• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಗಿ ಬುಲ್ಡೋಜರ್ ಬಗ್ಗೆ ಮೋದಿ ಮಾತು!

Tulunadu News Posted On May 17, 2024
0


0
Shares
  • Share On Facebook
  • Tweet It

ಒಂದು ವೇಳೆ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ ರಾಮ ಮಂದಿರದ ಮೇಲೆ ಬುಲ್ಡೋಜರ್ ಏರಿಸಲು ಕೂಡ ಅವು ಹೇಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅವರು ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ನಡೆದ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಈ ಎರಡೂ ಪಾರ್ಟಿಗಳು ಬುಲ್ಡೋಜರ್ ಯಾವುದರ ಮೇಲೆ ಓಡಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಬಳಿ ಟ್ಯೂಶನ್ ತೆಗೆದುಕೊಳ್ಳಬೇಕು ಎಂದು ಮೋದಿ ಕೀಚಾಯಿಸಿದ್ದಾರೆ. ವಿಪಕ್ಷದ ಮೈತ್ರಿಕೂಟ ದೇಶದ ರಾಜಕೀಯದಲ್ಲಿ ಈಗಾಗಲೇ ಅಸ್ಥಿರತೆಯನ್ನು ತೋರಿಸಿವೆ ಮತ್ತು ಚುನಾವಣೆಯ ಪ್ರತಿ ಹಂತ ಆಗುತ್ತಿದ್ದಂತೆ ಅದು ತರಗೆಲೆಯಂತೆ ಬಿದ್ದು ಹೋಗುತ್ತಿವೆ ಎಂದು ಟೀಕಿಸಿದರು. ಎನ್ ಡಿಎ ಮೈತ್ರಿಕೂಟ ಮೂರನೇ ಬಾರಿ ಇನ್ನಷ್ಟು ಬಲದೊಂದಿಗೆ ಅಧಿಕಾರಕ್ಕೆ ಮರಳಲಿದ್ದು, ಮುಂದಿನ ಅವಧಿಯಲ್ಲಿ ಬಡವರಿಗೆ, ಯುವ ಜನಾಂಗಕ್ಕೆ, ಮಹಿಳೆಯರಿಗೆ ಹಾಗೂ ಕೃಷಿಕರಿಗೆ ಇನ್ನಷ್ಟು ಸೌಲಭ್ಯ ನೀಡಲು ಬದ್ಧ ಎಂದು ತಿಳಿಸಿದರು.

ಸಮಾಜವಾದಿ ಪಕ್ಷದ ಹಿರಿಯ ನಾಯಕ ರಾಮ ನವಮಿಯ ದಿನ ರಾಮ ಮಂದಿರ ಅಪ್ರಯೋಜಕವಾಗಿರುವುದು ಎಂದು ಹೇಳಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಮ ಮಂದಿರದ ಬಗ್ಗೆ ಸುಪ್ರೀಂಕೋರ್ಟ್ ತೀರ್ಪನ್ನೇ ಉರುಳಿಸುವ ಮಟ್ಟಕ್ಕೆ ಹೋಗಲಿದೆ ಎಂದು ಮೋದಿ ಹೇಳಿದ್ದಾರೆ. ಕೆಲವು ಪಕ್ಷಗಳಿಗೆ ತಮ್ಮ ಕುಟುಂಬ ಮಾತ್ರ ಮುಖ್ಯ, ಎಸ್ ಪಿ- ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ರಾಮಲಲ್ಲಾ ಮತ್ತೆ ಟೆಂಟಿಗೆ ಹೋಗಬೇಕಾಗುತ್ತದೆ ಎಂದು ಮೋದಿ ತಿಳಿಸಿದ್ದಾರೆ.

ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಬುಲ್ಡೋಜರ್ ಬಾಬಾ ಎಂದೇ ಖ್ಯಾತಿ ಪಡೆದಿದ್ದು, ಅಪರಾಧಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ವ್ಯಕ್ತಿಗಳ ಮನೆ, ಕಟ್ಟಡಗಳ ಮೇಲೆ ಬುಲ್ಡೋಜರ್ ಏರಿಸುವ ಮೂಲಕ ಯುಪಿಯಲ್ಲಿ ಗಣನೀಯ ಪ್ರಮಾಣದಲ್ಲಿ ಅಪರಾಧಿಕ ಕೃತ್ಯಗಳನ್ನು ನಿಯಂತ್ರಣಕ್ಕೆ ತರುವಲ್ಲಿ ಸಫಲರಾಗಿದ್ದಾರೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search