• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಯೋಗಿ ಬುಲ್ಡೋಜರ್ ಬಗ್ಗೆ ಮೋದಿ ಮಾತು!

Tulunadu News Posted On May 17, 2024


  • Share On Facebook
  • Tweet It

ಒಂದು ವೇಳೆ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ ರಾಮ ಮಂದಿರದ ಮೇಲೆ ಬುಲ್ಡೋಜರ್ ಏರಿಸಲು ಕೂಡ ಅವು ಹೇಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅವರು ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ನಡೆದ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಈ ಎರಡೂ ಪಾರ್ಟಿಗಳು ಬುಲ್ಡೋಜರ್ ಯಾವುದರ ಮೇಲೆ ಓಡಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಬಳಿ ಟ್ಯೂಶನ್ ತೆಗೆದುಕೊಳ್ಳಬೇಕು ಎಂದು ಮೋದಿ ಕೀಚಾಯಿಸಿದ್ದಾರೆ. ವಿಪಕ್ಷದ ಮೈತ್ರಿಕೂಟ ದೇಶದ ರಾಜಕೀಯದಲ್ಲಿ ಈಗಾಗಲೇ ಅಸ್ಥಿರತೆಯನ್ನು ತೋರಿಸಿವೆ ಮತ್ತು ಚುನಾವಣೆಯ ಪ್ರತಿ ಹಂತ ಆಗುತ್ತಿದ್ದಂತೆ ಅದು ತರಗೆಲೆಯಂತೆ ಬಿದ್ದು ಹೋಗುತ್ತಿವೆ ಎಂದು ಟೀಕಿಸಿದರು. ಎನ್ ಡಿಎ ಮೈತ್ರಿಕೂಟ ಮೂರನೇ ಬಾರಿ ಇನ್ನಷ್ಟು ಬಲದೊಂದಿಗೆ ಅಧಿಕಾರಕ್ಕೆ ಮರಳಲಿದ್ದು, ಮುಂದಿನ ಅವಧಿಯಲ್ಲಿ ಬಡವರಿಗೆ, ಯುವ ಜನಾಂಗಕ್ಕೆ, ಮಹಿಳೆಯರಿಗೆ ಹಾಗೂ ಕೃಷಿಕರಿಗೆ ಇನ್ನಷ್ಟು ಸೌಲಭ್ಯ ನೀಡಲು ಬದ್ಧ ಎಂದು ತಿಳಿಸಿದರು.

ಸಮಾಜವಾದಿ ಪಕ್ಷದ ಹಿರಿಯ ನಾಯಕ ರಾಮ ನವಮಿಯ ದಿನ ರಾಮ ಮಂದಿರ ಅಪ್ರಯೋಜಕವಾಗಿರುವುದು ಎಂದು ಹೇಳಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಮ ಮಂದಿರದ ಬಗ್ಗೆ ಸುಪ್ರೀಂಕೋರ್ಟ್ ತೀರ್ಪನ್ನೇ ಉರುಳಿಸುವ ಮಟ್ಟಕ್ಕೆ ಹೋಗಲಿದೆ ಎಂದು ಮೋದಿ ಹೇಳಿದ್ದಾರೆ. ಕೆಲವು ಪಕ್ಷಗಳಿಗೆ ತಮ್ಮ ಕುಟುಂಬ ಮಾತ್ರ ಮುಖ್ಯ, ಎಸ್ ಪಿ- ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ರಾಮಲಲ್ಲಾ ಮತ್ತೆ ಟೆಂಟಿಗೆ ಹೋಗಬೇಕಾಗುತ್ತದೆ ಎಂದು ಮೋದಿ ತಿಳಿಸಿದ್ದಾರೆ.

ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಬುಲ್ಡೋಜರ್ ಬಾಬಾ ಎಂದೇ ಖ್ಯಾತಿ ಪಡೆದಿದ್ದು, ಅಪರಾಧಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ವ್ಯಕ್ತಿಗಳ ಮನೆ, ಕಟ್ಟಡಗಳ ಮೇಲೆ ಬುಲ್ಡೋಜರ್ ಏರಿಸುವ ಮೂಲಕ ಯುಪಿಯಲ್ಲಿ ಗಣನೀಯ ಪ್ರಮಾಣದಲ್ಲಿ ಅಪರಾಧಿಕ ಕೃತ್ಯಗಳನ್ನು ನಿಯಂತ್ರಣಕ್ಕೆ ತರುವಲ್ಲಿ ಸಫಲರಾಗಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search