• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಯಾಕೆ ಪ್ರೆಸ್ ಮೀಟ್ ಮಾಡಲ್ಲ? ಇಲ್ಲಿದೆ ಉತ್ತರ!

Tulunadu News Posted On May 17, 2024
0


0
Shares
  • Share On Facebook
  • Tweet It

ಪ್ರಧಾನಿಯಾಗಿ ಹತ್ತು ವರುಷ ಕಳೆದ ನಂತರ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಯವರು ಅನೇಕ ಪ್ರಮುಖ ಮೀಡಿಯಾ ಸಂಸ್ಥೆಗಳಿಗೆ ಮುಕ್ತವಾಗಿ ಸಂದರ್ಶನ ನೀಡಿದ್ದಾರೆ. ಅದರೆ ಇಡೀ ಒಂದು ದಶಕದಲ್ಲಿ ಮೋದಿಯವರು ಒಂದೇ ಒಂದು ಸುದ್ದಿಗೋಷ್ಟಿಯನ್ನು ಕರೆಯದಿರುವುದು ಮಾತ್ರ ಆಶ್ಚರ್ಯ. ಮೋದಿಯವರು ಯಾಕೆ ಸುದ್ದಿಗೋಷ್ಟಿ ಕರೆದು ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸುವುದಿಲ್ಲ ಎಂಬ ಜಿಜ್ಞಾಸೆ ಎಲ್ಲರಲ್ಲಿಯೂ ಇತ್ತು. ಕಾಂಗ್ರೆಸ್ಸಿಗರು ಇದೇ ವಿಷಯವನ್ನು ಹಿಡಿದುಕೊಂಡು ಮೋದಿಯವರನ್ನು ಆಗಾಗ್ಗೆ ಟೀಕೆ ಮಾಡುತ್ತಾ ಮೋದಿಯವರು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಲಾಗದೇ ಸುದ್ದಿಗೋಷ್ಟಿ ಕರೆಯಲು ಹಿಂದೇಟು ಹಾಕುತ್ತಾರೆ ಎಂದು ಹೇಳುತ್ತಾ ಬರುತ್ತಿದ್ದರು.
ಇತ್ತೀಚೆಗೆ ಆಜ್ ತಕ್ ವಾಹಿನಿಯ ಸಂಪಾದಕ/ನಿರೂಪಕರ ತಂಡಕ್ಕೆ ಮೋದಿಯವರು ವಿಶೇಷ ಸಂದರ್ಶನ ನೀಡಿದ ಸಂದರ್ಭದಲ್ಲಿ ನಿರೂಪಕ ರಾಹುಲ್ ಕನ್ವಲ್ ಈ ಪ್ರಶ್ನೆಯನ್ನು ಕೇಳಿದ್ದಾರೆ. ತಾವು ಯಾಕೆ ಸುದ್ದಿಗೋಷ್ಟಿ ಕರೆಯುವುದಿಲ್ಲ ಎನ್ನುವುದನ್ನು ಮೋದಿಯವರು ತಮ್ಮ ಅನುಭವದ ಆಧಾರದ ಮೇಲೆ ವಿವರಿಸಿದ್ದಾರೆ. ಅದರ ಸಾರಾಂಶ ಇಲ್ಲಿದೆ.

