• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕೊನೆಗೂ ಸಂಜೆ ಬಂದು ಮತ ಚಲಾಯಿಸಿ ತೆರಳಿದ ಅನಂತಕುಮಾರ್ ಹೆಗ್ಡೆ!

Tulunadu News Posted On May 7, 2024


  • Share On Facebook
  • Tweet It

ಉತ್ತರ ಕನ್ನಡ ಲೋಕಸಭಾ ಚುನಾವಣೆಗೆ ಟಿಕೆಟ್ ತಪ್ಪಿದ ಬಳಿಕ ರಾಜಕೀಯದಿಂದ ದೂರವೇ ಉಳಿದಿದ್ದ ಸಂಸದ ಅನಂತಕುಮಾರ್ ಹೆಗ್ಡೆ ಕೊನೆಗೂ ಮನೆಯಿಂದ ಹೊರಬಂದು ಮತ ಚಲಾಯಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಕೆಎಚ್ ಬಿ ಕಾಲೋನಿಯ ಸರಕಾರಿ ಪ್ರಾಥಮಿಕ ಶಾಲೆಯ ಮತಗಟ್ಟೆಗೆ ಪತ್ನಿ ಜೊತೆಗೆ ಆಗಮಿಸಿ ಮತದಾನ ಮಾಡಿದ್ದಾರೆ. ಸಾಮಾನ್ಯವಾಗಿ ಈ ಹಿಂದಿನ ಚುನಾವಣೆಗಳಲ್ಲಿ ಬೆಳಿಗ್ಗೆ 8 ಗಂಟೆಗೆಲ್ಲಾ ಮತಕೇಂದ್ರಕ್ಕೆ ಬಂದು ಮತದಾನ ಮಾಡುತ್ತಿದ್ದ ಅನಂತಕುಮಾರ್ ಹೆಗ್ಡೆ ಮೊದಲ ಬಾರಿ ಸಾವಕಾಶವಾಗಿ ಸಂಜೆ 4.30 ರ ಸುಮಾರಿಗೆ ಬಂದು ಮತ ಚಲಾಯಿಸಿದ್ದಾರೆ.

ಮತದಾನ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಲು ಅಷ್ಟೇನೂ ಆಸಕ್ತಿ ತೋರಿಸಿದ ಹೆಗ್ಡೆ, ಮತದಾನ ಮಾಡುವುದು ದೇಶದ ಜನರ ಕರ್ತವ್ಯ. ಹಾಗಾಗಿ ನಾನು ದೇಶದ ಒಬ್ಬ ಪ್ರಜೆಯಾಗಿ ಮತ ಚಲಾವಣೆ ಮಾಡಲು ಬಂದಿದ್ದೇನೆ ಎಂದು ಹೇಳಿ ತೆರಳಿದರು. ಟಿಕೆಟ್ ಕೈ ತಪ್ಪಿದ ಬಗ್ಗೆ , ಪ್ರಧಾನಿ ನರೇಂದ್ರ ಮೋದಿಯವರು ಉತ್ತರ ಕನ್ನಡದ ಶಿರಸಿಗೆ ಬಂದಾಗ ಏಕೆ ಕಾಣಿಸಿಕೊಳ್ಳಲಿಲ್ಲ ಎಂದು ಕೇಳಿದಾಗಲೂ ಏನೂ ಉತ್ತರಿಸದೇ ಮುಗುಳುನಗೆ ಬೀರಿ ಮುಂದೆ ಸಾಗಿದರು.

ಒಟ್ಟು ಆರು ಬಾರಿ ಸಂಸದರಾಗಿರುವ ಅವರು ಈ ಬಾರಿಯೂ ಟಿಕೆಟ್ ಸಿಕ್ಕೆ ಸಿಗುತ್ತದೆ ಎನ್ನುವ ಆಶಾಭಾವನೆಯಿಂದ ಚುನಾವಣೆ ಘೋಷಣೆಯಾಗುವ ಆರು ತಿಂಗಳ ಮೊದಲಿನಿಂದ ಪ್ರಚಾರದಲ್ಲಿ ವ್ಯಸ್ತರಾಗಿದ್ದರು. ಆದರೆ ಟಿಕೆಟ್ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಪಾಲಾದ ನಂತರ ಮನೆಯಿಂದ ಹೊರಗೆ ಪ್ರಚಾರಕ್ಕೆ ಬರಲೇ ಇಲ್ಲ. ಕಾಗೇರಿಯವರು ಅನಂತ ಕುಮಾರ್ ಮನೆಯ ಹೊರಗೆ ಕಾದು ಬಂದ ದಾರಿಗೆ ಸುಂಕವಿಲ್ಲದೇ ತೆರಳಿದಂತಹ ಘಟನೆ ಕೂಡ ನಡೆಯಿತು. ಅನಂತ್ ಮೌನ ಭಾರತೀಯ ಜನತಾ ಪಾರ್ಟಿಯ ಗೆಲುವು ಮತ್ತು ಸೋಲಿನ ನಡುವೆ ಬಂಡೆಯಂತೆ ನಿಂತಿದೆ ಎನ್ನುವುದು ರಾಜಕೀಯ ಪಂಡಿತರ ಅಭಿಪ್ರಾಯ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search