• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರ್ನಾಟಕದಲ್ಲಿ ಶಾಸಕರಿಗೆ ಸಂಬಳ ಕೊಡಲು ಹಣ ಇಲ್ವಾ?

Tulunadu News Posted On May 6, 2024
0


0
Shares
  • Share On Facebook
  • Tweet It

ಗ್ಯಾರಂಟಿ ಯೋಜನೆ ಜಾರಿ ಮಾಡಿ ಖಜಾನೆ ಖಾಲಿಯಾಗಿದೆ. ಇದ್ರಿಂದಾಗಿ ಶಾಸಕರ ಸಂಬಳವನ್ನು ಕೊಡೋದಕ್ಕೂ ಆಗ್ತಿಲ್ಲ ಎಂದು ರಾಜ್ಯ ಸರಕಾರದ ವಿರುದ್ಧ ಮಾಜಿ ಸಚಿವ, ನರಗುಂದದ ಶಾಸಕ ಸಿಸಿ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗದಗನಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು ಸರಕಾರದ ಖಜಾನೆ ಖಾಲಿಯಾಗಿದೆ. ರಾಜ್ಯದ ಆರ್ಥಿಕ ಸ್ಥಿತಿ ಬಗ್ಗೆ, ಸರಕಾರ ಶ್ವೇತಪತ್ರ ಹೊರಡಿಸಲಿ ಎಂದು ಸವಾಲು ಹಾಕಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯನವರು ರಾಜ್ಯದಲ್ಲಿ ಅತೀ ಹೆಚ್ಚು ಬಾರಿ ಬಜೆಟ್ ಮಂಡಿಸಿದ ಕೀರ್ತಿಯನ್ನು ಹೊಂದಿದ್ದಾರೆ. ಅವರು ಆರ್ಥಿಕ ತಜ್ಞರಾಗಿ ಈ ಗ್ಯಾರಂಟಿಗಳ ವಿಷಯದಲ್ಲಿ ಹೀಗೆ ಬೇಕಾಬಿಟ್ಟಿ ನಿರ್ಧಾರಗಳನ್ನು ತೆಗೆದುಕೊಂಡು ಘೋಷಣೆ ಕೂಗಬಾರದಿತ್ತು. ರಾಜ್ಯದ ಆರ್ಥಿಕತೆ ವಿಷಯದಲ್ಲಿ ಕಾಂಪ್ರಮೈಸ್ ಯಾಕೆ ಮಾಡಿಕೊಂಡರು ಎನ್ನುವುದು ಗೊತ್ತಾಗುತ್ತಿಲ್ಲ. ಬಡವರಿಗೆ ಭಾಗ್ಯಗಳನ್ನು ಕೊಡಲು ನಮ್ಮ ವಿರೋಧವಿಲ್ಲ. ಆದರೆ ಇದಕ್ಕೆ ತಗಲುವ ಖರ್ಚು ವೆಚ್ಚ, ಉಳಿದ ಅಭಿವೃದ್ಧಿ ಕಾರ್ಯಗಳಿಗೆ ಬೇಕಾಗುವ ಅನುದಾನ ಎಲ್ಲವನ್ನು ಲೆಕ್ಕ ಹಾಕಬೇಕಿತ್ತು ಎಂದು ಹೇಳಿದರು.
ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವ ಸಮಯದಲ್ಲಿ 25 ಸಾವಿರ ಕೋಟಿ ರೂಪಾಯಿ ಖಜಾನೆಯಲ್ಲಿತ್ತು. ಅದೀಗ ಖಾಲಿಯಾಗಿ 1 ಲಕ್ಷ 85 ಸಾವಿರ ಕೋಟಿ ಸಾಲ ಮಾಡಿದ್ದಾರೆ. ಬಸ್ ಫ್ರೀ ಎಂದರು. ಈಗ 10 ಬಸ್ ಓಡುತ್ತಿದ್ದ ಕಡೆ ನಾಲ್ಕು ಮಾತ್ರ ಓಡುವ ಪರಿಸ್ಥಿತಿ ಇದೆ. ಬಸ್ ರಿಪೇರಿ ಮಾಡಲು ಹಣವಿಲ್ಲ. ಸಿಬ್ಬಂದಿ ಸಂಬಳಕ್ಕೆ ಹಣ ಇಲ್ಲ ಎಂದು ಶಕ್ತಿ ಯೋಜನೆಯ ಗ್ರಹಚಾರವನ್ನು ಕೂಡ ಬಯಲಿಗಿಟ್ಟಿದ್ದಾರೆ.

ಲೋಕಸಭಾ ಚುನಾವಣೆಯ ಬಳಿಕ ಕಾಂಗ್ರೆಸ್ ರಾಜ್ಯದಲ್ಲಿ ಡಿವೈಡ್ ಆಗುತ್ತದೆ. ಸೋಲಿನ ಹೊಣೆ ಹೊತ್ತು ಸಿದ್ಧರಾಮಯ್ಯನವರು ಅಧಿಕಾರದಿಂದ ಕೆಳಗಿಳಿಯುವ ಪರಿಸ್ಥಿತಿ ಬರುತ್ತದೆ. ಯಾವುದೇ ಸಂದರ್ಭ ಕರ್ನಾಟಕಕ್ಕೆ ಮಧ್ಯಂತರ ಚುನಾವಣೆ ಬರಬಹುದು. ನಾವು ಮಾನಸಿಕವಾಗಿ ತಯಾರಾಗಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search