• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರಜ್ವಲ್ ರೇವಣ್ಣ ವಿಷಯದಲ್ಲಿ ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ…

Tulunadu News Posted On May 6, 2024
0


0
Shares
  • Share On Facebook
  • Tweet It

ಜೆಡಿಎಸ್ ನಿಂದ ಅಮಾನತಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಮಾಧ್ಯಮಗಳು ತಮ್ಮ ಹೆಸರು ಬಳಸಿಕೊಳ್ಳದಂತೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಪುತ್ರ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.

ಪ್ರಜ್ವಲ್ ರೇವಣ್ಣ ಪ್ರಕರಣ ಬಯಲಿಗೆ ಬಂದ ನಂತರ ದೊಡ್ಡಗೌಡರ ಇಡೀ ಕುಟುಂಬ ಮಾನಸಿಕವಾಗಿ ಜರ್ಜರಿತವಾಗಿತ್ತು. ಅದರೊಂದಿಗೆ ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಾಧ್ಯಮದಲ್ಲಿಯೂ ಇದು ಸಾಕಷ್ಟು ಚರ್ಚೆ, ಆರೋಪ, ವ್ಯಂಗ್ಯ, ರಂಗುರಂಗಾಗಿ ಸುದ್ದಿ ಪ್ರಕಟವಾಗುತ್ತಿದ್ದಂತೆ ಇಡೀ ಗೌಡರ ಕುಟುಂಬ ಮುಜುಗರಕ್ಕೆ ಒಳಗಾಗಿತ್ತು. ಮಾಧ್ಯಮ ಸಂಸ್ಥೆಗಳು ಎಲ್ಲಾ ಕಡೆ ಪ್ರಜ್ವಲ್ ರೇವಣ್ಣನವರ ಸುದ್ದಿ ಪ್ರಸಾರ ಮಾಡುವಾಗ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮೊಗ ಎಂದು ಪದೇ ಪದೇ ಹೇಳುವ ವಿಚಾರದಿಂದ ದೇವೇಗೌಡರ ಆರೋಗ್ಯದಲ್ಲಿಯೂ ಏರುಪೇರಾಗಿ ಅವರು ಆಸ್ಪತ್ರೆಗೆ ದಾಖಲಾಗುವ ಪರಿಸ್ಥಿತಿ ಬಂದಿತ್ತು. ಇದರೊಂದಿಗೆ ಮಾಜಿ ಸಿಎಂ ಕುಮಾರಸ್ವಾಮಿಯವರ ಹೆಸರನ್ನು ಕೂಡ ಈ ಪ್ರಕರಣದೊಂದಿಗೆ ಎಳೆದು ತರುತ್ತಿದ್ದರಿಂದ ಅವರ ವರ್ಚಸ್ಸಿಗೂ ದಕ್ಕೆ ಬಂದಿತ್ತು. ಈಗ ಅದನ್ನೆಲ್ಲಾ ತಪ್ಪಿಸಲು ಪ್ರಜ್ವಲ್ ಕೇಸಿನಲ್ಲಿ ಮಾಧ್ಯಮಗಳು ತಮ್ಮ ಹೆಸರು ಬಳಸದಂತೆ ತಡೆ ನೀಡುವಂತೆ ಕೋರಿ ಎಚ್ ಡಿ ದೇವೇಗೌಡ ಹಾಗೂ ಎಚ್ ಡಿ ಕುಮಾರಸ್ವಾಮಿ ಅವರು ನಗರದ 34 ನೇ ಸಿಟಿ ಸಿವಿಲ್ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ನಿರ್ಬಂಧಕಾಜ್ಞೆಗೆ ಮನವಿ ಮಾಡಿದ್ದರು.

ಸಾಕ್ಷ್ಯಗಳಿಲ್ಲದೇ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸುದ್ದಿ ಪಸರಿಸುವಂತಿಲ್ಲ ಎಂದು ಕೋರ್ಟ್ ಹೇಳಿದೆ. ದೇವೇಗೌಡ, ಕುಮಾರಸ್ವಾಮಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡಬಾರದು, ಸತ್ಯಾಂಶವಿದ್ದು, ಸಾಕ್ಷ್ಯಗಳಿದ್ದರೆ ಮಾತ್ರ ಸುದ್ದಿ ಪ್ರಸಾರ ಮಾಡಬಹುದು ಎಂದು ಕೋರ್ಟ್ ಹೇಳಿದೆ.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search