“ಹಿಂದೆ ಕೆಲವರು ಮಾಧ್ಯಮಗಳ ಮುಂದೆ ಹೋಗಿ ಪ್ರಚಾರಕ್ಕಾಗಿ ಏಕಪಕ್ಷೀಯ ಸುದ್ದಿಗಳನ್ನು ತಮಗೆ ಬೇಕಾದ ಹಾಗೆ ಹೇಳುತ್ತಿದ್ದರು. ಅದು ಸರಿಯಲ್ಲ. ನಾನು ನನ್ನ ಜನರ ಮನೆಬಾಗಿಲಿಗೆ ಹೋಗಿ ವಾಸ್ತವ ಅರಿಯುತ್ತಾ ಬಂದಿದ್ದೇನೆ. ಪ್ರಸ್ತುತ ಕಾಲಘಟ್ಟದಲ್ಲಿ ನಿಮ್ಮ ವಿಷಯಗಳನ್ನು ಜನರ ಮುಂದೆ ಪ್ರಸ್ತಾಪಿಸಲು ಅನೇಕ ಮಾಧ್ಯಮಗಳಿವೆ. ಇನ್ನು ಸಂಸತ್ತಿನಲ್ಲಿ ನನ್ನ ಹುದ್ದೆಗೆ ಜವಾಬ್ದಾರಿಯುತನಾಗಿದ್ದೇನೆ. ನಾನು ಏನಿದ್ದರೂ ಅಲ್ಲಿಂದಲೇ ಜನರಿಗೆ ಉತ್ತರಿಸುತ್ತೇನೆ. ಅದು ಶ್ರೇಷ್ಟ ಮತ್ತು ಸಮರ್ಪಕ ದಾರಿಯಾಗಿದೆ. ನಾನು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಒಂದಿಷ್ಟು ಹಳ್ಳಿಗರು ನನ್ನ ಬಳಿ ಬಂದು ನಾವೀಗ ದಿನದ 24 ಗಂಟೆಯೂ ವಿದ್ಯುತ್ ಸಿಗುವಂತಹ ವ್ಯವಸ್ಥೆಯಾಗಿದೆ. ಧನ್ಯವಾದಗಳು ಎಂದರು. ಅದಕ್ಕೆ ನಾನು ಈ ವಿಷಯ ಮೀಡಿಯಾದಲ್ಲಿ ಬಂದೇ ಇಲ್ಲ ಎಂದೆ. ಅದಕ್ಕೆ ಅವರು ಇಂತಹ ವಿಷಯಗಳನ್ನು ಮೀಡಿಯಾದವರು ಎಲ್ಲಿ ಹಾಕುತ್ತಾರೆ ಎಂದರು. ಕೆಲವು ವಿಷಯಗಳು ಮೀಡಿಯಾದಲ್ಲಿ ಬರುವುದಿಲ್ಲ. ಹಾಗಂತ ನಾವು ಉತ್ತಮ ಕೆಲಸಗಳನ್ನು ಮಾಡುವುದು ನಿಲ್ಲಿಸಬಾರದು. ಆ ಹಳ್ಳಿಗಳಿಗೆ ಈಗಲೂ ವಿದ್ಯುತ್ ಇದೆ. ” ಎಂದು ಮೋದಿಯವರು ಸಂದರ್ಶನದಲ್ಲಿ ಹೇಳಿದರು.

ಒಟ್ಟಿನಲ್ಲಿ ಮುಖ್ಯವಾಹಿನಿಗಳ ಮಾಧ್ಯಮಗಳನ್ನು ದೂರ ಇಟ್ಟು ಮೋದಿಯವರು ಪ್ರಧಾನಿಯಾಗಿ ಈಗಾಗಲೇ 10 ವರ್ಷ ಕಳೆದಿದ್ದಾರೆ. ಚುನಾವಣೆಯ ಸಂದರ್ಭದಲ್ಲಿ ಕೆಲವು ಪ್ರಮುಖ ಮಾಧ್ಯಮ ಸಂಸ್ಥೆಗಳಿಗೆ ಸಂದರ್ಶನ ನೀಡಿದ್ದಾರೆ. ಇತ್ತೀಚಿಗಷ್ಟೇ ಗುಜರಾತ್ ನ ಗಾಂಧಿ ನಗರದಲ್ಲಿ ಮತ ಚಲಾಯಿಸಿ ಹೊರಗೆ ಬಂದ ಬಳಿಕ ಮಾಧ್ಯಮಗಳೆದುರು ಒಂದಿಷ್ಟು ಮಾತನಾಡಿದ್ದರು. ಆಗ ಅಮಿತ್ ಶಾ ಕೂಡ ಅವರ ಪಕ್ಕ ನಿಂತಿದ್ದರು.

ಮೋದಿಯವರು ಪ್ರೆಸ್ ಮೀಟ್ ಮಾಡಲಿ, ಬಿಡಲಿ ಅವರು ಯಾವತ್ತೂ ಸುದ್ದಿಯಲ್ಲಿ ಇದ್ದೇ ಇರುತ್ತಾರೆ. ಕೆಲವು ರಾಜಕಾರಣಿಗಳು ಚಲಾವಣೆಯಲ್ಲಿ ಇರಬೇಕು ಎನ್ನುವ ಕಾರಣಕ್ಕೆ ಸುದ್ದಿಗೋಷ್ಟಿ ಮಾಡುತ್ತಾರೆ. ಸುದ್ದಿಗೋಷ್ಟಿ ಮಾಡದೇ ಇದ್ದರೆ ತಾವು ಎಲ್ಲಿಯಾದರೂ ಅಪ್ರಸ್ತುತರಾಗುತ್ತೇವಾ ಎನ್ನುವ ಕಾರಣಕ್ಕೆ ಕೆಲವರು ಏನಾದರೂ ವಿಷಯ ಹಿಡಿದುಕೊಂಡು ಸುದ್ದಿಗೋಷ್ಟಿ ಮಾಡುತ್ತಾರೆ. ಆದರೆ ಮೋದಿ ಹಾಗಲ್ಲ. ಸುದ್ದಿಗೋಷ್ಟಿಯಿಂದ ದೂರ ಇದ್ದುಕೊಂಡೇ ಸುದ್ದಿಯಲ್ಲಿ ಇರುತ್ತಾರೆ.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 3
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 4
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ

  • Privacy Policy
  • Contact
© Tulunadu Infomedia.

Press enter/return to begin your search