• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಾಧ್ಯಮದವರಿಗೆ ನೀರು ಕುಡಿಯಲು ಸಲಹೆ ನೀಡಿದ ಮೋದಿ!

Tulunadu News Posted On May 7, 2024
0


0
Shares
  • Share On Facebook
  • Tweet It

ಸಾಮಾನ್ಯವಾಗಿ ಪ್ರಧಾನಿ ನರೇಂದ್ರ ಮೋದಿಯವರು ಮಾಧ್ಯಮಗಳ ಮೈಕ್ ಗಳ ಮುಂದೆ ಮಾತನಾಡುವುದಿಲ್ಲ. ಈಬಾರಿಯ ಚುನಾವಣೆಯಲ್ಲಿ ಆಯ್ದ ಕೆಲವು ಮೀಡಿಯಾ ಸಂಸ್ಥೆಗಳ ಮುಖ್ಯಸ್ಥರ, ಪ್ರಮುಖರ ಜೊತೆ ಸಂವಾದ ನಡೆಸಿದರಾದರೂ ಹೋದ ಕಡೆ, ಬಂದ ಕಡೆ ನಿಂತು ಟಿವಿ ಕ್ಯಾಮೆರಾಗಳ ಎದುರು ಮಾತನಾಡುವ ಸಂಪ್ರದಾಯ ಇಟ್ಟುಕೊಂಡಿಲ್ಲ. ಆದರೆ ಅಹಮದಾಬಾದಿನಲ್ಲಿ ಮತ ಚಲಾಯಿಸಲು ಬಂದ ನರೇಂದ್ರ ಮೋದಿ ಮಾಧ್ಯಮಗಳ ಮೈಕ್ ಗಳ ಮುಂದೆ ನಿಂತು ಕೊಂಚ ಹೊತ್ತು ಮಾತನಾಡಿದ ಪ್ರಸಂಗ ನಡೆದಿದೆ. ಅವರ ಜೊತೆ ಅಮಿತ್ ಶಾ ಕೂಡ ಪಕ್ಕದಲ್ಲಿಯೇ ನಿಂತದ್ದು ಒಂದು ವಿಷಯ.

“ಮಾಧ್ಯಮದವರು ತಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು. ಮೀಡಿಯಾದಲ್ಲಿಯೂ ಸಾಕಷ್ಟು ಸ್ಪರ್ಧೆ ಇದೆ. ಮಾಧ್ಯಮದವರು ಎಲ್ಲಾ ವಿಷಯವನ್ನು ವರದಿ ಮಾಡುವ ಭರದಲ್ಲಿ ಸಮಯದ ವೇಗಕ್ಕಿಂತಲೂ ಒಂದು ಹೆಜ್ಜೆ ಮುಂದೆ ಹೋಗಬೇಕಾಗುತ್ತದೆ. ಈ ಬಿರುಸಿನ ಜೀವನದಲ್ಲಿ ನನ್ನ ಹಳೆಯ ಮಾಧ್ಯಮ ಮಿತ್ರರಿಗೆ ನಾನು ಸಲಹೆ ನೀಡುವುದೇನೆಂದರೆ ನೀವು ಆದಷ್ಟು ನೀರು ಕುಡಿಯುವ ಅಭ್ಯಾಸ ಮಾಡಬೇಕು. ಈ ಉರಿಬಿಸಿಲಿನಲ್ಲಿ ನೀರು ನಿಮ್ಮ ದೇಹಕ್ಕೆ ಬೇಕಾದಷ್ಟು ಶಕ್ತಿಯನ್ನು ನೀಡುತ್ತದೆ. ಇವತ್ತು ಮೂರನೇ ಹಂತದ ಮತದಾನ. ನಾನು ಮತದಾರರಿಗೆ ಆಗ್ರಹ ಮಾಡುವುದೇನೆಂದರೆ ದೇಶದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿ. ಇನ್ನು ನಾಲ್ಕು ಹಂತದಲ್ಲಿ ಮತದಾನ ನಡೆಯಲಿದೆ. ನಾನು ಪ್ರತಿ ಬಾರಿ ಇದೇ ಕ್ಷೇತ್ರದಲ್ಲಿ ಮತ ಚಲಾಯಿಸುತ್ತಾ ಬಂದಿದ್ದೇನೆ. ಅಮಿತ್ ಶಾ ಅವರು ಈ ಕ್ಷೇತ್ರದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ. ಇನ್ನು ನನಗೆ ಮಹಾರಾಷ್ಟ್ರ, ತೆಲಂಗಾಣ ಸಹಿತ ಅನೇಕ ಕಡೆ ಪ್ರಚಾರಕ್ಕೆ ತೆರಳಲು ಇದೆ. ಈ ಬಾರಿ ಚುನಾವಣಾ ಆಯೋಗವು ಬಹಳ ಉತ್ತಮ ರೀತಿಯಲ್ಲಿ ಮತದಾನದ ಹಂತಗಳ ರೂಪುರೇಶೆ ತಯಾರಿಸಿದ್ದಾರೆ. ಇದರಿಂದ ಪ್ರಚಾರದ ಮ್ಯಾನೇಜಮೆಂಟ್ ಕೂಡ ನಮಗೆ ಉತ್ತಮ ರೀತಿಯಲ್ಲಿ ಮಾಡಲು ಅನುಕೂಲವಾಗಿದೆ. ಇದು ಪ್ರಜಾಪ್ರಭುತ್ವವನ್ನು ಬಲಿಷ್ಟ ಮಾಡಲು ಸಹಕಾರಿಯಾಗಿದೆ. ಮತದಾನವನ್ನು ಹಬ್ಬದ ರೀತಿಯಲ್ಲಿ ಆಚರಿಸೋಣ”.

ಮೋದಿಯವರು ತಾವು ಮತದಾನ ಮಾಡಿದರ ಸಂಕೇತವಾಗಿ ಹಾಕಿರುವ ಶಾಯಿಯನ್ನು ತೋರಿಸುತ್ತಾ ಮಾಧ್ಯಮಗಳ ಮುಂದೆ ಕಾಣಿಸಿಕೊಂಡು ಪ್ರಧಾನಿ ಮೀಡಿಯಾಗಳ ಮುಂದೆ ಮಾತನಾಡುವುದಿಲ್ಲ ಎನ್ನುವ ಸಂಪ್ರದಾಯವನ್ನು ಅಳಿಸಿಹಾಕಿದರು.

0
Shares
  • Share On Facebook
  • Tweet It




Trending Now
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
  • Popular Posts

    • 1
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search