• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತೆಂಡೂಲ್ಕರ್ ಭದ್ರತಾ ಸಿಬ್ಬಂದಿ ಆತ್ಮಹತ್ಯೆ!

Tulunadu News Posted On May 16, 2024
0


0
Shares
  • Share On Facebook
  • Tweet It

ಭಾರತ ರತ್ನ, ಕ್ರಿಕೆಟ್ ದಿಗ್ಗಜ ಸಚಿನ್ ತೆಂಡ್ಕೂಲರ್ ಅವರ ಭದ್ರತಾ ಸಿಬ್ಬಂದಿಯಾಗಿ ನಿಯುಕ್ತಿಗೊಂಡಿದ್ದ ಯೋಧ ತನ್ನ ಕುತ್ತಿಗೆಗೆ ಗುಂಡು ಹೊಡೆದು ಆತ್ಮಹತ್ಯೆಗೆ ಶರಣಾಗಿದ್ದಾನೆ.
ವೃದ್ಧ ತಂದೆ, ತಾಯಿ, ಪತ್ನಿ ಹಾಗೂ ಇಬ್ಬರು ಪುಟ್ಟ ಮಕ್ಕಳನ್ನು ಅನಾಥರನ್ನಾಗಿಸಿದ ಪ್ರಕಾಶ್ ಕಪಡೆ ಹೀಗೆಕೆ ಮಾಡಿದರು ಎನ್ನುವುದು ಇನ್ನು ವಿಚಾರಣೆಯಿಂದ ತಿಳಿಯಬೇಕಾಗಿದೆ.

ರಾಜ್ಯ ಮೀಸಲು ಪೊಲೀಸ್ ಪಡೆಯ ಜವಾನ್ ಆಗಿದ್ದ ಪ್ರಕಾಶ್ ಕಪಡೆ ಕೇವಲ 39 ವರ್ಷ ವಯಸ್ಸು. ಕಿರು ರಜೆಯನ್ನು ಕಳೆಯಲು ತನ್ನ ಹಿರಿಯರ ಹುಟ್ಟೂರಾದ ಜಮ್ನೇರ್ ಎನ್ನುವ ಊರಿಗೆ ತೆರಳಿದ್ದರು.
ಅಲ್ಲಿ ಬುಧವಾರ ರಾತ್ರಿ ಸುಮಾರು ಒಂದೂವರೆ ಗಂಟೆಯ ಹೊತ್ತಿಗೆ ಕುತ್ತಿಗೆಗೆ ತನ್ನ ಸರ್ವಿಸ್ ರಿವಾಲ್ವರ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಆತ್ಮಹತ್ಯೆಗೆ ಕಾರಣ ಏನು ಎನ್ನುವುದು ಸದ್ಯಕ್ಕೆ ಪತ್ತೆಯಾಗಿಲ್ಲ. ಪ್ರಕಾಶ್ ಅವರ ಸಾವಿನ ತನಿಖೆಗೆ ಇಳಿದಿರುವ ಪೊಲೀಸ್ ಇಲಾಖೆ ಪತ್ನಿ, ಮಕ್ಕಳು, ಹತ್ತಿರದ ಸಂಬಂಧಿಕರು ಮತ್ತು ಸ್ನೇಹಿತರನ್ನು ವಿಚಾರಣೆ ನಡೆಸುತ್ತಿದೆ. ಇನ್ನು ವಿವಿಐಪಿ ಭದ್ರತಾ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡಿರುವುದರಿಂದ ಇದನ್ನು ಎಸ್ ಆರ್ ಪಿ ಎಫ್ ಕೂಡ ಗಂಭೀರವಾಗಿ ತೆಗೆದುಕೊಂಡಿದೆ. ಸ್ವತಂತ್ರ ತನಿಖೆ ಆ ಸಂಸ್ಥೆಯಿಂದಲೂ ನಡೆಯುತ್ತಿದೆ.

ಸದ್ಯ ವೈಯಕ್ತಿಕ ಕಾರಣದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದ್ದರೂ ಇಂತಹ ವಿಷಯಗಳನ್ನು ಭದ್ರತಾ ಇಲಾಖೆಗಳು ಗಂಭೀರವಾಗಿ ತೆಗೆದುಕೊಳ್ಳಬೇಕಾಗಿದೆ. ಯಾಕೆಂದರೆ ಯಾವುದಾದರೂ ಬೇಸರ, ದು:ಖದಿಂದ ಇರುವಂತಹ ವ್ಯಕ್ತಿಗಳು ಯಾವ ಸಂದರ್ಭದಲ್ಲಿ ಏನು ಮಾಡುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search