• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ನದಿ ಜೋಡಣೆಗೆ ಕೇಂದ್ರ ಸರಕಾರದಿಂದ 5.5 ಲಕ್ಷ ಕೋಟಿ ರೂ.

TNN Correspondent Posted On September 1, 2017
0


0
Shares
  • Share On Facebook
  • Tweet It

ದೆಹಲಿ: ದೇಶದಲ್ಲಿ ನಿರಂತರವಾಗಿ ಉಂಟಾಗುತ್ತಿರುವ ಬರ, ನೆರೆ ಪ್ರವಾಹ ತಡೆಗಟ್ಟಲು ಮತ್ತು ರೈತರ ಸಂಕಷ್ಟ ನೀಗಿಸಲು ಕೇಂದ್ರ ಸರಕಾರ ನದಿ ಜೋಡಣೆ ಯೋಜನೆಗೆ 5.5  (5,55,593) ಲಕ್ಷ ಕೋಟಿ ರೂಪಾಯಿ ನೀಡಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ಈ ಮೂಲಕ ಲಕ್ಷಾOತರ ಹೆಕ್ಟೆೆರ್ ಜಮೀನಿಗೆ ನೀರಾವರಿ ಒದಗಿಸಲು ಕೇಂದ್ರ ಸರಕಾರ ಯೋಜನೆ ರೂಪಿಸಿದೆ. ಈ ಬೃಹತ್ ಯೋಜನೆಯಲ್ಲಿ 60 ನದಿಗಳನ್ನು ಜೋಡಿಸುವ ಕುರಿತು ಸಿದ್ಧತೆ ನಡೆದಿದ್ದು, ರೈತರನ್ನು ಮಳೆ ಆಶ್ರಯದಿಂದ ಹೊರ ತಂದು ಎಲ್ಲರಿಗೂ ನೀರಾವರಿ ಒದಗಿಸುವ ಯೋಜನೆ ಇದಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ವಿಶೇಷ ಆಸಕ್ತಿ ಈ ಯೋಜನೆಯಲ್ಲಿದೆ. ಈ ಮೂಲಕ ಸಾವಿರಾರು ಮೇಗಾವ್ಯಾಟ್ ವಿದ್ಯುತ್ ಉತ್ಪಾದನೆಯನ್ನು ಮಾಡುವ ಯೋಚನೆಯೂ ಇದೆ. ಪರಿಸರವಾದಿಗಳ, ಪ್ರಾಣಿ ದಯಾ ಸಂಘಗಳ ಮತ್ತು ಜಮೀನ್ದಾರ್ರ ವಿರೋಧದ ಮಧ್ಯೆೆಯೂ ಕೇಂದ್ರ ಸರಕಾರ ಈ ಯೋಜನೆ ಕೈಗೊಳ್ಳಲು ಮುಂದಾಗಿದೆ.
ಆರಂಭದಲ್ಲಿ ನದಿ ಜೋಡಣೆ ಕಾಮಗಾರಿಗಳನ್ನು ಬಿಜೆಪಿ ಅಧಿಕಾರದಲ್ಲಿರುವ ಮಧ್ಯ ಪ್ರದೇಶ, ಉತ್ತರ ಪ್ರದೇಶ, ಗುಜರಾತ್, ಮಹಾರಾಷ್ಟ್ರ ಮತ್ತು ಬಿಹಾರದಲ್ಲಿ ಆರಂಭಿಸಲು ಚಿಂತನೆ ನಡೆಸಲಾಗಿದೆ. ನಂತರದ ದಿನಗಳಲ್ಲಿ ರಾಷ್ಟ್ರಾದ್ಯಂತ ವಿಸ್ತರಿಸಲು ಕೇಂದ್ರ ಸರಕಾರ ಚಿಂತನೆ ನಡೆಸಿದೆ. ಪ್ರಮುಖವಾಗಿ ಹಲವು ನದಿಗಳಿಗೆ ಡ್ಯಾಮ್ ನಿರ್ಮಿಸುವ ಯೋಜನೆ ಇದ್ದು, ಇದು ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದೆ. ನದಿ ಜೋಡಣೆಯ ನೆಪದಲ್ಲಿ ಪರಿಸರಕ್ಕೆೆ ಭಾರಿ ಹಾನಿಯಾಗಲಿದೆ ಎಂದು ಪರಿಸರವಾದಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!

  • Privacy Policy
  • Contact
© Tulunadu Infomedia.

Press enter/return to begin your search