• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೊನೆಗೂ ಸಂಜೆ ಬಂದು ಮತ ಚಲಾಯಿಸಿ ತೆರಳಿದ ಅನಂತಕುಮಾರ್ ಹೆಗ್ಡೆ!

Tulunadu News Posted On May 7, 2024
0


0
Shares
  • Share On Facebook
  • Tweet It

ಉತ್ತರ ಕನ್ನಡ ಲೋಕಸಭಾ ಚುನಾವಣೆಗೆ ಟಿಕೆಟ್ ತಪ್ಪಿದ ಬಳಿಕ ರಾಜಕೀಯದಿಂದ ದೂರವೇ ಉಳಿದಿದ್ದ ಸಂಸದ ಅನಂತಕುಮಾರ್ ಹೆಗ್ಡೆ ಕೊನೆಗೂ ಮನೆಯಿಂದ ಹೊರಬಂದು ಮತ ಚಲಾಯಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಕೆಎಚ್ ಬಿ ಕಾಲೋನಿಯ ಸರಕಾರಿ ಪ್ರಾಥಮಿಕ ಶಾಲೆಯ ಮತಗಟ್ಟೆಗೆ ಪತ್ನಿ ಜೊತೆಗೆ ಆಗಮಿಸಿ ಮತದಾನ ಮಾಡಿದ್ದಾರೆ. ಸಾಮಾನ್ಯವಾಗಿ ಈ ಹಿಂದಿನ ಚುನಾವಣೆಗಳಲ್ಲಿ ಬೆಳಿಗ್ಗೆ 8 ಗಂಟೆಗೆಲ್ಲಾ ಮತಕೇಂದ್ರಕ್ಕೆ ಬಂದು ಮತದಾನ ಮಾಡುತ್ತಿದ್ದ ಅನಂತಕುಮಾರ್ ಹೆಗ್ಡೆ ಮೊದಲ ಬಾರಿ ಸಾವಕಾಶವಾಗಿ ಸಂಜೆ 4.30 ರ ಸುಮಾರಿಗೆ ಬಂದು ಮತ ಚಲಾಯಿಸಿದ್ದಾರೆ.

ಮತದಾನ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಲು ಅಷ್ಟೇನೂ ಆಸಕ್ತಿ ತೋರಿಸಿದ ಹೆಗ್ಡೆ, ಮತದಾನ ಮಾಡುವುದು ದೇಶದ ಜನರ ಕರ್ತವ್ಯ. ಹಾಗಾಗಿ ನಾನು ದೇಶದ ಒಬ್ಬ ಪ್ರಜೆಯಾಗಿ ಮತ ಚಲಾವಣೆ ಮಾಡಲು ಬಂದಿದ್ದೇನೆ ಎಂದು ಹೇಳಿ ತೆರಳಿದರು. ಟಿಕೆಟ್ ಕೈ ತಪ್ಪಿದ ಬಗ್ಗೆ , ಪ್ರಧಾನಿ ನರೇಂದ್ರ ಮೋದಿಯವರು ಉತ್ತರ ಕನ್ನಡದ ಶಿರಸಿಗೆ ಬಂದಾಗ ಏಕೆ ಕಾಣಿಸಿಕೊಳ್ಳಲಿಲ್ಲ ಎಂದು ಕೇಳಿದಾಗಲೂ ಏನೂ ಉತ್ತರಿಸದೇ ಮುಗುಳುನಗೆ ಬೀರಿ ಮುಂದೆ ಸಾಗಿದರು.

ಒಟ್ಟು ಆರು ಬಾರಿ ಸಂಸದರಾಗಿರುವ ಅವರು ಈ ಬಾರಿಯೂ ಟಿಕೆಟ್ ಸಿಕ್ಕೆ ಸಿಗುತ್ತದೆ ಎನ್ನುವ ಆಶಾಭಾವನೆಯಿಂದ ಚುನಾವಣೆ ಘೋಷಣೆಯಾಗುವ ಆರು ತಿಂಗಳ ಮೊದಲಿನಿಂದ ಪ್ರಚಾರದಲ್ಲಿ ವ್ಯಸ್ತರಾಗಿದ್ದರು. ಆದರೆ ಟಿಕೆಟ್ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಪಾಲಾದ ನಂತರ ಮನೆಯಿಂದ ಹೊರಗೆ ಪ್ರಚಾರಕ್ಕೆ ಬರಲೇ ಇಲ್ಲ. ಕಾಗೇರಿಯವರು ಅನಂತ ಕುಮಾರ್ ಮನೆಯ ಹೊರಗೆ ಕಾದು ಬಂದ ದಾರಿಗೆ ಸುಂಕವಿಲ್ಲದೇ ತೆರಳಿದಂತಹ ಘಟನೆ ಕೂಡ ನಡೆಯಿತು. ಅನಂತ್ ಮೌನ ಭಾರತೀಯ ಜನತಾ ಪಾರ್ಟಿಯ ಗೆಲುವು ಮತ್ತು ಸೋಲಿನ ನಡುವೆ ಬಂಡೆಯಂತೆ ನಿಂತಿದೆ ಎನ್ನುವುದು ರಾಜಕೀಯ ಪಂಡಿತರ ಅಭಿಪ್ರಾಯ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search