೋಷಣೆ ಮಾಡಿದ ಮೊತ್ತ ಒಂದು ಲಕ್ಷ ಯುಎಸ್ ಡಾಲರ್ ಎಂದರೆ ಭಾರತದ ರೂಪಾಯಿ 83.44 ಲಕ್ಷ ರೂಪಾಯಿ ಆಗುತ್ತದೆ. ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ಪಾಕಿಸ್ತಾನ ಈಗಾಗಲೇ ಪಾತಾಳ ತಲುಪಿದೆ. ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗಿದೆ. 1 ಕಿಲೋ ಗೋಧಿ ಹಿಟ್ಟಿಗೆ 800 ಪಾಕಿಸ್ತಾನಿ ರೂಗಳು, 1 ರೊಟ್ಟಿಯ ಬೆಲೆ 25 ರೂ ಪಾಕಿಸ್ತಾನಿ ರೂ ತಲುಪಿದೆ. ಪೆಟ್ರೋಲ್ – ಡಿಸೀಲ್ ದರವಂತೂ ಹೇಳುವುದೇ ಬೇಡಾ. ಹೀಗಿರುವಾಗ ಇಷ್ಟು ದೊಡ್ಡ ಮೊತ್ತವನ್ನು ಪ್ರತಿ ಆಟಗಾರನಿಗೆ ಕೊಡುವ ಅವಶ್ಯಕತೆ ಇದೆಯಾ ಎನ್ನುವ ಪ್ರಶ್ನೆ ಮೂಡಿದೆ.
ಇದೇ ವೇಳೆ ಆಟಗಾರರಿಗೆ ಖಡಕ್ ಸೂಚನೆ ನೀಡಿದ ಪಿಸಿಬಿ ಮುಖ್ಯಸ್ಥ ” ವಿಶ್ವಕಪ್ ಗೆಲ್ಲುವುದು ದೊಡ್ಡ ವಿಷಯ. ಈ ಸಲ ಗೆಲ್ಲಲೇಬೇಕು ಎನ್ನುವುದು ದೇವರ ಇಚ್ಚೆ. ಖಚಿತವಾಗಿ ನಮ್ಮ ತಂಡ ಗೆಲುವು ಸಾಧಿಸುತ್ತದೆ. ಈ ದೇಶ ನಿಮ್ಮ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟಿದೆ. ಅವುಗಳನ್ನು ಯಾವುದೇ ಕಾರಣಕ್ಕೂ ಹುಸಿಗೊಳಿಸಬಾರದು” ಎಂದು ಹೇಳಿದರು. ಗೆಲ್ಲುವುದಿಲ್ಲ ಎಂದು ಗೊತ್ತಿದ್ದೂ ಇಷ್ಟು ದೊಡ್ಡ ಮೊತ್ತದ ಆಸೆ ತೋರಿಸಲಾಗಿದೆಯಾ ಎನ್ನುವುದು ಈಗ ಇರುವ ಪ್ರಶ್ನೆ!

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search