• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರಜ್ವಲ್ ಬ್ಯಾಂಕ್ ಖಾತೆ ಸೀಝ್ ಮಾಡಲು ಎಸ್ ಐಟಿ ನಿರ್ಧಾರ!

Tulunadu News Posted On May 18, 2024
0


0
Shares
  • Share On Facebook
  • Tweet It

ಪೆನ್ ಡ್ರೈವ್ ಪ್ರಕರಣದ ಪ್ರಧಾನ ಆರೋಪಿ ಪ್ರಜ್ವಲ್ ರೇವಣ್ಣ ಸ್ವದೇಶಕ್ಕೆ ಬರುವುದನ್ನು ಮುಂದೂಡುತ್ತಿರುವ ಈ ಸಂದರ್ಭದಲ್ಲಿ ಅವರನ್ನು ಎಲ್ಲಾ ಕಡೆಗಳಿಂದಲೂ ಆರ್ಥಿಕವಾಗಿ ಕಟ್ಟಿ ಹಾಕಲು ವಿಶೇಷ ತನಿಖಾ ದಳ ಮುಂದಾಗಿದೆ. ಒಬ್ಬ ಆರೋಪಿ ತನಿಖೆಯನ್ನು ಎದುರಿಸಲು ಮುಂದಾಗದ ಪರಿಸ್ಥಿತಿಯಲ್ಲಿ ಅವರಿಗೆ ಇರುವ ಹಣಕಾಸಿನ ಮೂಲಗಳನ್ನು ಬಂದ್ ಮಾಡಿದರೆ ಆಗ ಆ ವ್ಯಕ್ತಿ ಬೇರೆ ದಾರಿ ಕಾಣದೇ ತಾನಾಗಿಯೇ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ಇದು ಬಹಳ ಹಳೆಯ ವಿಧಾನವಾದರೂ ಎಂದೆಂದಿಗೂ ಪರಿಣಾಮಕಾರಿಯಾಗಬಲ್ಲ ಸಾಧನವಾಗಿದೆ. ಈಗಾಗಲೇ ಪ್ರಜ್ವಲ್ ರೇವಣ್ಣನವರಿಗೆ ಸೇರಿದ ಎಲ್ಲಾ ಬ್ಯಾಂಕ್ ಖಾತೆಗಳ ಮಾಹಿತಿ ಪಡೆಯಲಾಗಿದ್ದು, ಅವರಿಗೆ ಸೇರಿದ ಬ್ಯಾಂಕ್ ಅಕೌಂಟ್ ಗಳನ್ನು ಫ್ರೀಝ್ ಮಾಡುವ ಪ್ರಕ್ರಿಯೆಗೆ ಅಧಿಕಾರಿಗಳು ತಯಾರಾಗಿದ್ದಾರೆ ಎನ್ನಲಾಗಿದೆ.

ಇನ್ನು ಪ್ರಜ್ವಲ್ ವಿದೇಶದಲ್ಲಿರುವುದರಿಂದ ಅವರ ಅಲ್ಲಿನ ಖರ್ಚಿಗೆ ಇಲ್ಲಿಂದ ಅವರ ಬ್ಯಾಂಕ್ ಖಾತೆಗೆ ಹಣ ಪಾವತಿಯಾಗಿರುವ ಸಾಧ್ಯತೆಗಳಿರುತ್ತವೆ. ಹಾಗೆ ಯಾರಾದರೂ ಹಣ ಹಾಕಿದ್ದಾರಾ ಎನ್ನುವುದನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಎಸ್ ಐಟಿಗೆ ಅಧಿಕೃತವಾಗಿ ಲಭ್ಯವಿರುವ ಮಾಹಿತಿಯ ಪ್ರಕಾರ ಪ್ರಜ್ವಲ್ ಏಳು ಖಾತೆಗಳನ್ನು ಹೊಂದಿದ್ದು, ಅದರ ಸಂಪೂರ್ಣ ಮಾಹಿತಿಯನ್ನು ಅಧಿಕಾರಿಗಳು ಕಲೆ ಹಾಕುತ್ತಿದ್ದಾರೆ. ಪ್ರಜ್ವಲ್ ತಲೆಮರೆಸಿಕೊಂಡು ತಿಂಗಳಾಗುತ್ತಾ ಬಂದಿರುವುದರಿಂದ ಈ ಕ್ರಮಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ.

ಪೆನ್ ಡ್ರೈವ್ ಪ್ರಕರಣ ದಿನಕ್ಕೊಂದು ತಿರುವನ್ನು ಪಡೆದುಕೊಳ್ಳುತ್ತಿದ್ದು, ಸದ್ಯ ಪೆನ್ ಡ್ರೈವ್ ಹಂಚಿರುವ ಹಿಂದಿನ ಕಾಣದ ಕೈಗಳ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಪ್ರಕರಣ ಗರಿಗೆದರುತ್ತಿದ್ದಂತೆ ಎಪ್ರಿಲ್ 26 ರಂದು ರಾಜ್ಯದಲ್ಲಿ ಮೊದಲ ಹಂತದ ಮತದಾನದಂದು ವಿದೇಶಕ್ಕೆ ಹಾರಿರುವ ಪ್ರಜ್ವಲ್ ಯಾವಾಗ ಭಾರತಕ್ಕೆ ಮರಳುತ್ತಾರೆ ಎನ್ನುವ ಮಾಹಿತಿ ಯಾರ ಬಳಿಯೂ ಇಲ್ಲ. ಈಗಾಗಲೇ ಜರ್ಮನಿಯಿಂದ ರಿಟನ್ ಟಿಕೆಟ್ ಅವರು ಬುಕ್ ಮಾಡಿದ್ದರೂ ಅವರು ಅದನ್ನು ಬಳಸದೇ ಇರುವುದು ಮತ್ತಷ್ಟು ಊಹಾಪೋಹಾಕ್ಕೆ ಕಾರಣವಾಗಿದೆ. ಅವರಿಗೆ ಈಗಾಗಲೇ ಬ್ಲೂ ಕಾರ್ನರ್ ನೋಟಿಸ್ ಜಾರಿಗೊಳಿಸಲಾಗಿದೆ. ಇನ್ನೂ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿ ರೆಡ್ ಕಾರ್ನರ್ ನೋಟಿಸ್ ನೀಡಲು ಅಧಿಕಾರಿಗಳು ತಯಾರಿ ನಡೆಸಿದ್ದಾರೆ ಎನ್ನುವ ಮಾಹಿತಿ ದೊರಕಿದೆ.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search